ಸಂಭ್ರಮದ ಸಿದ್ದನಕೊಳ್ಳದ ಸಿದ್ದೇಶ್ವರ ಸ್ವಾಮೀಜಿ ರಥೋತ್ಸವ


Team Udayavani, Jan 15, 2020, 12:10 PM IST

bk-tdy-1

ಅಮೀನಗಡ: ಸುಕ್ಷೇತ್ರ ಸಿದ್ದನಕೊಳ್ಳದ ಸಿದ್ದೇಶ್ವರ ಸ್ವಾಮೀಜಿ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಭಕ್ತಿ-ಭಾವದ ನಡುವೆ ಸಡಗರ-ಸಂಭ್ರಮದಿಂದ ಜರುಗಿತು. ಹೆಲಿಕಾಪ್ಟರ್‌ ಮೂಲಕ ಸಿದ್ದನಕೊಳ್ಳದ ಭಕ್ತಾದಿಗಳಿಂದ ರಥಕ್ಕೆ ಪುಷ್ಪಾರ್ಚಣೆ ಮಾಡಲಾಯಿತು. ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ ಸಪ್ತ ಮಾತೃಗಳಾದ ಬ್ರಾಹ್ಮಿ, ಮಹೇಶ್ವರಿ, ಕೌಮುರಿ, ವೈಷ್ಣವಿ, ವರಾಹಿ, ಇಂದ್ರಾಣಿ ಹಾಗೂ ಚಾಮುಂಡಿ ಮೂರ್ತಿಗಳಿಗೆ ರುದ್ರಾಭಿಷೇಕ, ಹೋಮ, ಹವನ ಹಾಗೂ ವಿಶೇಷ ಅಲಂಕಾರ ಸಹಿತ ವಿಧಿ  ವಿಧಾನಗಳು ಜರುಗಿದವು. ಮಧ್ಯಾಹ್ನ ದಾಸೋಹ ಕಾರ್ಯ ನಡೆಯಿತು.

ಸಂಭ್ರಮದ ರಥೋತ್ಸವ: ಹಿಂದೂ ಮುಸ್ಲಿಂ ಏಕತೆಯ ಕೇಂದ್ರವಾಗಿರುವ ಸುಕ್ಷೇತ್ರ ಸಿದ್ದನಕೊಳ್ಳದ ಸಿದ್ದೇಶ್ವರ ರಥೋತ್ಸವಕ್ಕೆ ತುಗ್ಗಲಡೋಣಿ ಗ್ರಾಮದವರಿಂದ ಹಗ್ಗದ ಸೇವೆ, ಕೆಲೂರ ಗ್ರಾಮದವರಿಂದ ನಂದಿಕೋಲು ಸೇವೆ,ಚಿಮ್ಮಲಗಿ ಗ್ರಾಮದವರಿಂದ ತೇರಿನ ಶೃಂಗಾರ ಸೇವೆ, ಹೂನೂರು ಗ್ರಾಮದವರಿಂದ ಪುರುವಂತಿಕೆ ಸೇವೆ, ಸಿದ್ದನಕೋಳ್ಳ ಹಾಗೂ ಬೆನಕನವಾರಿ ಗ್ರಾಮದ ಯುವಕರಿಂದ ಸಿಡಿಮದ್ದು ಸೇವೆ ನಡೆಯಿತು. ಸಂಜೆ ಮಠದ ಆವರಣದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಕುಣಿಬೆಂಚಿ, ಚಿಲ್ಲಾಪುರ, ಐಹೊಳೆ, ಗುಡೂರ, ಇಳಕಲ್‌, ಹುನಗುಂದ, ಜಕ್ಕಲಿ, ನಿಡಗುಂದಿ, ಬೂದಿಹಾಳ, ಅಮೀನಗಡ, ಸೂಳೇಬಾವಿ, ನರೇಗಲ್ಲ, ಮದ್ಲಾಪುರ, ಕೆಲೂರ ಸೇರಿದಂತೆ ಜಿಲ್ಲೆಯ ಹಾಗೂ ರಾಜ್ಯದ ಇನ್ನಿತರ ಜಿಲ್ಲೆಯ ಅನೇಕ ಭಾಗದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ದರ್ಶನ ಪಡೆದರು.

ರಥೋತ್ಸವ ಮುಂದೆ ಸಾಗುತ್ತಿದ್ದಂತೆ ರಸ್ತೆಯ ಪಕ್ಕದ ನಿಂತಿದ್ದ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಭಕ್ತಿ ಸಮರ್ಪಿಸಿದರು. ಕಾಡಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ| ಶಿವಕುಮಾರ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ ಜರುಗಿತು.

ಸಿದ್ದನಕೊಳ್ಳದಲ್ಲಿ ಭಕ್ತರ ಗಮನ ಸೆಳೆದ ಹೆಲಿಕಾಪ್ಟರ್‌ :  ಸುಕ್ಷೇತ್ರ ಸಿದ್ದನಕೊಳ್ಳದ ಸಿದ್ದೇಶ್ವರ ರಥೋತ್ಸವದಲ್ಲಿ ಸಂಭ್ರಮದಲ್ಲಿದ್ದ ಭಕ್ತಾಧಿಗಳು. ನೀಲಿ ಆಗಸದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್‌ ಭುವಿಯತ್ತ ಇಳಿದು ಭಕ್ತರ ಗಮನ ಸೆಳೆಯಿತು.ನಂತರ ರಥೋತ್ಸವ ಮೇಲೆ ಪುಷ್ಪವೃಷ್ಟಿ ಸುರಿಸಿತು. ಆಗಸದಿಂದ ರಥಕ್ಕೆ ಸುರಿದ ಹೂಮಳೆಗೆ ಭಕ್ತ ಸಮೂಹ ಪುಳಕಗೊಂಡಿತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.