ನೀರು-ಆಹಾರಕ್ಕಾಗಿ ಕುರಿಗಾಹಿಗಳ ಅಲೆದಾಟ

ಭೂಮಿಗಳಲ್ಲಿ ನೀರಿನ ಅಭಾವ | ಹೆಚ್ಚುತ್ತಿರುವ ಬಿಸಿಲಿನ ತಾಪ | ಗುಡಿಮೆಂಚಿ ಕೆರೆ ನೀರೇ ಆಸರೆ

Team Udayavani, May 9, 2021, 3:23 PM IST

jhjgyty

ವರದಿ : ಶಂಕರ ಹೂಗಾರ

ಶಿರೂರ: ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿನ ಕುರಿ ಆಡುಗಳನ್ನು ನಂಬಿ ಸಾಕುವ ಮೂಲಕ ಜೀವನ ಸಾಗಿಸುವ ಕುರಿಗಾರರ ಜೀವನ ಕಷ್ಟಕರವಾಗಿದೆ.

ಬೇಸಿಗೆಯಲ್ಲಿ ಅಲೆದಾಟವಂತೂ ದೊಡ್ಡ ಶಿಕ್ಷೆಯಂತೆ ಕಾಡುತ್ತಿದೆ. ಶಿರೂರ, ನೀಲಾನಗರ, ಬೆನಕಟ್ಟಿ ಗ್ರಾಮಗಳ ಕುರಿಗಾರರು ನಿತ್ಯ ತಮ್ಮ ಕುರಿಗಳಿಗೆ ಕುಡಿಯುವ ನೀರಿನ ಅಭಾವ, ಮೇವು-ಆಹಾರ ಸಿಗದೇ ಚಡಪಡಿಸುತ್ತಿದ್ದಾರೆ. ಬೆಳಗಾದರೆ ಎತ್ತಕಡೆ ಹೋಗಬೇಕೆಂದು ಚಿಂತಿತರಾಗುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಆತಂಕ ಪಡುತ್ತಿದ್ದಾರೆ.

ಶಿರೂರ, ನೀಲಾನಗರ ಭಾಗದಲ್ಲೇ ಸುಮಾರು 60ಕ್ಕೂ ಹೆಚ್ಚು ಕುರಿ ಹಿಂಡುಗಳಿವೆ. ಗುಡ್ಡಗಾಡು ಪ್ರದೇಶದ ಕೃಷಿ ಭೂಮಿಗಳಲ್ಲಿ ಅಲ್ಪಸ್ವಲ್ಪ ಮಳೆಯಿಂದ ಹುಲ್ಲಿನ ಮೇವು ಸಾಗಿದರೆ, ಗ್ರಾಮದ ಐತಿಹಾಸಿಕ ಎರಡು ಕೆರೆಗಳಲ್ಲಿ ಸದ್ಯದ ಮಟ್ಟಿಗೆ ನೀರಿನ ಕೊರತೆ ಇಲ್ಲ. ಆದರೆ, ಕೃಷಿ ಭೂಮಿಯಲ್ಲಿನ ಭೋಸರೆಡ್ಡಿ ಕೆರೆ, ಶಿವನಕೆರೆ, ಕಕ್ಕಿಹಳ್ಳ ಸ್ವಲ್ಪವೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ನೀರು ಕುಡಿಯಲು ಯೋಗ್ಯವಾಗಿಲ್ಲ. ನಿತ್ಯವೂ ನೀರಿಗಾಗಿ ದೂರದಿಂದ ಬಂದು ಊರಿನ ಎರಡು ಕೆರೆಗಳಿಗೆ ಬಂದು ಕುರಿಗಳು ನೀರಿನ ದಾಹ ತೀರಿಸಿಕೊಳ್ಳುವಂತಾಗಿದೆ. ಕೆಲ ಕಡೆ ಕುರಿಗಾರರು ನಿತ್ಯ ನೀರು, ಆಹಾರಕ್ಕಾಗಿ ಸುಡುವ ಬಿಸಿಲಿನ ನಡುವೆ ಐದಾರು ಕಿ.ಮೀ. ದೂರ ಹೋಗಿ ಬರಬೇಕಾದ ಪರಿಸ್ಥಿತಿ ಇದೆ. ಎತ್ತ ಹೋದರೂ ಹುಲ್ಲು-ಮೇವಿನ ಕೊರತೆ ಕಾಡುತಿದ್ದು, ಕೆಲ ಕುರಿಗಾರರು ತಮ್ಮ ಕುರಿಗಳನ್ನು ಮಾರಲು ಮುಂದಾಗಿದ್ದಾರೆ.

ಗುಡಿಮೆಂಚಿ ಕೆರೆ ನೀರು: ಈ ಹಿಂದೆ ಸ್ಥಳೀಯ ಗ್ರಾಪಂನವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ 2016-17ನೇ ಸಾಲಿನ ಬರಪರಿಹಾರ ಯೋಜನೆಯಲ್ಲಿ ಪೈಪ್‌ ಲೈನ್‌ ಮೂಲಕ ಗುಡಿಮೆಂಚಿ ಕೆರೆಗೆ ನೀರು ಹರಿಸಿದ್ದಾರೆ. ಇದರಿಂದ ಈ ಭಾಗದ ಜನರಿಗೆ ಕೃಷಿ ಭೂಮಿಗೆ ತೆರಳುವ ಜಾನುವಾರುಗಳಿಗೆ ಜೀವಜಲವಾಗಿದೆ. ಬೇಸಿಗೆ ಸಮಯದಲ್ಲಿ ಕೃಷಿ ಭೂಮಿಯಲ್ಲಿನ ಆಯ್ದಭಾಗಗಳಲ್ಲಿ ನೀರಿನ ದೋಣಿಗಳು ಹೆಚ್ಚು ಅನುಕೂಲವಾಗುತ್ತದೆ ಎನ್ನುತ್ತಾರೆ ಕುರಿಗಾರ ರಾಮಣ್ಣ ನೆರಕಿ.

ಹಸಿಮೇವು ಸಿಗದೇ ಬಿಸಿಲಿನ ತಾಪದಿಂದ ಒಣಹುಲ್ಲು ತಿನ್ನುವುದರಿಂದ ಜಾನುವಾರುಗಳ ಆರೋಗ್ಯ ಹದಗೆಡುವುದರ ಜತೆಗೆ ಕೆಲವೊಮ್ಮೆ ಗರ್ಭಪಾತಗಳಾದ ಉದಾಹರಣೆಗಳಿವೆ ಎಂದು ಇನ್ನೊಬ್ಬ ಕುರಿಗಾರ ನಿಂಗಪ್ಪ ಹಿರೇಕುಂಬಿ ನೊಂದು ಹೇಳುತ್ತಾರೆ. ಕೆಲವೊಮ್ಮೆ ಹಾಲಿನ ಅಭಾವವೂ ಕಂಡುಬರುವುದರಿಂದ ಕಷ್ಟ ಎದುರಾಗಿದೆ.

ಕುರಿಗಾರರು ಶಿರೂರಿನ ಭೋಸರೊಡ್ಡಿ ಕೆರೆ ಹತ್ತಿರ, ಕಕ್ಕಿಹಳ್ಳ ಹತ್ತಿರ, ಆರಿಹಳ್ಳದ ಹತ್ತಿರ, ಎರಿಭೂಮಿ, ಕೋಳಿವಾರಿ, ಶಿವನಕೆರೆ ಹತ್ತಿರ ಕುರಿದೊಡ್ಡಿ ನಿರ್ಮಿಸಿಕೊಂಡಿದ್ದಾರೆ. ಕೆಲವರು ತೋಟದ ರೈತರ ಮನವೊಲಿಸಿ ನೀರು ಕುಡಿಸುವ ವ್ಯವಸ್ಥೆ ಕಲ್ಪಿಸಿಕೊಂಡಿದ್ದಾರೆ. ನಿತ್ಯ ಕಿಲೋಮೀಟರಗಟ್ಟಲೆ ಸುತ್ತಿದರೂ ಆಹಾರ ಸಿಗುತ್ತಿಲ್ಲ. ಕುರಿಮಾಂಸ, ಚರ್ಮ, ಉಣ್ಣೆ, ಹೀಗೆ ಕುರಿ ಸಾಗಾಣಿಕೆ ಆದಾಯದ ಮೂಲವಾಗಿದೆ. ಸರಕಾರ ಕುರಿಗಾರರ ನೆರವಿಗೆ ಬರಬೇಕಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.