Wedding Invitation: ಮದುವೆ ಆಮಂತ್ರಣದ ಜೊತೆ `ಸಿಯಾ ರಾಮ್’ ಮೂರ್ತಿ ವಿತರಣೆ..!
Team Udayavani, Feb 17, 2024, 9:51 AM IST
ರಬಕವಿ-ಬನಹಟ್ಟಿ : ಮದುವೆ ಸಮಾರಂಭವೆಂದರೆ ಅದ್ದೂರಿ ಇದ್ದೇ ಇರುತ್ತದೆ. ಇಲ್ಲಿ ಮದುವೆ ಆಮಂತ್ರಣ ಪತ್ರಿಕೆಯ ಜೊತೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸವಿ ನೆನಪಿಗಾಗಿ ಮದುವೆ ಆಮಂತ್ರಣ ನೆಪದಲ್ಲಿ ಪ್ರತಿ ಆಮಂತ್ರಿತರಿಗೂ 2 ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪಂಚಲೋಹದ ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮವಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನಿಸಲಾಗುತ್ತಿದೆ.
ಇದು ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಆರ್ಎಸ್ಎಸ್ ಮುಖಂಡ ಸೋಮನಾಥ ಗೊಂಬಿಯವರು ತನ್ನ ಸುಪುತ್ರಿ ಲಕ್ಷ್ಮಿ ಜೊತೆ ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಮಹಾಲಿಂಗಪ್ಪ ಕಳ್ಳಿಗುದ್ದಿಯೊಂದಿಗೆ ಮದುವೆ ಕಾರ್ಯಕ್ರಮ. ಫೆ19, ಸೋಮವಾರದಂದು ನಡಯಲಿದೆ. ಇದರಿಂದ ಮನೆ ಮನೆಗೆ ಮದುವೆಯ ಆಮಂತ್ರಣ ಜೊತೆ 250 ಗ್ರಾಂ ಹೊಂದಿರುವ ಪಂಚಲೋಹದಿಂದ ತಯಾರಾದ `ಸಿಯಾ ರಾಮ್’ ಮೂರ್ತಿಯನ್ನು ನೀಡುವ ಮೂಲಕ ವಿಭಿನ್ನವಾಗಿ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಲಾಗುತ್ತಿದೆ.
ಹಿಂದೂ ಧರ್ಮದ ಸಂಕೇತವಾಗಿರುವ `ಸಿಯಾ ರಾಮ್’ ಮೂರ್ತಿಯು ಎಲ್ಲರ ಮನೆಯಲ್ಲಿ ಇರಬೇಕು. ಇದೊಂದು ಐತಿಹಾಸಿಕ ಮದುವೆ ಕಾರ್ಯಕ್ರಮವಾಗಿದೆ. ಸುಮಾರು 1500 ರೂ.ಗಳ ಬೆಲೆಯುಳ್ಳ ಮೂರ್ತಿ ನೀಡುವದರ ಮೂಲಕ ಹಿಂದುತ್ವದ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ನಾಡಿನ ವಿವಿಧ ಮಠಾಧೀಶರು ಹಾಗು ಗಣ್ಯರು ಈ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
`ಹಿಂದುತ್ವದ ಸಂಕೇತವಾಗಿ ಶತಮಾನಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸಂಕೇತವಾಗಿ ಮಗಳ ಮದುವೆ ಆಮಂತ್ರಣದೊಂದಿಗೆ ಮೂರ್ತಿ ವಿತರಿಸುವ ಬಯಕೆಯಾಗಿದೆ’.
-`ಸೋಮನಾಥ ಗೊಂಬಿ, ಅಧ್ಯಕ್ಷರು, ಹಟಗಾರ ಸಮಾಜ, ಬಾಗಲಕೋಟ.
– ಕಿರಣ ಶ್ರೀಶೈಲ ಆಳಗಿ
ಇದನ್ನೂ ಓದಿ: Police Constable: ಮನೆಯಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್ಸ್ಟೇಬಲ್… ಕಾರಣ ನಿಗೂಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?