ಕೆಎಚ್‌ಡಿಸಿ ನಿಗಮ ಹಾಗೂ ನೇಕಾರರ ಅಭಿವೃದ್ಧಿಗೆ ಹಲವಾರು ಯೋಜನೆ : ಶಾಸಕ ಸಿದ್ದು ಸವದಿ


Team Udayavani, Jan 1, 2022, 2:56 PM IST

ಕೆಎಚ್‌ಡಿಸಿ ನಿಗಮ ಹಾಗೂ ನೇಕಾರರ ಅಭಿವೃದ್ಧಿಗೆ ಹಲವಾರು ಯೋಜನೆ : ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಕೈಮಗ್ಗ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಕೂಡಾ ಇದಕ್ಕೆ ಸ್ಪಂದಿಸಿದ್ದಾರೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಅವರು ರಬಕವಿ-ಬನಹಟ್ಟಿ ನಗರಗಳಲ್ಲಿ ಕೆಎಚ್‌ಡಿಸಿ ನೇಕಾರಿಗೆ, ಕೂಲಿ ಕಾರ್ಮಿಕರಿಗೆ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಕಿಟ್ ವಿತರಿಸಿ ಮಾತನಾಡಿದರು. ಆರ್ಥಿಕವಾಗಿ ಹಿಂದೂಳಿದ ಬಡವರಿಗೆ ಅನುಕೂಲವಾಗಿಲಿ ಎಂದು ಕರ್ನಾಟಕ ಸರಕಾರದ ಕಿಟ್‌ಗಳನ್ನು ಕಡು ಬಡವರಿಗೆ ನೀಡಲಾಗುತ್ತಿದೆ ಎಂದರು.

ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೆಎಚ್‌ಡಿಸಿ ಅಭಿವದ್ಧಿಗೆ ಏನು ಮಾಡಬೇಕು ಎಂದು 6-7 ನೂತನ ಯೋಜನೆಗಳನ್ನು ಕೈಗೊಂಡಿದ್ದೇವೆ. ಕೆಚ್‌ಡಿಸಿಯ 110 ಕೋಟಿ ಸಾಲವಿದ್ದು, ಇಲ್ಲಿಯವರೆಗೆ ನಮ್ಮದು 100 ಕೋಟಿ ಎಫ್‌ಡಿ ಇದ್ದು, ಅದನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಲು ತಿಳಿಸಿದ್ದು ಇದರಿಂದ ಬಡ್ಡಿ ಹಣದ ಉಳಿತಾಯವಾಗುತ್ತದೆ. ನೇಕಾರರ ಪಗಾರನ್ನು ಸರಕಾರವೇ ಭರಿಸಲು ಹೇಳಿದ್ದು, ಅದಕ್ಕೂ ಒಪ್ಪಿಕೊಂಡಿದ್ದಾರೆ. 40 ಕೋಟಿ ಹಾಘೂ 23 ಕೋಟಿಯ ಸಾಲವಿತ್ತು ಅದನ್ನು ಶೇರಾಗಿ ಪರಿವರ್ತಿಸಲು ಹೇಳಿದ್ದೇವೆ.  ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಜಿಓ ಆಗಲಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಕೆಎಚ್‌ಡಿಸಿ ನೇಕಾರರ 15% ಪಗಾರನ್ನು ಹೆಚ್ಚು ಮಾಡಿದ್ದು, ನಿರಂತರ ಉದ್ಯೋಗ ನೀಡುವತ್ತ ಕ್ರಮ ತೆಗೆದುಕೊಳ್ಳಲಾಗಿದೆ. ನಿರಂತರವಾಗಿ ಕಚ್ಚಾ ಮಾಲು ಪೂರೈಕೆಯಾಗುತ್ತಿದ್ದು ಬರುವಂತಹ ದಿನಗಳಲ್ಲಿ ಇನ್ನೂ 20% ಇಂದ 25% ರಷ್ಟು ವೇತನವನ್ನು ಜಿಓ ಆದ ನಂತರ ಹೆಚ್ಚಳ ಮಾಡಲಾಗುವುದು. ವಿದ್ಯಾವಿಕಾಸ ಬಟ್ಟೆ ವಿತರಣೆಯಿಂದ ಆಗಿರುವ ಸುಮಾರು 10 ಕೋಟಿ ರೂಪಾಯಿಗಳಲ್ಲಿ 5 ಕೋಟಿಗಳನ್ನು ಸರಿದೂಗಿಸಲು ಹಾಗೂ 6.5 ಕೋಟಿ ದಂಡ ಮರಳಿಸಲು ಸರಕಾರ ಒಪ್ಪಿಗೆ ನೀಡಿದೆ.

ಈಗಾಗಲೇ ಹಲವಾರು ನಿಗಮಗಳು ಪೆಟ್ರೋಲ ಬಂಕ್ ಸ್ಥಾಪಿಸಿ ಉತ್ತಮ ಆದಾಯ ಗಳಿಸುತ್ತಿದ್ದು ಅದೇ ರೀತಿ ನಮ್ಮ ನಿಗಮದಿಂದ ಸುಮಾರು 10ಕಡೆ ಪೆಟ್ರೋಲ್ ಬಂಕ್‌ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದ್ದು ಈಗಾಗಲೇ ಹುಬ್ಬಳಿಯಲ್ಲಿ ಒಂದು ಸ್ಥಾಪನೆ ಮಾಡುತ್ತಿದ್ದು, ಏಕಕಾಲಕ್ಕೆ 10 ಬಂಕ್‌ಗಳ ಬೇಡಿಕೆ ಇದ್ದು ಪರಿಶೀಲನೆ ಹಂತದಲ್ಲಿದ್ದು, 5-6 ತಿಂಗಳಲ್ಲಿ ಪ್ರಾರಂಭವಾಗುತ್ತವೆ ಎಂದರು.

ಜಿಎಸ್‌ಟಿ 5% ಸ್ವಾಗತ : ಜವಳಿ ಉದ್ದಿಮೆಗೆ ಮೊದಲಿನಂತೆ ಶೇ. 5 ರಷ್ಟು ತೆರಿಗೆಯನ್ನು ಸರಕಾರ ಮುಂದುವರೆಸಲು ತೀಮಾರ್ನಿಸಿದ್ದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಮಾನ್ಯ ಮುಖ್ಯ ಮಂತ್ರಿಗಳನ್ನು ಸರಕಾವನ್ನು ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಗಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಬಸವರಾಜ ತೆಗ್ಗಿ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಮಹಾದೇವ ಆಲಕನೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.