ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀಗೆ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ
ಪ್ರಶಸ್ತಿ ಮೊತ್ತ ಹುತಾತ್ಮ ಸೈನಿಕನ ಕುಟುಂಬಕ್ಕೆ ನೀಡಿದ ಬಾಲಿವುಡ್ ಗಾಯಕಿ ಮಧುಶ್ರೀ
Team Udayavani, Jan 15, 2020, 10:53 AM IST
ಅಮೀನಗಡ (ಬಾಗಲಕೋಟೆ): ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ನಡೆದ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರಿಗೆ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ, ಸಿದ್ದನಕೊಳ್ಳ ಕ್ಷೇತ್ರವು ಧಾರ್ಮಿಕವಾಗಿರುವ ಪವಿತ್ರ ಕ್ಷೇತ್ರವಾಗಿದೆ. ನಾನು ಕಳೆದ ವರ್ಷ ಕೂಡಾ ಸಿದ್ದಶ್ರೀ ಉತ್ಸವದಲ್ಲಿ ಈ ಕ್ಷೇತ್ರಕ್ಕೆ ಬಂದು ಹೋಗಿದ್ದು ಇಲ್ಲಿಯ ಶಾಂತಿ ನೆಮ್ಮದಿ ಮತ್ತು ಸಿದ್ದನಕೊಳ್ಳದ ನಿರಂತರ ದಾಸೋಹ ಮಠದಲ್ಲಿ ಡಾ.ಶಿವಕುಮಾರ್ ಶ್ರೀಗಳು ಸಮಾಜ ಸೇವೆ ಜೊತೆಯಲ್ಲಿ ಕಲಾವಿದರನ್ನು ಪ್ರೋತ್ಸಾಹ ನೀಡುವಂತ ಕೆಲಸ ಮಾಡುತ್ತಿದ್ದಾರೆ ಇದು ಶ್ಲಾಘನೀಯ ಕಾರ್ಯ ಎಂದರು.
ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನನಗೆ ಸಿದ್ದನಕೊಳ್ಳದ ಪವಿತ್ರ ಕ್ಷೇತ್ರದಲ್ಲಿ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣೆ ಮಾಡಿದ್ದು ತುಂಬಾ ಸಂತಸವಾಗಿದೆ. ಪ್ರಶಸ್ತಿ ಜೊತೆಗೆ ಬಂದಿರುವ 25 ಸಾವಿರ ರೂ,ನಗದು ಹಣವನ್ನು ಇತ್ತೀಚಿಗೆ ಹುತಾತ್ಮರಾದ ರೋಣ ತಾಲೂಕಿನ ಕರುಮುಡಿ ಗ್ರಾಮದ ವೀರಯೋಧ ವಿರೇಶ ಕುರಹಟ್ಟಿ ಅವರ ಕುಟುಂಬಕ್ಕೆ ನೀಡುತ್ತೇನೆ. ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಯೋಧರ ಸೇವೆ ಅಪಾರ. ಹುತಾತ್ಮರಾದ ಯೋಧರ ಕುಟುಂಬಗಳಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಹುತಾತ್ಮ ವೀರಯೋದ ವಿರೇಶ ಕುರಹಟ್ಟಿ ಅವರ ಕುಟುಂಬಕ್ಕೆ ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಅವರು ಸನ್ಮಾನ ಮಾಡಿ 25 ಸಾವಿರ ರೂ,ಹಣವನ್ನು ನೀಡಿದರು.
ಸಮಾರಂಭದಲ್ಲಿ ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಶ್ರೀಗಳು, ಗುಳೇದಗುಡ್ಡ ಮರಡಿ ಮಠದ ಕಾಡಸಿದ್ದೇಶ್ವರ ಶ್ರೀಗಳು, ಬಾಗಲಕೋಟೆ ಜಿಪಂ ಅಧ್ಯಕ್ಷೆ ಬಾಯಕ್ಕೆ ಮೇಟಿ,ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ,ಡಾ.ಸಿ.ಕೆ.ಮೌಲಾ ಶರೀಫ್,ಕಸಾಪ ಅಧ್ಯಕ್ಷ ಮಹಾಂತೇಶ ಹಳ್ಳೂರ,ಯುವ ನಟ ಪ್ರವೀಣ ಪತ್ರಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ