ಕುರಿ-ಟಗರು ಸಂತೆಯಲ್ಲಿ ವಹಿವಾಟು ಜೋರು

ಜವಾರಿ ತಳಿಗಳಿಗೆ ಭಾರೀ ಬೇಡಿಕೆ

Team Udayavani, May 3, 2022, 12:33 PM IST

10

ಕೆರೂರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ನೆರವೇರಿದ ಕುರಿ, ಟಗರು ಹಾಗೂ ಹೋತಗಳ ಸಂತೆಯಲ್ಲಿ ವ್ಯಾಪಾರ, ವಹಿವಾಟು ಜೋರಾಗಿದ್ದು ಕಂಡು ಬಂದಿತು. ಈದ ಉಲ್‌ ಫೀತ್ರ ಹಬ್ಬದ ಆಚರಣೆ ನಿಮಿತ್ತ ಕೆರೂರ ಸಂತೆಯಲ್ಲಿ ಮುಖ್ಯವಾಗಿ ಜವಾರಿ ತಳಿಗಳಾದ ಟಗರು, ಹೋತಗಳಿಗೆ ಭಾರೀ ಬೇಡಿಕೆ ಕಂಡು ಬಂದಿತು.

ಜವಾರಿ ಹಾಗೂ ಅಷ್ಟೇ ರುಚಿಕರ ಮಾಂಸಕ್ಕೆ ಹೆಸರಾದ ಉತ್ತರ ಕರ್ನಾಟಕ ಭಾಗದ ದಷ್ಟಪುಷ್ಟ ಟಗರು, ಗಂಡು ಮೇಕೆ ಗಾತ್ರ ಮತ್ತು ತೂಕಕ್ಕೆ ತಕ್ಕಂತೆ ಬೆಲೆಗಳಿಗೆ ಮಾರಾಟವಾದವು. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಮುಂತಾದ ಭಾಗಗಳಿಂದ ಕುರಿ ಸಂತೆಯಲ್ಲಿ ಮಾರಾಟಕ್ಕೆ ಬಂದಿದ್ದ ಟಗರು, ಹೋತಗಳು ಸುಮಾರು 30 ಸಾವಿರದಿಂದ ಹಿಡಿದು 45 ಸಾವಿರ ರೂ. ವರೆಗೆ ಪೈಪೋಟಿ ದರದಲ್ಲಿ ಮಾರಾಟವಾದವು ಎಂದು ಯುವ ವರ್ತಕ ಸಂಜು ಹಳಕಟ್ಟಿ ಸಂತೆಯ ವಹಿವಾಟು ವಿವರಿಸಿದರು.

ಇಲ್ಲಿನ ಜವಾರಿ ತಳಿಗಳನ್ನು ಕೊಂಡೊಯ್ಯಲು ಮಹಾರಾಷ್ಟ್ರದ ಪುಣೆ, ಸತಾರಾ, ಮುಂಬೈ ಮತ್ತು ಕೇರಳದ ಪಾಲಕ್ಕಾಡ, ತಮಿಳುನಾಡು, ಆಂಧ್ರಗಳಿಂದ ನೂರಾರು ಸಗಟು ವ್ಯಾಪಾರಸ್ಥರು, ದೊಡ್ಡ ದೊಡ್ಡ ವಾಹನಗಳೊಂದಿಗೆ ಖರೀದಿಗೆ ಆಗಮಿಸಿದ್ದು ಕಂಡು ಬಂದಿತು.

ಮುಖ್ಯವಾಗಿ ಇಲ್ಲಿನ ಕುರಿ, ಮೇಕೆ ಸಂತೆಯಲ್ಲಿ ಮುಸ್ಲಿಂರ ಪ್ರಮುಖ ಹಬ್ಬಗಳಾದ ಬಕ್ರೀದ್‌ ಹಾಗೂ ರಂಜಾನ ಹಬ್ಬಗಳಿಗೆ ಮುನ್ನ ಇಲ್ಲಿ ಸಿಗುವ ಜವಾರಿ ತಳಿಯ ರುಚಿಕರ ಟಗರು, ಗಂಡು ಮೇಕೆಗಳನ್ನು ಕೊಂಡೊಯ್ಯಲು ಕಾರು, ಮಿನಿ ಲಾರಿ, ಕ್ರೂಷರ್‌ ವಾಹನಗಳಲ್ಲಿ ಪರ ರಾಜ್ಯಗಳ ವರ್ತಕರು ತಂಡೋಪ ತಂಡವಾಗಿ ಆಗಮಿಸುವುದು ಸಾಮಾನ್ಯ ಸಂಗತಿಯಾಗಿದೆ ಎನ್ನುತ್ತಾರೆ ಸ್ಥಳೀಯ ವ್ಯಾಪಾರಿ ರಹಿಮಾನ ಸಾಬ್‌ ಧಾರವಾಡ.  

-ಜೆ.ವಿ. ಕೆರೂರ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.