ಕುರಿ ಸಂತೆ ಬಂದ್‌: ವ್ಯಾಪಾರಸ್ಥರ ಪರದಾಟ


Team Udayavani, Dec 29, 2019, 11:27 AM IST

bk-tdy-1

ಅಮೀನಗಡ: ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಶನಿವಾರ ನಡೆಯಬೇಕಿದ್ದ ಕುರಿ ಸಂತೆ ಬಂದ್‌ ಮಾಡಿದ್ದರಿಂದ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವ್ಯಾಪಾರಸ್ಥರು, ಕುರಿ ಮಾಲೀಕರು ಪರದಾಡುವಂತಾಯಿತು.

ರಾಜ್ಯಮಟ್ಟದಲ್ಲೇ ಹೆಸರುವಾಸಿಯಾಗಿರುವ, ಶತಮಾನ ಕಂಡ ಪಟ್ಟಣದ ಕುರಿ ಸಂತೆಯಲ್ಲಿ ಕಳೆದ ಶನಿವಾರ ಡಿ. 21ರಂದು ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ತಾಲೂಕು ಆಡಳಿತ ಮಂಡಳಿ ಹಾಗೂ ಪೊಲೀಸ್‌ ಇಲಾಖೆ ಒಂದು ದಿನದ ಮಟ್ಟಿಗೆ ಕುರಿ ಸಂತೆ ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಮಾಹಿತಿ ಇಲ್ಲದೆ ಬಂದಿದ್ದ ರಾಜ್ಯದ ವಿವಿಧ ಭಾಗದ ವ್ಯಾಪರಸ್ಥರು ತೀವ್ರ ತೊಂದರೆ ಅನುಭವಿಸಿದರು.

ವ್ಯವಹಾರ ಸ್ಥಗಿತ: ಪ್ರತಿ ಶನಿವಾರ ಕೋಟ್ಯಂತರ ರೂ. ವ್ಯವಹಾರವಾಗುವ ಕುರಿ ಸಂತೆ ಮತ್ತು ದನದ ಸಂತೆ ಕ್ಷುಲಕ್ಕ ಕಾರಣಕ್ಕೆ ಬಂದ್‌ ಆದ ಹಿನ್ನೆಲೆಯಲ್ಲಿ ಶನಿವಾರ ಕುರಿ ಮತ್ತು ದನದ ಸಂತೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ಸ್ಥಗಿತಗೊಂಡಿತ್ತು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವ್ಯಾಪಾರಸ್ಥರು ಪಟ್ಟಣದ ಹೊರ ವಲಯದ ರಕ್ಕಸಗಿ, ಬೇವಿನಮಟ್ಟಿ, ಸೂಳೇಭಾವಿ ಸೇರಿದಂತೆ ವಿವಿಧ ರಸ್ತೆಯ ಪಕ್ಕದಲ್ಲಿ ನಿಂತು ಸಣ್ಣ ಪ್ರಮಾಣದಲ್ಲಿ ಸಂತೆ ಮಾಡಿದ್ದು ಕಂಡು ಬಂತು.ಅಷ್ಟೆ ಅಲ್ಲದೇ ದೂರದಿಂದ ಬಂದಿದ್ದ ವ್ಯಾಪಾರಸ್ಥರು ಸಂತೆ ಬಂದ್‌ ಮಾಡಿದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಬಿಕೋ ಎಂದ ಸಂತೆ: ಪ್ರತಿ ಶನಿವಾರ ಸಾವಿರಾರು ಜನರಿಂದ ತುಂಬಿ ತುಳುಕುತ್ತಿದ್ದ ಕುರಿ ಸಂತೆ ಮತ್ತು ದನದ ಸಂತೆ ಬಂದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಅಷ್ಟೆ ಅಲ್ಲದೇ ನೂರಾರು ಜನರ ಹೋಟೆಲ್‌ಗ‌ಳು ಕೂಡಾ ಬಂದ್‌ ಆಗಿದ್ದವು. ಆದರೆ ದನದ ಸಂತೆಯಲ್ಲಿ ಕೆಲವು ಹೋಟೆಲ್‌ ಗಳು ತೆರೆದಿದ್ದವು. ಅಲ್ಲಿಯೂ ಕೂಡಾ ಸಂತೆ ಬಂದ್‌ ಮಾಡಿದ ನಂತರ ಕೆಲವು ಅಂಗಡಿಕಾರರ ತಿಂಡಿ ತಿನಿಸುಗಳು ಹಾಗೆ ಉಳಿದಿದೆ. ಇದರಿಂದ ಅವರ ಮುಖದಲ್ಲಿ ನಿರಾಸೆ ಭಾವ ಮೂಡಿತ್ತು. ಅಮೀನಗಡ ಪಟ್ಟಣದ ಕುರಿ ಸಂತೆಯಲ್ಲಿ ಹಿಂದಿನ ಶನಿವಾರ ಡಿ. 21ರಂದು ನಡೆದ ಕೆಲವು ಅಹಿತಕರ ಘಟನೆಯಿಂದ ಮುಂಜಾಗ್ರತವಾಗಿ ಶಾಂತಿ ಕಾಪಾಡಲು ಡಿ.

28ರಂದು ಶನಿವಾರ ಒಂದು ದಿನ ಮಾತ್ರ ಬಂದ ಆಗಿದ್ದ ಕುರಿ ಸಂತೆಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಹಾಗೂ ಸ್ವಚ್ಚತೆ ಮಾಡಿ ರಾಜ್ಯ ಹೆದ್ದಾರಿಯಲ್ಲಿ ವ್ಯಾಪಾರಸ್ಥರು ಯಾವುದೇ ಕಾರಣಕ್ಕೂ ನಿಲ್ಲದೇ ಒಳಗೆ ನಿಂತು ಸಂತೆ ಮಾಡುವ ಹಾಗೆ ವ್ಯವಸ್ಥೆ ಮಾಡಿ ಪಟ್ಟಣದಲ್ಲಿ ಮೊದಲು ನಡೆಯುತ್ತಿದ್ದ ಸ್ಥಳದಲ್ಲಿಯೇ ಕುರಿ ಸಂತೆ ಮುಂದುವರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.