ಪ್ರಥಮ ದರ್ಜೆ ಕಾಲೇಜು ಮಂಜೂರಿಗೆ ಯತ್ನ
Team Udayavani, Feb 12, 2021, 1:36 PM IST
ಗುಳೇದಗುಡ್ಡ: ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ಮಂಜೂರಿ ಮಾಡಿಸಲು ಪ್ರಯತ್ನಿಸುವೆ. ನಮ್ಮ ಸರಕಾರ ಇದ್ರೆ ನಿಮ್ಮ ಬೇಡಿಕೆ ಈಡೇರಿಸುತ್ತಿದ್ದೆ. ಮುಂದೆ ನಮ್ಮ ಸರಕಾರ ಬಂದ್ರೆ ಖಂಡಿತವಾಗಿ ಈಡೇರಿಸುವೆ. ಮುಂದಿನ ಬಾರಿ ನಮ್ಮದೇ ಸರಕಾರ ಬರುವ ವಿಶ್ವಾಸ ನಮಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕಟಗೇರಿ ಗ್ರಾಮದಲ್ಲಿ ಹಮ್ಮಿಕೊಂಡ ಗ್ರಾಮ ಪಂಚಾಯತ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ಬರೀ ಸುಂದರವಾದ ಪಂಚಾಯಿತಿ ಕಟ್ಟಡ ನಿರ್ಮಿಸಿದರೆ ಸಾಕಾಗದು. ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವಾಗಬೇಕು ಎಂದು ಹೇಳಿದರು.
ಇದನ್ನೂ ಓದಿ :ಸಿದ್ದರಾಮಯ್ಯ ಕಾಲಿಗೆ ಬಿದ್ದ ಕಟಗೇರಿ ಪಿಡಿಒ ಆರತಿ ಕ್ಷತ್ರಿಯ
ಗ್ರಾಮ ಪಂಚಾಯಿತಿ ಕಟ್ಟಡ ಬಹಳ ಸುಂದರವಾಗಿ ನಿರ್ಮಿಸಿದ್ದಾರೆ. ಪಿಡಿಒ ಕ್ರಿಯಾಶೀಲರಿದ್ದರೇ ಗ್ರಾಮಗಳ ಅಭಿವೃದ್ಧಿಯಾಗಲು ಸಾಧ್ಯ ಎಂದರು. ಮಾಜಿ ಸಚಿವರಾದ ಎಚ್.ವೈ. ಮೇಟಿ, ಆರ್.ಬಿ.ತಿಮ್ಮಾಪುರ, ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕ ಜೆ.ಟಿ. ಪಾಟೀಲ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಪಂ ಸದಸ್ಯೆ ಸರಸ್ವತಿ ಮೇಟಿ, ಹೊಳಬಸು ಶೆಟ್ಟರ, ಭೀಮಸೇನ. ಚಿಮ್ಮನಕಟ್ಟಿ, ಮಹೇಶ ಹೊಸಗೌಡ್ರ, ಚಲವಾದಿ, ಎಂ.ಬಿ.ಹಂಗರಗಿ, ರಾಜು ಜವಳಿ, ಕಟಗೇರಿ ಗ್ರಾಪಂ ಅಧ್ಯಕ್ಷೆ ಭಾರತಿ ಕಾಮನ್ನವರ, ಉಪಾಧ್ಯಕ್ಷೆ ಯಲ್ಲವ್ವ ಗಾಣಿಗೇರ, ಪಿಡಿಓ ಆರತಿ ಕ್ಷತ್ರಿಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು