ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್‌ ಹೆಸರಿಡಿ


Team Udayavani, Nov 28, 2019, 1:02 PM IST

bk-tdy-3

ಬಾಗಲಕೋಟೆ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್‌ರ ಹೆಸರಿಡುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಬಂಜಾರಾ ಸೇವಾ ಸಂಘದ ನೇತೃತ್ವದಲ್ಲಿ ಬಂಜಾರಾ ಸಮಾಜ ಬಾಂಧವರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಆಲ್‌ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಆರ್‌.ಎಂ. ರಾಠೊಡ ಮಾತನಾಡಿ, ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸುವ ಧಾವಂತದಲ್ಲಿ ಒಂದು ಸಮುದಾಯದ ಭಾವನೆಗೆ ಧಕ್ಕೆಉಂಟಾಗುತ್ತದೆ ಎಂಬುದನ್ನು ಲೆಕ್ಕಿಸದೇ,ಮಾದಿಹಾಳ ತಾಂಡಾ ಬಳಿ ಇದ್ದ ಬಂಜಾರಾ ಕುಲಗುರು ಶ್ರೀ ಸಂತ ಸೇವಾಲಾಲ ಮಹಾರಾಜರ ಹಾಗೂ ಮರಿಯಮ್ಮ ದೇವಿ ದೇವಸ್ಥಾನ ನೆಲಸಮಗೊಳಿಸಲಾಗಿದೆ. ಒಂದುಸಮಾಜದ ಕುಲಗುರುವಿನ ದೇವಸ್ಥಾನವನ್ನು ರಾತ್ರೋರಾತ್ರಿ ನೆಲಸಮಗೊಳಿಸಿ, ಆ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಕನಿಷ್ಠ ಸೌಜನ್ಯ ತೋರದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿಗೆ 569 ಎಕರೆ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಶೇ. 70 ಭೂಮಿ ಬಂಜಾರಾ ಸಮುದಾಯದ ರೈತರಿಗೆ ಸೇರಿದೆ. ನೂರಾರು ವರ್ಷಗಳ ಹಳೆಯ ದೇವಸ್ಥಾನ ನೆಲಸಮಗೊಳಿಸುವ ಮೂಲಕ ಸರ್ಕಾರ, ನಮ್ಮ ಸಮಾಜದ ಕುಲಗುರುವಿಗೆ ಅಪಚಾರ ಮಾಡಿದೆ. ಒಂದು ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಬಂಜಾರಾ ಸಮಾಜಕ್ಕೆ ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಬಂಜಾರಾ ಸಂಘಟನೆ ಪ್ರಮುಖರಾದ ವೆಂಕಟೇಶ ನಾಯಕ, ಕಲ್ಲು ಜಾಧವ, ಉಮೇಶ ರಾಠೊಡ, ನೀಲಾನಗರದ ಕುಮಾರ ಮಹಾರಾಜರು, ಸಮಾಜದ ಪ್ರಮುಖರಾದ ಡಾ|ಸಂತೋಷ ನಾಯಕ, ಡಾ|ಬಾಬುರಾಜೇಂದ್ರ ನಾಯಕ, ಶಂಕರ ದೊಡಮನಿ, ಬಲರಾಮ ಪವಾರ, ಶಿವಾನಂದ ರಾಠೊಡ, ರಮೇಶ ರಾಠೊಡ, ಗೋಪಾಲ ಚವ್ಹಾಣ, ರಮೇಶ ಚವ್ಹಾಣ, ನಾಗೇಶ ಲಮಾಣಿ, ರವಿ ಚವ್ಹಾಣ, ವಾಸುದೇವ ರಾಠೊಡ, ರವೀಂದ್ರ ಪವಾರ, ಮೋತಿಲಾಲ ರಾಠೊಡ, ಕುಮಾರ ಪಮ್ಮಾರ, ವಿನಾಶ ರಜಪೂತ, ಮಾಧವಿ ರಾಠೊಡ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.