ಬೇಡ ಜಂಗಮರಿಗೆ ಎಸ್‌ ಸಿ ಪ್ರಮಾಣಪತ್ರ ಕೊಡಿ : ಸಿದ್ಧನಕೊಳ್ಳ ಶ್ರೀ


Team Udayavani, Apr 3, 2021, 7:27 PM IST

jhfjfghjhjh

ಹುನಗುಂದ : ಬೇಡ ಜಂಗಮರಿಗೆ ಎಸ್‌ಸಿ ಮೀಸಲಾತಿ ಕೊಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶವಿದ್ದರೂ ಸರ್ಕಾರ ಮಾತ್ರ ಎಸ್‌ ಸಿ ಪ್ರಮಾಣ ಪತ್ರ ಕೊಡಲು ಹಿಂದೇಟು ಹಾಕುತ್ತಿದೆ. ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲಿ ಎನ್ನುವಂತಾಗಿದೆ ಎಂದು ಸಿದ್ಧನಕೊಳ್ಳ ಧರ್ಮಾಧಿಕಾರಿ ಡಾ| ಶಿವಕುಮಾರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪಟ್ಟಣದ ಗಚ್ಚಿನಮಠದ ಆವರಣದಲ್ಲಿ ಶ್ರೀ ವೀರಮಾಹೇಶ್ವರ (ಜಂಗಮ) ಸಮಾಜ ಮತ್ತು ಗಚ್ಚಿನಮಠದ ಸಕಲ ಸದ್ಭಕ್ತರ ಮಂಡಳಿಯ ಸಹಯೋಗದಲ್ಲಿ ನಡೆದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತ್ಯುತ್ಸವ ಹಾಗೂ ಅಯ್ನಾಚಾರ ಸಾಮೂಹಿಕ ಲಿಂಗ ದೀಕ್ಷೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಮೀಸಲಾತಿ ಕೊಡುವುದಾದರೇ ಎಲ್ಲ ಧರ್ಮ, ಜಾತಿಗಳಿಗೆ ಮೀಸಲಾತಿ ನೀಡಲಿ. ಇಲ್ಲವೇ ಆರ್ಥಿಕವಾಗಿ ಹಿಂದುಳಿದ ಮೀಸಲಾತಿ ಜಾರಿಗೊಳಿಸಿ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಅವರೆಲ್ಲರಿಗೂ ಮೀಸಲಾತಿ ಕೊಡಿ. ಇಲ್ಲದಿದ್ದರೇ ಮೀಸಲಾತಿಯನ್ನೇ ತೆಗೆದು ಹಾಕಿ. ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹಾಗೂ ಕುರುಬರ ಎಸ್‌ಟಿ ಮೀಸಲಾತಿಗೆ ನಮ್ಮ ಬೆಂಬಲವಿದೆ ಎಂದರು.

ಕಮತಗಿಯ ಹೊಳೆಹುಚ್ಚೇಶ್ವರ ಸ್ವಾಮೀಜಿ ಮಾತನಾಡಿ, ಜಂಗಮರ ಜೋಳಿಗೆ ಭಿಕ್ಷೆಯ ಸಾಧನವಲ್ಲ. ಅದೊಂದು ಕಾಯಕ ನಿಷ್ಠೆಯ ಪ್ರತೀಕ. ಜಂಗಮ ಸಮಾಜ ಎಲ್ಲ ಧರ್ಮದವರಿಂದ ಗೌರವಕ್ಕೆ ಪಾತ್ರವಾದ ಸಮಾಜ. ನಮ್ಮ ಸಮಾಜದ ಜತೆಗೆ ಇತರೇ ಸಮಾಜವನ್ನು ಗೌರವದಿಂದ ಕಂಡಾಗ ಮಾತ್ರ ನಮ್ಮ ಸಮಾಜ ಗೌರವ ಉತ್ತಂಗಕ್ಕೆ ಏರಲು ಸಾಧ್ಯ ಎಂದರು. ಎಸ್‌ಆರ್‌ಎನ್‌ಇ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ನವಲಿಹಿರೇಮಠ ಮಾತನಾಡಿ, ರೇಣುಕಾಚಾರ್ಯರು ಜಂಗಮ ಸಮುದಾಯಕ್ಕೆ ಮಾತ್ರ ಸೀಮಿತರಲ್ಲ.

ಎಲ್ಲ ಸಮುದಾಯಗಳಿಗೆ ಬೇಕಾಗಿರುವ ಮಹಾನ್‌ ದೇವತಾ ಪುರುಷ. ರಾಜ್ಯದಲ್ಲಿ 3600 ಮಠಗಳಿವೆ. ಶೇ. 90ರಷ್ಟು ಮಠಗಳಲ್ಲಿ ಜಂಗಮ ಸಮುದಾಯದ ಮಠಾ ಧಿಪತಿಗಳಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಅತೀ ಹೆಚ್ಚು ಜಂಗಮ ಸಮುದಾಯದ ಜನರಿದ್ದಾರೆ. ರಾಜ್ಯದಲ್ಲಿ 35 ಲಕ್ಷ ಜನ ಜಂಗಮ ಸಮುದಾಯದ ಜನರಿದ್ದಾರೆ.

ಅದರಲ್ಲಿ ಶೇ. 80ರಷ್ಟು ಜನ ಕಡುಬಡವರಿದ್ದಾರೆ. ಜಾತಿ ರಾಜಕೀಯವನ್ನು ಸುತ್ತಿಕೊಂಡು ಸಮಾಜದ ಸ್ವಾಸ್ಥÂ ಹಾಳು ಮಾಡುತ್ತಿವೆ ಎಂದರು. ಗಚ್ಚಿನಮಠದ ಅಮರೇಶ್ವರ ದೇವರು, ಅಧ್ಯಕ್ಷತೆ, ಹಡಗಲಿ ನಿಡಗುಂದಿಯ ರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಶಿವಗಂಗಾ ರಂಜಣಗಿ ಉಪನ್ಯಾಸ ನೀಡಿದರು. ಬೆಳಗ್ಗೆ 11ಗಂಟೆಗೆ ಗಚ್ಚಿನಮಠದಿಂದ ಆರಂಭಗೊಂಡ ರೇಣುಕಾಚಾರ್ಯ ಭಾವಚಿತ್ರದ ಮೆರವಣಿಗೆ ಹಾಗೂ ಕುಂಭ ಮೇಳ ಲಿಂಗದಕಟ್ಟಿ, ಶ್ರೀ ಸಂಗಮೇಶ್ವರ ದೇವಸ್ಥಾನದ ಮಾರ್ಗವಾಗಿ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮರಳಿ ಗಚ್ಚಿನಮಠ ತಲುಪಿತು. ಈ ವೇಳೆ 21 ಜನರಿಗೆ ಅಯ್ನಾಚಾರ ಮತ್ತು ಲಿಂಗದೀಕ್ಷೆ ನೀಡಲಾಯಿತು.

ನಂದವಾಡಗಿ ಮಹಾಂತಲಿಂಗ ಶಿವಾಚಾರ್ಯರು, ದಾಸಬಾಳದ ವೀರೇಶ್ವರ ಸ್ವಾಮಿಗಳು, ವೀರಭದ್ರಯ್ಯ ಸರಗಣಾಚಾರಿ, ಪುರಸಭೆ ಸದಸ್ಯೆ ಗಿರಿಜಮ್ಮ ಮಠ, ಮಹಾಂತಯ್ಯ ಗಚ್ಚಿನಮಠ ಇದ್ದರು. ಮಹಾಂತೇಶ ಮಠ ಸ್ವಾಗತಿಸಿ, ನಿರೂಪಿಸಿದರು. ವೀರೇಶ ದಮ್ಮೂರಮಠ ವಂದಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.