ಸಿದ್ದರಾಮಯ್ಯರನ್ನು ಬಾದಾಮಿಯಲ್ಲಿ ಗೆಲ್ಲಿಸಿದ್ದೇ ನಾನು; ಸಿ ಎಂ ಇಬ್ರಾಹಿಂ

ಜನರು ಇಂತಹ ಸುಳ್ಳು ಆಶ್ವಾಸನೆಗಳಿಗೆ ಮರುಳಾಗುವುದಿಲ್ಲ

Team Udayavani, Jan 26, 2023, 6:17 PM IST

ಸಿದ್ದರಾಮಯ್ಯರನ್ನು ಬಾದಾಮಿಯಲ್ಲಿ ಗೆಲ್ಲಿಸಿದ್ದೇ ನಾನು; ಸಿ ಎಂ ಇಬ್ರಾಹಿಂ

ಅಥಣಿ: ಸಿದ್ದರಾಮಯ್ಯನವರನ್ನು ಬಾದಾಮಿಯಲ್ಲಿ ಆರಿಸಿ ತಂದಿದ್ದೇ ನಾನು. ಅವರು ಇವತ್ತು ಸರಿಯಾದ ಕ್ಷೇತ್ರ ಇಲ್ಲದೆ ಪರದಾಡುವಂತಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮೊದಲು ತಾವು ಸ್ಪರ್ಧಿಸುವ ಕ್ಷೇತ್ರವನ್ನು ಭದ್ರ ಮಾಡಿಕೊಳ್ಳಲಿ. ತಮ್ಮ ಸ್ವ ಪ್ರಯತ್ನದಿಂದ ಗೆದ್ದು ತೋರಿಸಲಿ, ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ವ್ಯಂಗ್ಯವಾಡಿದರು.

ಅವರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷವನ್ನು ಬಿಜೆಪಿ ಬಿ ಟೀಮ್‌ ಎಂದು ಟೀಕಿಸುವುದನ್ನು ಬಿಟ್ಟು ಬದ್ಧತೆಯಿಂದ ವರ್ತಿಸುವುದನ್ನು ಕಲಿಯಲಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾಂಗ್ರೆಸ್ಸಿನ 13 ಜನ ಶಾಸಕರನ್ನು ಮುಂಬೈಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ. ಬಿಜೆಪಿಯ ಬಿ ಟೀಮ್‌ ಯಾರು ಎಂಬುದು ಆತ್ಮಾವಲೋಕನ ಮಾಡಿಕೊಳ್ಳಲಿ.ಅವರು ಸತೀಶ ಜಾರಕಿಹೊಳಿ ಅವರಿಗೆ ಟಿಕೇಟ ನಿರಾಕರಿಸಿದ್ದರು. ಆದರೆ ಸತೀಶ ಜಾರಕಿಹೊಳಿ ಅವರಿಗೆ ನನ್ನಿಂದಲೇ ಕಾಂಗ್ರೆಸ್ಸಿನ ಬಿ ಫಾರ್ಮ್ ಸಿಗುವಂತಾಯಿತು ಎಂದು ಹೇಳಿದರು.

ದಮ್‌ ಇದ್ರೆ, ತಾಕತ್‌ ಇದ್ರೆ ನನ್ನ ಮೇಲಿನ ಭ್ರಷ್ಟಾಚಾರದ ಆರೋಪವನ್ನು ಸಾಬೀತು ಮಾಡಲಿ ಎಂದು ಹೇಳುವ ಸಿದ್ದರಾಮಯ್ಯನವರು ಈಗ ಲೋಕಾಯುಕ್ತಕ್ಕೆ ಬಂದಿರುವ ದೂರುಗಳಿಗೆ ಮೊದಲು ಉತ್ತರವನ್ನು ನೀಡಲಿ, ಆಮೇಲೆ ಬಹಿರಂಗ ಚರ್ಚೆ ಮಾಡಲಿ. ಸಿದ್ದರಾಮಯ್ಯನವರು ಮಂಡಿಸಿದ ಎಲ್ಲಾ ಬಜೆಟ್‌ಗಳ ಹಿಂದೆ ಮತ್ತು ಪ್ರಮುಖ ಯೋಜನೆಗಳ ಹಿಂದೆ ನನ್ನ ಪರಿಶ್ರಮವಿದೆ. ಅದನ್ನು ಸಿದ್ದರಾಮಯ್ಯನವರು ಮರೆಯಬಾರದು ಎಂದರು.

ಸಿದ್ದರಾಮಯ್ಯ ಮತ್ತು ಡಿಕೆಶಿ ಜಂಟಿಯಾಗಿ ಎಸಿ ಬಸ್ಸುಗಳಲ್ಲಿ ಕುಳಿತು ಐಷಾರಾಮಿ ಯಾತ್ರೆ ಮಾಡುತ್ತಾ ಹೊರಟಿದ್ದಾರೆ. ಇದರಿಂದ ಜನರ ಸಂಕಷ್ಟವನ್ನು ಅರಿಯಲು ಸಾಧ್ಯವಿಲ್ಲ. ಜನರು ಇಂತಹ ಸುಳ್ಳು ಆಶ್ವಾಸನೆಗಳಿಗೆ ಮರುಳಾಗುವುದಿಲ್ಲ. ಎಸಿ ಬಸ್‌ಗಳಲ್ಲಿ ಕುಳಿತು ಜಿಲ್ಲೆಯಿಂದ ಜಿಲ್ಲೆಗೆ ಹೋಗುವ ಮೊದಲು ಪ್ರತಿ ಹಳ್ಳಿಗಳಲ್ಲಿ ಜನರ ಮಧ್ಯೆ ಹೋಗಿ ಅವರ ಸಮಸ್ಯೆಯನ್ನು ಅರಿಯಲಿ ಎಂದು ಹೇಳಿದರು.

ಕುಮಾರಸ್ವಾಮಿಯವರು ಲಾಟರಿ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯನವರ ಮಾತಿಗೆ ತಿರುಗೇಟು ನೀಡಿದ ಸಿ ಎಂ ಇಬ್ರಾಹಿಂ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರ ಮಾಡುವ ವಿಚಾರದಲ್ಲಿ ದೇವೇಗೌಡರು ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವ ವಿಚಾರ ವ್ಯಕ್ತಪಡಿಸಿದಾಗ ಅಂದು ಇದೇ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಅವರು ಯಾವುದೇ ಸಂದರ್ಭದಲ್ಲಿ ಲಾಟರಿ ಮುಖ್ಯಮಂತ್ರಿ ಆಗಿಲ್ಲ. ಅವರು ಮುಖ್ಯಮಂತ್ರಿಗಳಾಗಿ ಮಾಡಿದ ಜನಪರ ಕಾರ್ಯಗಳು ಜನಪ್ರಿಯವಾಗಿವೆ. ಅಂದಿನಿಂದ ಇಂದಿನವರೆಗೂ ರಾಜ್ಯದ ಜನರು ಮತ್ತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲಿ
ಎಂದು ಬಯಸುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷ ನುಡಿದಂತೆ ನಡೆವ ಪಕ್ಷ. ನಮ್ಮ ಪಕ್ಷಕ್ಕೆ ಸ್ವಯಂ ಪ್ರೇರಿತರಾಗಿ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಗುಲಾಮ್‌ ನಬಿ ಆಜಾದ್‌ ಮತ್ತು ಡಾ. ಅಂಬೇಡ್ಕರ್‌ ಅವರ ಮೊಮ್ಮಗ ಪಕ್ಷದ ಪ್ರಚಾರಕ್ಕಾಗಿ ಬರುತ್ತಿದ್ದಾರೆ. ಪಕ್ಷವನ್ನು ಎಲ್ಲೆಡೆ ಇನ್ನಷ್ಟು ಗಟ್ಟಿಯಾಗಿ ಸಂಘಟಿಸುವ ಮೂಲಕ ಎಲ್ಲಡೆ ಸ್ಪರ್ಧೆ ಮಾಡುತ್ತೇವೆ. ಶೀಘ್ರದಲ್ಲಿಯೇ ಎಲ್ಲ ಮತಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.