ಎಲ್ಲದರಲ್ಲೂ ಮಾದರಿ ಈ ಶಾಲೆ

ಕ್ವಿಜ್‌ ಸ್ಪರ್ಧೆ-ನಾಟಕಗಳ ಮೂಲಕ ವಿಷಯಗಳ ಮನವರಿಕೆಸಿದ್ದಾಪುರ ತೋಟದ ಶಾಲೆಗೆ ಸಂದಿವೆ ಹಲವು ಪ್ರಶಸ್ತಿ

Team Udayavani, Jan 23, 2020, 3:47 PM IST

23-January-15

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕದಾಗಿದ್ದರೂ ಹಲವು ಪ್ರಶಸ್ತಿಗಳ ಗರಿ ಮುಡಿಗೇರಿಸಿಕೊಂಡು ಮಾದರಿ ಶಾಲೆಯಾಗಿ ರೂಪುಗೊಂಡಿದೆ.

ಶಾಲಾ ಸುಧಾರಣಾ ಸಮಿತಿ ಸಹಕಾರ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಿಂದ ಹಿಡಿದು ಎಲ್ಲ ಶಿಕ್ಷಕರ ಶ್ರಮದ ಫಲವಾಗಿ ಸುಸಜ್ಜಿತ ಶಾಲೆಯಾಗಿ ಗಮನ ಸೆಳೆದಿದೆ. ಹೀಗಾಗಿ ಈ ಶಾಲೆಯಲ್ಲಿ ಸುಮಾರು 260 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮೊದಮೊದಲು ಗುಡಿಸಲಿನಿಂದಲೇ ಆರಂಭವಾದ ಈ ಶಾಲೆ ಇಂದು 10 ಕೋಣೆಗಳನ್ನು ಹೊಂದಿದ್ದು, ಪ್ರತಿ ಕೋಣೆಯೂ ಸಾಕಷ್ಟು ಗಾಳಿ, ಬೆಳಕು ಹೊಂದಿದೆ. ಶೌಚಾಲಯ ಇದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. 1600 ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ ಒಳಗೊಂಡಿದೆ.

ಶಾಲಾ ಆವರಣದಲ್ಲಿ ಶುಂಠಿ, ಅಜವಾನ, ಲವಂಗದಂತಹ ಸುಮಾರು 200ಕ್ಕೂ ಅಧಿ ಕ
ಔಷ ಧೀಯ ಗಿಡಮೂಲಿಕೆಗಳನ್ನು ಬೆಳೆಸಲಾಗಿದೆ. ಪ್ರಾಣಿ, ಪಕ್ಷಿಗಳಿಗೆಂದೇ ಕುಡಿಯುವ ನೀರು ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಆಕರ್ಷಿಸಲು ಶಿಕ್ಷಕರು
ಕ್ವಿಜ್‌ ಸ್ಪರ್ಧೆ, ನಾಟಕ ರೂಪದಲ್ಲಿ ಕೆಲವೊಂದಿಷ್ಟು ವಿಷಯಗಳನ್ನು ತೋರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಶಾಲೆಯ ಅನೇಕ ವಿದ್ಯಾರ್ಥಿಗಳು ರಾಜ್ಯ-ರಾಷ್ಟ್ರಮಟ್ಟದ ಖೋಖೋ ಸ್ಪರ್ಧೆ ಮತ್ತು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಸಿದ್ದಾಪುರ, ಕಾಡಪ್ಪ ಹೊಸೂರ, ಮಹಾಲಿಂಗಪ್ಪ
ಹಿಪ್ಪರಗಿ, ಹನಮಂತ ಗುಂಜಿಗಾಂವಿ, ಪಾಂಡು ಸಿದ್ದಾಪುರ, ಸತ್ಯಪ್ಪ ಸಿದ್ದಾಪುರ, ಮಲ್ಲಪ ಸಿದ್ದಾಪುರ, ಮುತ್ತಪ್ಪ ಕಣಬೂರ, ಶಿವಪ್ಪ ಗರಗದ, ಶ್ರೀಶೈಲ ಸಿದ್ದಾಪುರ, ರಾಮಪ್ಪ ಕುಂಬಾಳೆ ಅವರ ಜತೆಗೆ ಊರ ಹಿರಿಯರ ಸಹಾಯ-ಸಹಕಾರದಿಂದ ಶಾಲೆ ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಶಾಲಾ ಮುಖ್ಯಗುರು ಬಿ.ಆರ್‌.ಕರೆನ್ನವರ ಹಾಗೂ ಶಿಕ್ಷಕರಾದ ಕೆ.ಎಸ್‌.ಸಿದ್ನಾಳ, ಪಿ.ವೈ. ಘಂಟಿ, ಬಿ.ಡಿ.ಗದಗ, ಎಂ.ಎಚ್‌.ಗುಗ್ರಿ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ
ಶ್ರಮಿಸುತ್ತಿದ್ದು, ಕಲಿಕೆಯ ಹೊಸ ವಿಧಾನಗಳನ್ನು ಅಳವಡಿಸಿಕೊಂಡಿದ್ದಾರೆ. ಮಕ್ಕಳ ಮನಸ್ಥಿತಿ ಅರಿತು ಹೊಸ ಹೊಸ ವಿಧಾನಗಳ ಮೂಲಕ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗಿದ್ದಾರೆ.

ನಮ್ಮ ಶಾಲೆ ಇಷ್ಟೊಂದು ಅಭಿವೃದ್ಧಿ ಹೊಂದಲು ಎಸ್‌ಡಿಎಂಸಿ ಅಧ್ಯಕ್ಷರ-ಸದಸ್ಯರ ಸಹಕಾರ ಬಹಳ ಇದೆ. 1986ರಲ್ಲಿ ಗುಡಿಸಿಲಿನಿಂದ ಆರಂಭವಾದ
ಈ ಶಾಲೆ ಇಂದು ಸೌಕರ್ಯಗಳನ್ನು ಪಡೆದು ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಬಿ.ಆರ್‌.ಕರೆನ್ನವರ, ಮುಖ್ಯಗುರುಗಳು,
ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಬಂದಿವೆ ಹಲವು ಪ್ರಶಸ್ತಿ: ಈ ಶಾಲೆಯು ಎರಡು ಸಲ ಜಿಲ್ಲಾಮಟ್ಟದ ಹಸಿರು ಶಾಲೆ ಪ್ರಶಸ್ತಿ, ಎರಡು ಬಾರಿ ಜಿಲ್ಲಾ ಮಟ್ಟದ ಹಳದಿ ಶಾಲೆ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡ ಮಾಡುವ ಪರಿಸರ ಮಿತ್ರ ಹಸಿರು ಶಾಲೆ ಪ್ರಶಸ್ತಿ ಪಡೆದುಕೊಂಡ ಹೆಮ್ಮೆ ಇದೆ.

„ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.