ಸಾವರಿನ್ ಶುಗರ್ ಕಾರ್ಖಾನೆಗೆ ಮುತ್ತಿಗೆ
Team Udayavani, Jun 6, 2019, 1:24 PM IST
ತೇರದಾಳ: ನಗರದ ಸಾವರಿನ್ ಶುಗರ್ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ತೇರದಾಳ: ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಾವರಿನ್ ಶುಗರ್ ಕಾರ್ಖಾನೆಯ ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹಳಿಂಗಳಿ, ತಮದಡ್ಡಿ, ಹನಗಂಡಿ, ಸಸಾಲಟ್ಟಿ ಸೇರಿದಂತೆ ಮತ್ತಿತರ ಗ್ರಾಮದ ರೈತರು ಸಾವರಿನ್ ಶುಗರ್ ಕಾರ್ಖಾನೆಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಐದಾರು ತಿಂಗಳುಗಳಿಂದ ನಮ್ಮ ಬಿಲ್ ಬಾಕಿ ಹಣ ಪಾವತಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಹಿಳೆಯರು ಪಾಲ್ಗೊಂಡು ಕಾರ್ಖಾನೆಯಿಂದ ಸರಿಯಾದ ಸಮಯಕ್ಕೆ ಹಣ ಪಾವತಿಯಾಗದೇ ಇರುವುದರಿಂದ ಬಹಳಷ್ಟು ಸಮಸ್ಯೆ ಎದುರಿಸಬೇಕಾಗಿದೆ ಎಂದರು. ಕಾರ್ಖಾನೆ ಸಿಬ್ಬಂದಿ ರೈತರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಪ್ರಯೋಜನವಾಗಲಿಲ್ಲ. ಸಂಜೆ ನಾಲ್ಕು ಗಂಟೆಯವರೆಗೆ ಗೇಟ್ ತೆಗೆಯದೇ ಇರುವುದರಿಂದ ಒಳಗಿದ್ದ ಸಿಬ್ಬಂದಿಯವರು ಹೈರಾಣಾಾದರು.
ಕಾರ್ಖಾನೆ ಅಧಿಕಾರಿಗಳಾದ ಶಿವಣ್ಣನವರ, ಮಹಾವೀರ ಮುರಗುಂಡಿ ಮಾತನಾಡಿ, ಶೀಘ್ರ ಬಿಲ್ ನೀಡುವ ಭರವಸೆ ನೀಡಿದರು. ರೈತರಾದ ಗಂಭೀರ ಪಾಟೀಲ, ಶಾಂತಿನಾಥ ಖೇಬೋಜಿ, ಆದೇಶ ಕುಳ್ಳಿ, ಅರುಣ ಹನಗಂಡಿ, ಭರತೇಶ ಜಮಖಂಡಿ, ಗಂಗಪ್ಪ ಜಕ್ಕನ್ನವರ, ಆನಂದ ಮುದಕನ್ನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?