ಯಾರು ಏನೇ ಹೇಳಿದರೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ : ಸಿದ್ದರಾಮಯ್ಯ


Team Udayavani, Dec 14, 2020, 6:15 AM IST

ಯಾರು ಏನೇ ಹೇಳಿದರೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ : ಸಿದ್ದರಾಮಯ್ಯ

ಬಾಗಲಕೋಟೆ : ಪ್ರಧಾನಿ ಆಗಬೇಕು, ಕೇಂದ್ರ ಸಚಿವನಾಗಬೇಕು ಎಂಬ ಆಸೆ ನನಗಿಲ್ಲ. ವ್ಯಕ್ತಿ ತನ್ನ ಶಕ್ತಿಮೀರಿ ಯೋಚನೆ ಮಾಡಬಾರದು. ಯಾರು ಏನೇ ಹೇಳಿದರೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದಲ್ಲಿ ಒಗ್ಗಟ್ಟಿ ನಿಂದ ಇರುವ ಕುರುಬ ಸಮಾಜ ಒಡೆಯಲು, ಸಿದ್ದರಾಮಯ್ಯ ಅವರನ್ನು ವೀಕ್‌ ಮಾಡಲು ಆರೆಸ್ಸೆಸ್‌ ಹುನ್ನಾರ ಮಾಡಿದೆ. ಅದರ ಭಾಗ ವಾಗಿ ಕುರುಬ ಸಮಾಜ ಎಸ್‌ಟಿಗೆ ಸೇರಿಸುವ ಹೋರಾಟ ಶುರುವಾಗಿದೆ. ಮಂತ್ರಿಯಾಗಿ ಇರುವವರೇ ಈ ಹೋರಾಟದ ಮುಂಚೂಣಿ ವಹಿಸಿರುವುದು ಸಮಂಜಸವಲ್ಲ ಎಂದರು.

ನನ್ನನ್ನು ಆಹ್ವಾನಿಸಿಯೇ ಹೋರಾಟ ಕ್ಕಿಳಿದಿದ್ದೇವೆ ಎಂದು ಕಾಗಿನೆಲೆ ಕನಕ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿ ದ್ದಾರೆ. ಸ್ವಾಮೀಜಿ ಮೊದಲು ನನ್ನ ಬಳಿ ಬಂದಿದ್ದು ನಿಜ. ಈಶ್ವರಪ್ಪ ಒತ್ತಡ ಹಾಕಿದ್ದಾರೆಂದು ತಿಳಿಸಿದ್ದರು. ಹೋರಾಟ ನಿಮಗೆ ಬಿಟ್ಟದ್ದು, ನನ್ನ ತಕರಾರು ಇಲ್ಲ ಎಂದು ಸ್ವಾಮೀಜಿಗೆ ಹೇಳಿದ್ದೆ. ಆ ಮೇಲೆ ಎರಡೂ¾ರು ದಿನಗಳ ಬಳಿಕ ಈಶ್ವರಪ್ಪ ಹೋರಾಟಕ್ಕೆಂದು ಬಾಗಲಕೋಟೆಗೆ ಬಂದು ಆರೆಸ್ಸೆಸ್‌ನವರ ಮನೆಯಲ್ಲಿ ಊಟ ಮಾಡಿದ್ದರು. ಹೋರಾಟಕ್ಕೆ ದುಡ್ಡು ಕೊಟ್ಟಿದ್ದು ಆರೆಸ್ಸೆಸ್‌ನವರು. ಬಿ.ಎಲ್‌. ಸಂತೋಷ ಮತ್ತು ದತ್ತಾತ್ರೇಯ ಹೊಸಬಾಳೆ ಅವರೇ ಕುರುಬ ಸಮಾಜ ಎಸ್‌ಟಿಗೆ ಸೇರಿಸುವಂತೆ ಹೋರಾಟ ಮಾಡಲು ಪ್ರೇರೇಪಿಸಿದ್ದು. ಆ ಮೂಲಕ ಸಮಾಜ ಒಡೆಯುವ ಜತೆಗೆ ಸಿದ್ದರಾಮಯ್ಯನನ್ನು ದುರ್ಬಲಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದರು.

ಹಿಂದಿನ ಶಿಫಾರಸು ಜಾರಿಗೊಳಿಸಿ
ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸಲು ನನ್ನ ವಿರೋಧವಿಲ್ಲ. ಈಶ್ವರಪ್ಪ ಸಚಿವರಾಗಿದ್ದಾರೆ. ಅವರೇಕೆ ಬೀದಿಗಿಳಿದು ಹೋರಾಟ ಮಾಡಬೇಕು. ಅವರು ಈ ವಿಷಯವನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡು ಹೋಗಿ ಮಂಜೂರು ಮಾಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮೂಲಕ ಈ ಕೆಲಸ ಮಾಡಿಸಬೇಕು. ನಾನು ಸಿಎಂ ಆಗಿದ್ದಾಗ ಬೀದರ್‌, ಕಲಬುರಗಿ, ಯಾದಗಿರಿಯಲ್ಲಿ ಗೊಂಡಾ, ರಾಜಗೊಂಡ ಜಾತಿಯನ್ನು ಎಸ್‌ಟಿಗೆ ಸೇರಿಸಲು ಶಿಫಾರಸು ಮಾಡಿದ್ದೆ. ಅದು ಇಂದಿಗೂ ನನೆಗುದಿಗೆ ಬಿದ್ದಿದೆ. ಈಶ್ವರಪ್ಪರಿಗೆ ಸಮಾಜದ ಬಗ್ಗೆ ಕಾಳಜಿ ಇದ್ದರೆ ಮೊದಲು ಆ ಶಿಫಾರಸು ಜಾರಿಗೊಳಿಸಲಿ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.