ಸಿದ್ದು ಕೋಲಾರದಲ್ಲೂ ಸ್ಪರ್ಧಿಸಲ್ಲ: ಸಚಿವ ಶ್ರೀರಾಮುಲು
Team Udayavani, Nov 15, 2022, 10:15 PM IST
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲೂ ಗೆಲ್ಲಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ನ.20ರಂದು ಬಳ್ಳಾರಿಯಲ್ಲಿ ನಡೆಯಲಿರುವ ಬಿಜೆಪಿ ಎಸ್ಟಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಚಾಮುಂಡೇಶ್ವರಿಯಲ್ಲಿ ನೀನು ಸರಿಯಿಲ್ಲ ಎಂದು ಚಾಮುಂಡೇಶ್ವರಿ ಕೈಬಿಟ್ಟಳು. ಆದರೆ, ಬಾದಾಮಿಯಲ್ಲಿ ಇರಲಿ ಎಂದು ಬನಶಂಕರಿ ಕೈ ಹಿಡಿದಿದ್ದಳು. ಆದರೆ, ರಾಜಕೀಯ ಪುನರ್ಜನ್ಮ ನೀಡಿದ ಜನರನ್ನೇ ಸಿದ್ದರಾಮಯ್ಯ ಕೈಬಿಟ್ಟರು ಎಂದರು.
ಬಾದಾಮಿಯಲ್ಲಿ ಶ್ರಮಪಟ್ಟು ಗೆಲ್ಲಿಸಿದ ಪಕ್ಷದ ಪ್ರಮುಖರು, ಮತದಾರರ ಕೈಬಿಟ್ಟಿದ್ದಾರೆ. ಇಲ್ಲಿಗೆ ಬಂದು ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಎಸ್.ಆರ್. ಪಾಟೀಲ ಅವರ ರಾಜಕೀಯವನ್ನೇ ಮುಗಿಸಿದರು. ಈ ಸಲ ಕೋಲಾರಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲೂ ಅವರು ಸ್ಪರ್ಧೆ ಮಾಡುವುದಿಲ್ಲ. ಕೊನೆಗೆ ವರುಣಾಕ್ಕೆ ಓಡಿ ಹೋಗುತ್ತಾರೆ. ಅಲ್ಲಿ ದೊಡ್ಡ ಅಭ್ಯರ್ಥಿಯನ್ನೇ ರೆಡಿ ಮಾಡಿದ್ದೇವೆ. ಅದನ್ನು ನಮ್ಮ ಪಕ್ಷದ ರಾಜಾಹುಲಿ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದರು.
ನಾನೆಂದೂ ಉಂಡ ಮನೆಯ ಜಂತಿ ಎಣಿಸುವ ಕೆಲಸ ಮಾಡಿಲ್ಲ. ದ್ರೋಹವೂ ಮಾಡಲ್ಲ. ಸಿದ್ದರಾಮಯ್ಯ ಜೆಡಿಎಸ್ನಿಂದ ಬಂದು ಮೂಲ ಕಾಂಗ್ರೆಸ್ಸಿಗರಿಗೆ ದ್ರೋಹ ಮಾಡಿದರು. ಎಲ್ಲೇ ಹೋದರೂ ದ್ರೋಹ ಮಾಡುವುದೇ ಅವರ ಕೆಲಸ. ರಾಜಕೀಯ ನಂಬಿಕಸ್ಥ ನಾಯಕರಲ್ಲ. ಪಾಪ, ದೊಡ್ಡ ಮನುಷ್ಯ ದೇವೇಗೌಡರ ಹೆಸರು ಹೇಳಿಕೊಂಡು ಬೆಳೆದು, ಅವರ ಬೆನ್ನಿಗೆ ಚೂರಿ ಹಾಕಿದರು. ಕಾಂಗ್ರೆಸ್ನಲ್ಲಿ ಪರಮೇಶ್ವರ, ಖರ್ಗೆ ಸೇರಿದಂತೆ ಎಲ್ಲರನ್ನೂ ಮುಗಿಸುತ್ತಲೇ ಬಂದರು. ಅವರಿಂದ ದ್ರೋಹ ಹೋದವರ ಪಟ್ಟಿ ಮಾಡುತ್ತ ಹೋದರೆ ಬೆಳೆಯುತ್ತಲೇ ಹೋಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ