ಶಿರೂರ:ಹಂದಿಗಳ ಕಾಟದಿಂದ ಬೆಳೆ ನಾಶ- ರೈತ ಕಂಗಾಲು


Team Udayavani, Mar 13, 2024, 1:39 PM IST

Udayavani Kannada Newspaper

ಉದಯವಾಣಿ ಸಮಾಚಾರ
ಶಿರೂರ: ಪಟ್ಟಣದಿಂದ ನೀಲಾನಗರಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಕೃಷಿಭೂಮಿಯಲ್ಲಿನ ಬೆಳೆಗಳಿಗೆ ಹಂದಿ (ಕಾಡಹಂದಿಗಳ) ಕಾಟದಿಂದ ಬೆಳೆಹಾನಿಯಾಗಿದ್ದು ಇದರಿಂದ ರೈತರು ಕಂಗಾಲಾಗಿದ್ದಾರೆ.

ಒಂದು ವರ್ಷದಿಂದ ಈ ಹಂದಿಗಳ ಕಾಟದಿಂದ ರೈತರು ಬೇಸತ್ತು ಹೋಗಿದ್ದು, ಭೂಮಿಯಲ್ಲಿನ ತೋಗರಿ, ಜೋಳ, ಕಡಲೆ, ಶೇಂಗಾ, ಕಬ್ಬು ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಈ ಕುರಿತು ರೈತರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಪರಿಹಾರವು ಮರೀಚಿಕೆಯಾಗಿದೆ. ಒಂದೊದು ಭಾರಿ ಭೂಮಿಗೆ ಬಿತ್ತಿದ ಬೀಜಗಳನ್ನು ಸಹ ತಿಂದು ಹಾಕಿರುವ ಉದಾಹರಣೆಗಳಿವೆ.

ರಾತ್ರಿ ಕಾವಲು ಕಾಯುತ್ತಿರುವ ರೈತರು: ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ನಾಯಿಗಳೊಂದಿಗೆ ರೈತರು ರಾತ್ರಿಇಡಿ ನಿದ್ದೆಗೆಟ್ಟು ಕಾವಲುಕಾಯುವಂತಾಗಿದೆ. ನಿತ್ಯ ರಾತ್ರಿ ಇದೊಂದು ಕೆಲಸವಾಗಿದೆ. ಸಾವಿರಾರು ಸಾಲ ಮಾಡಿ ಬಿತ್ತನೆ ಮಾಡಿದ ಕಾಡಹಂದಿಗಳ ಪಾಲಾಗುತ್ತಿದೆ. ಗುಡ್ಡದಿಂದ ರಾತ್ರಿ ಏಕಾಏಕಿ 50ಕ್ಕೂ ಹೆಚ್ಚು ಇರುವ ಹಂದಿಗಳ ಗುಂಪು ಕೃಷಿಭೂಮಿಗಳಿಗೆ ದಾಳಿ ಮಾಡುತ್ತಿದ್ದು, ಸದ್ಯ ರಾಶಿಗೆ ಬಂದಿರುವ ಶೇಂಗಾ ಬೆಳೆ ಹಂದಿಗಳ ಪಾಲಾಗುತ್ತಿದೆ. ಒಮ್ಮೊಮ್ಮೆ ಜನರ ಮೇಲೆ ಕಾಡಹಂದಿಗಳು ದಾಳಿ ಮಾಡಿವೆ ಎನ್ನುತ್ತಾರೆ ರೈತರು.

ಅಧಿಕಾರಿಗಳು ರಕ್ಷಣೆ ಮಾಡಿ: ಅರಣ್ಯ ಇಲಾಖೆ
ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟವನ್ನು ಅರಿತು ಶಾಶ್ವತವಾದ ಸಮಸ್ಯೆಗೆ ಮುಂದಾಗಿ ರೈತರ ಬೆಳೆ ರಕ್ಷಣೆ ಮಾಡಬೇಕೆಂದು ನೊಂದ ರೈತರು ಒತ್ತಾಯಿಸಿದ್ದಾರೆ.

ಕಾಡಹಂದಿಗಳ ಕಾಟದಿಂದ ರೈತರಿಗೆ ಕಷ್ಟವಾಗಿದ್ದು, ನಮ್ಮ ಕೃಷಿಭೂಮಿಗೆ ನಾವೇ ತೆರಳಲು ಹೆದರಿಕೆಯಾಗುತ್ತದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ನಾಶವಾದ ಬೆಳೆಗಳಿಗೆ ಪರಿಹಾರ ಕೊಡಬೇಕು. ಹಂದಿಗಳನ್ನು ಬೇರೆಡೆ ಕಳುಹಿಸಬೇಕು.
*ಮೊಹಮ್ಮದ ಹಳದೂರ, ಶಿರೂರ ರೈತ

ಈ ಹಂದಿ ಕಾಟದ ಸಮಸ್ಯೆಯನ್ನು ಹಾಗೂ ರೈತರಿಗಾದ ಬೆಳೆ ಹಾನಿಯ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಹಂದಿ ಕಾಟ ತಪ್ಪಿಸಲು ಕೆಲವೇ ದಿನಗಳಲ್ಲಿ ಶಿರೂರ ಗುಡ್ಡದಿಂದ ನೀಲಾನಗರದವರೆಗೂ ತಂತಿ ಬೇಲಿ ಹಾಕಲು ಕ್ರಮ ಕೈಗೊಂಡಿದ್ದು, ಹಾನಿಯಾದ ಬೆಳೆಗೆ ಪರಿಶೀಲನೆ ಮಾಡಿ ಪರಿಹಾರ ನೀಡುವುದಾಗಿ ತಿಳಿಪಡಿಸಿದ್ದಾರೆ.
*ಅಮೀನಸಾಬ ಗುಜರಾತಿ, ಗಸ್ತು ಅರಣ್ಯ ಪಾಲಕ ಶಿರೂರ

*ಶಂಕರ ಹೂಗಾರ

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.