Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
Team Udayavani, Apr 13, 2024, 1:33 PM IST
ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದು, “ಸಕ್ಕರೆ ಕಾರ್ಖಾನೆಗಳಿಂದ 50 ಲಕ್ಷ ಕೇಳಿದ್ದಾರೆ ಎಂಬ ಆರೋಪ ಸಾಬೀತು ಮಾಡಿದರೆ ನಾನು ರಾಜಕೀಯ ತ್ಯಜಿಸುವೆ” ಎಂದು ಸವಾಲು ಹಾಕಿದ್ದಾರೆ.
ಒಂದು ವೇಳೆ ಆರೋಪವನ್ನು ಸಾಬೀತು ಮಾಡಲು ವಿಫಲರಾದರೆ ಶಾಸಕ ಯತ್ನಾಳ್ ಅವರು ರಾಜಕೀಯ ಬಿಡಲಿ ಎಂದಿದ್ದಾರೆ.
ವಿಜಯಪುರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಸವಾಲೆಸೆದ ಸಚಿವ ಶಿವಾನಂದ, ಒಂದು ವೇಳೆ ಯತ್ನಾಳ್ ನನಗಿಂತ ಒಂದೇ ಮತ ಹೆಚ್ಚು ಪಡೆದರೂ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದರು.
ಸಹೋದರನ ಪುತ್ನ ಬಿಜೆಪಿಗೆ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ. ನನ್ನ ಪುತ್ರನೇ ಹೋದರೂ ನಾನು ಬೇಡ ಎನ್ನಲಾಗದು ಎಂದರು.
ಪಂಚಮಸಾಲಿ ಸಮಾಜದ ಮೀಸಲಾತಿ ಕುರಿತ ಪ್ತಶ್ನೆಗೆ ಉತ್ತರಿಸಲು ಸಚಿವ ಶಿವಾನಂದ ಅವರು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು