ಆಮೆಗತಿಯಲ್ಲಿ “ಹೃದಯ’ ಕಾಮಗಾರಿ


Team Udayavani, Dec 9, 2019, 12:57 PM IST

bk-tdy-3

ಬಾದಾಮಿ: ಚಾಲುಕ್ಯರ ರಾಜಧಾನಿ ಐತಿಹಾಸಿಕ ಬಾದಾಮಿ ಹಾಗೂ ಸುತ್ತಲಿನ ಪರಿಸರದ ಅಭಿವೃದ್ಧಿಗೆ ಕೇಂದ್ರ ಸರಕಾರದ ಪುರಸ್ಕೃತ ಹೃದಯ ಯೋಜನೆಯಡಿ 22.26 ಕೋಟಿ ವೆಚ್ಚದ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ.

ಹೃದಯ ಯೋಜನೆ 2018ರಲ್ಲಿ ಕಾಮಗಾರಿ ಆರಂಭವಾಗಿದೆ. ವರ್ಷವಾದರೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಹೃದಯ ಯೋಜನೆಯಡಿ ಪ್ರವಾಸಿ ತಾಣಗಳ ರಸ್ತೆಯಲ್ಲಿ ಮತ್ತು ಸ್ಮಾರಕಗಳ ಸಮೀಪ 1.39 ಕೋಟಿ ವೆಚ್ಚದಲ್ಲಿ 193 ಸೂಚನಾಫಲಕಗಳ ಅಳವಡಿಸಲಾಗುತ್ತಿದೆ. ಪುಲಿಕೇಶಿ ಮತ್ತು ಬಸವೇಶ್ವರ ವೃತ್ತಗಳ ಅಭಿವೃದ್ಧಿಗೆ 41.91 ಲಕ್ಷ, ಆರು ಪಾರಂಪರಿಕ ಪ್ರವೇಶ ದ್ವಾರ (ಕಮಾನು) ಕ್ಕೆ ರೂ.3.38 ಕೋಟಿ, ಕಮಾನುಗಳ ಸಿಮೆಂಟ್‌ ಕಾಮಗಾರಿ ಮತ್ತು ಹೈಟೆಕ್‌ ಶೌಚಾಲಯಕ್ಕೆ 1.33 ಕೋಟಿ ರೂ. ವ್ಯಯಿಸಲಾಗುತ್ತಿದೆ. ದೆಹಲಿಯ ಸೃಷ್ಟಿ ಮತ್ತು ಕುನಾಲ್‌ ಸಂಸ್ಥೆ ಗುತ್ತಿಗೆ ಪಡೆದಿದೆ.

ಕಮಾನು ಮತ್ತು ಶೌಚಾಲಯ ಕಾಮಗಾರಿ ಹಾಗೂ ಎರಡು ವೃತ್ತಗಳ ಕಾಮಗಾರಿ ನಿಗದಿಯಂತೆ ಕಳೆದ ಡಿಸೆಂಬರ್‌ಜನವರಿಗೆ ಮುಗಿಯಬೇಕಿತ್ತು. ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಇದುವರೆಗೆ 80 ಸೂಚನಾ ಫಲಕಗಳ ಹಾಕಿದ್ದು, ಅವುಗಳ ಮೇಲೆ ಮಾಹಿತಿ ಬರೆಯುವ ಮುನ್ನವೇ ಅವು ನೆಲಕಚ್ಚಿವೆ. ಕುಟಕನಕೇರಿ ವೃತ್ತದ ರಸ್ತೆಯ ಬದಿಗೆ ಫಲಕದ ಮೇಲಿರುವ ಚಾಲುಕ್ಯರ ಲಾಂಛನ ರಸ್ತೆಯ ಬದಿಯಲ್ಲಿ ಬಿದ್ದಿದೆ. ಪ್ರವೇಶದ್ವಾರದ ಕಮಾನಿನಲ್ಲಿ ಎಡಕ್ಕೆ ಇರುವ ವರಾಹ ಬಲಕ್ಕೆ ಬಂದಿದೆ. ಎಲ್ಲ ಸ್ತಂಭವನ್ನು ಹಾಗೆಯೇ ಕೆತ್ತಲಾಗಿದೆ. ಲಾಂಛನವನ್ನು ಸರಿಯಾಗಿ ರೂಪಿಸಿಲ್ಲ. ಬೇಕಾಬಿಟ್ಟಿಯಾಗಿ ಲಾಂಛನ ಕೆತ್ತನೆ ಮಾಡಲಾಗಿದೆ. ಕಳಪೆ ಕಾಮಗಾರಿ ಹಾಗೂ ವಿಳಂಬ ಧೋರಣೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್‌.ಹಿರೇಹಾಳ, ಕಾರ್ಯದರ್ಶಿ ಇಷ್ಟಲಿಂಗ ನರೇಗಲ್‌ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಪ್ರವೇಶ ದ್ವಾರದ ಕಮಾನು ಮತ್ತು ಚಾಲುಕ್ಯರ ಸ್ಮಾರಕಗಳ ಮೂರ್ತಿ ಶಿಲ್ಪಗಳ ಬಗ್ಗೆ ಸ್ಥಳೀಯ ಕಲಾವಿದರನ್ನು ಮತ್ತು ಇತಿಹಾಸ ಸಂಶೋಧಕರ ಸಲಹೆ ಪಡೆದು ಡಿಪಿಆರ್‌ ಮಾಡಬೇಕಿತ್ತು. ಕಲಾವಿದರನ್ನು ದೂರವಿಟ್ಟು ಚಾಲುಕ್ಯರ ಸ್ಮಾರಕಗಳ ಬಗ್ಗೆ ಮಾಹಿತಿ ಇಲ್ಲದವರಿಂದ ಮಾಡಿಸಲಾಗಿದೆ ಎನ್ನುತ್ತಾರೆ.

 

-ಶಶಿಧರ ವಸ್ತ್ರದ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.