ಸಿದ್ಧರಾಮೇಶ್ವರ ಮನುಕುಲ ಆಸ್ತಿ
Team Udayavani, Feb 1, 2019, 10:30 AM IST
ಬೀಳಗಿ: ಹನ್ನೆರಡನೇ ಶತಮಾನದ ಕಲ್ಯಾಣ ಕ್ರಾಂತಿ ಕಾಲಘಟ್ಟದ ಶರಣ ಶಿವಯೋಗಿ ಸಿದ್ಧರಾಮೇಶ್ವರರು ಮನುಕುಲದ ಬಹುದೊಡ್ಡ ಆಸ್ತಿಯಾಗಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು. ತಾಲೂಕು ಆಡಳಿತ ಹಾಗೂ ತಾಪಂ ಸಹಯೋಗದಲ್ಲಿ ಮಿನಿ ವಿಧಾನಸೌಧ ಹೊರಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ಶರಣ ಶಿವಯೋಗಿ ಸಿದ್ಧರಾಮೇಶ್ವರರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ವಚನ ಸಾಹಿತ್ಯಕ್ಕೆ ಕೊಡುಗೆ: ಶಿವಯೋಗಿ ಸಿದ್ಧರಾಮೇಶ್ವರರು ಸುಮಾರು ಅರವತ್ತೆಂಟು ಸಾವಿರದಷ್ಟು ವಚನ ರಚಿಸುವ ಮೂಲಕ ವಚನ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜದ ಅಂಕು-ಡೊಂಕು ತಿದ್ದಲು ಈಗಲೂ ಸಿದ್ಧರಾಮೇಶ್ವರರ ವಚನ ಸಾಹಿತ್ಯ ದಾರಿದೀಪವಾಗಿದೆ. ಸಿದ್ಧರಾಮೇಶ್ವರರು ಸಮಾನತೆ ಹರಿಕಾರ ಹಾಗೂ ಶ್ರೇಷ್ಠ ಚಿಂತಕರಾಗಿದ್ದರು. ಹನ್ನೆರಡನೇ ಶತಮಾನದಲ್ಲಿಯೇ ಕೆರೆ-ಕಟ್ಟೆ, ಬಾವಿ ನಿರ್ಮಿಸುವುದಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಜೀವಜಲದ ಕುರಿತು ಜಾಗೃತಿ ಮೂಡಿಸಿದ ದೂರದೃಷ್ಟಿ ಅವರದು. ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹ ಹಾಗೂ ಅಂತರ್ಜಾತಿ ವಿವಾಹಕ್ಕೂ ಆದ್ಯತೆ ನೀಡುವ ಮೂಲಕ ಜಾತ್ಯತೀತ ವ್ಯವಸ್ಥೆಗೆ ಅಡಿಪಾಯ ಹಾಕಿದ್ದರು. ಇಂತಹ ಮಹನೀಯರ ಆದರ್ಶ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ರೂಪಿಸಬೇಕೆಂದು ಸಲಹೆ ನೀಡಿದರು.
ಸಾಹಿತಿ ಎಸ್.ಎಸ್. ಕರಿದುರ್ಗನ್ನವರ ಉಪನ್ಯಾಸ ನೀಡಿದರು. ನಂತರ ಬಡ ಮಕ್ಕಳಿಗೆ ನೋಟ್ಬುಕ್, ಪೆನ್ ವಿತರಿಸಲಾಯಿತು. ಚಿತ್ರದುರ್ಗದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಹುಚ್ಚಪ್ಪಯ್ಯನ ಮಠದ ಫಕ್ಕೀರಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಪಂ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಜಿಪಂ ಸದಸ್ಯ ಹನುಮಂತ ಕಾಖಂಡಕಿ, ಬಿಇಒ ಹನುಮಂತಗೌಡ ಮಿರ್ಜಿ, ಸಿಪಿಐ ರವಿಚಂದ್ರ ಡಿ.ಬಿ ಇದ್ದರು. ಗ್ರೇಡ್-2 ತಹಶೀಲ್ದಾರ್ ಸ್ವಾಗತಿಸಿದರು. ವಿಠ್ಠಲ ಹಿರೇನಿಂಗಪ್ಪನವರ ನಿರೂಪಿಸಿದರು. ಗುರುರಾಜ ಲೂತಿ ವಂದಿಸಿದರು.
ಭವ್ಯ ಮೆರವಣಿಗೆ
ಹುಚ್ಚಪ್ಪಯ್ಯನ ಕಟ್ಟೆಯಿಂದ ಮಿನಿ ವಿಧಾನಸೌಧದ ಮುಖ್ಯ ವೇದಿಕೆವರೆಗೆ ನೂರಾರು ಸುಮಂಗಲೆಯರ ಕುಂಭಮೇಳ, ವಾದ್ಯ ವೈಭವಗಳೊಂದಿಗೆ ಸಾರೋಟದಲ್ಲಿ ಚಿತ್ರದುರ್ಗದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ನಗರದ ಹುಚ್ಚಪ್ಪಯ್ಯನ ಮಠದ ಫಕ್ಕೀರಯ್ಯ ಸ್ವಾಮೀಜಿ ಅವರ ಭವ್ಯ ಮೆರವಣಿಗೆ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು