ಸದ್ದು ಮಾಡಿದವರೆಲ್ಲ ಸಿದ್ದರಾಮಯ್ಯ ಶಿಷ್ಯರಲ್ಲ: ರಾಮಲಿಂಗಾ ರೆಡ್ಡಿ
Team Udayavani, Sep 17, 2018, 6:00 AM IST
ಬಾಗಲಕೋಟೆ: ಸಮ್ಮಿಶ್ರ ಸರ್ಕಾರವೆಂದ ಮೇಲೆ ಸಣ್ಣ ಪುಟ್ಟ ವೈಮನಸ್ಸು ಇರುತ್ತವೆ. ಅದನ್ನು ಬಗೆಹರಿಸಲಾಗಿದೆ.
ಅಸಮಾಧಾನಗೊಂಡವರೆಲ್ಲ ಸಿದ್ದರಾಮಯ್ಯ ಶಿಷ್ಯರಲ್ಲ. ಎಲ್ಲರೂ ಕಾಂಗ್ರೆಸ್ನವರು ಎಂದು ಮಾಜಿ ಸಚಿವ ರಾಮಲಿಂಗಾರಡ್ಡಿ ಹೇಳಿದರು.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಈಡೇರುವುದಿಲ್ಲ. ಸರ್ಕಾರ ಅಸ್ಥಿರಗೊಳಿಸುವ ಕಿಂಗ್ಪಿನ್ ಆರ್.ಅಶೋಕ ಎಂದು ಸಿಎಂ ಕುಮಾರಸ್ವಾಮಿ ಅವರೇ ಹೇಳಿದ ಮೇಲೆ ನಾನು ಬೇರೆ ಹೇಳಲು ಆಗಲ್ಲ. ಸಮ್ಮಿಶ್ರ ಸರ್ಕಾರ ಬೀಳಿಸುತ್ತೇವೆ, ತಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ.
ಬಳ್ಳಾರಿಯ ಕಾಂಗ್ರೆಸ್ ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಸುಳ್ಳು. ಯಾರೂ ಎಲ್ಲಿಯೂ ಹೋಗಲ್ಲ. ಎಲ್ಲರೂ ಕಾಂಗ್ರೆಸ್ನಲ್ಲೇ ಇರುತ್ತಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ವೇಳೆ ತಾವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ತಲೆ ಅಲ್ಲಾಡಿಸಿ ಸನ್ನೆ ಮಾಡುವ ಮೂಲಕವೇ,ಆಕಾಂಕ್ಷಿಯಲ್ಲ ಎಂಬ ಉತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ