ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ


Team Udayavani, Feb 12, 2021, 1:37 PM IST

Siddaramaiy

ಕುಳಗೇರಿ ಕ್ರಾಸ್‌: ನಾನು ಮುಖ್ಯಮಂತ್ರಿ ಇದ್ದಾಗ ಒಂದು ದಿನ ದುಡ್ಡು ಕಡಿಮೆ ಇರಲಿಲ್ಲ. ಆದರೆ, ಈಗಿನ  ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಮಾಜಿ ಸಿಎಂ ಶಾಸಕ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಹರಿಹಾಯ್ದರು.

ಗೋವನಕೊಪ್ಪ ಗ್ರಾಮದಲ್ಲಿ ಎರಡು ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಯಾದ ರಸ್ತೆ ಅಭಿವೃದ್ಧಿ  ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೊರೊನಾ ನೆಪ ಹೇಳುತ್ತಿದ್ದು, ಈ ಬಾರಿ ಹೆಚ್ಚುವರಿ 35 ಸಾವಿರ ಕೋಟಿ ಸಾಲ ಪಡೆಯುತ್ತಿದ್ದಾರೆ ಎಂದರು.

ನಾನು ಸಿಎಂ ಇದ್ದಾಗ ಶಾಲೆ ಕಾಲೇಜಿಗೆ ಬಿಡುಗಡೆ ಮಾಡಿದ ಅನುದಾನ ಕೇಳಿದರೆ ಹಣ ಇಲ್ಲ ಎನ್ನುತ್ತಿದ್ದು, ಸರ್ಕಾರದ ಪಂಚೇಂದ್ರಿಯಗಳು ಕೆಲಸವನ್ನೇ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಎರಡು ವರ್ಷದ ನಂತರ ನಾವೇ ಅಧಿ ಕಾರಕ್ಕೆ ಬರುತ್ತೇವೆ. ಗೋವನಕೊಪ್ಪ ದೊಡ್ಡ ಗ್ರಾಮ. ಇದು ಗ್ರಾಪಂ  ಆಗಬೇಕು. ಸರ್ಕಾರಕ್ಕೆ ಪತ್ರ ಬರೆದು ನನ್ನ ಪೆನ್ನಿನ ಇಂಕ್‌ ಖಾಲಿಯಾಗಿದೆ. ದೊಡ್ಡ ಊರಿದೆ. ಆದರೂ ಜನಸಂಖ್ಯೆ ಕಡಿಮೆ ಇದೆ ಎನ್ನುತ್ತಿದ್ದಾರೆ. ಈಗ ಮತ್ತೂಂದು ಗ್ರಾಮ ಸೇರಿಸುತ್ತೇವೆ ಎನ್ನುತ್ತಿದ್ದಾರೆ. ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಒಂದೇ ದಿನದಲ್ಲಿ ಗೋವನಕೊಪ್ಪ ಗ್ರಾಪಂ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ :ಪ್ರಥಮ ದರ್ಜೆ ಕಾಲೇಜು ಮಂಜೂರಿಗೆ ಯತ್ನ

ಬಾದಾಮಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಎಇಇ ಶಿವಾನಂದ ಜಾಡರ ಅವರನ್ನು ತರಾಟೆಗೆ ತೆಗೆದುಕೊಂಡು, ಕಾಮಗಾರಿ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಿದರು. ಭೈರನಹಟ್ಟಿ ಶಾಂತಲಿಂಗ ಸ್ವಾಮೀಜಿ ಮಾತನಾಡಿದರು. ನರಗುಂದ ಮಾಜಿ ಶಾಸಕ ಬಿ.ಆರ್‌. ಯಾವಗಲ್‌, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮುಖಂಡರಾದ ಎಂ.ಡಿ. ಎಲಿಗಾರ, ಮಹೇಶ ಹೊಸಗೌಡ್ರ, ಭೀಮಸೇನ ಚಿಮ್ಮನಕಟ್ಟಿ, ಹೊಳಬಸು ಶೆಟ್ಟರ, ಪಿ.ಆರ್‌. ಗೌಡರ, ಪ್ರಕಾಶಗೌಡ ತಿರಕನಗೌಡ್ರ, ಬಸವರಾಜ ಬ್ಯಾಹಟ್ಟಿ, ರಾಮಣ್ಣ ಡೊಳ್ಳಿನ, ಗ್ರಾಪಂ ಅಧ್ಯಕ್ಷ ಬಸವರಾಜ ಕಟ್ಟಿಕಾರ, ಮುದಕಣ್ಣ ಹೆರಕಲ್‌, ಮುರಳಿ ಎಡನ್ನವರ,  ಹನಮಂತಗೌಡ ಪಾಟೀಲ, ರಂಗನಗೌಡ ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.