ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ; ಕೆಎಸ್ ಈಶ್ವರಪ್ಪ
Team Udayavani, Oct 29, 2018, 10:20 AM IST
ಬಾಗಲಕೋಟೆ: ದೇವೇಗೌಡರ ಬೆನ್ನಿಗೆ ಸಿದ್ದರಾಮಯ್ಯ ಚಾಕು ಹಿಡಿದುಕೊಂಡು ನಿಂತಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದುಕೊಂಡಿದ್ದಾರೆ. ಹೀಗಾಗಿ ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಬಾಗಲಕೋಟೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮುಳುಗಿ ಹೋಗುವ ಹಡಗು. ಈಗ ಒಬ್ಬರನ್ನೊಬ್ಬರು ಬಾಚ್ಕೊಂಡು ತಬ್ಬಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೈತ್ರಿ ಸರ್ಕಾರ ಬಿದ್ದು ಹೋಗಿ, ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ತಾನು ಮತ್ತೆ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯನವರು ಹಗಲು ಕನಸು ಕಾಣುತ್ತಿದ್ದಾರೆ. ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು, ಬಳಿಕ ಮೊನ್ನೆ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯನವರನ್ನು ಪರಮೇಶ್ವರ್ ಸೋಲಿಸಿದರು. ಹೀಗೆ ಕಾಂಗ್ರೆಸ್ ಪಕ್ಷದೊಳಗೆ ಕಚ್ಚಾಟವಿದ್ದು, ಇವರು ಇನ್ನು ಅಧಿಕಾರಕ್ಕೆ ಬರುವುದಿಲ್ಲ. ಮೈಸೂರಿನಲ್ಲಿ ರಾಹು, ಶನಿ ರೂಪದಲ್ಲಿ ಕಾಡಿದ್ದು ದೇವೇಗೌಡರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು