ಕಾಗದದಲ್ಲಿ ಅರಳಿತು ಸ್ಮಾರ್ಟ್‌ ಸಿಟಿ


Team Udayavani, Jan 19, 2020, 12:37 PM IST

bk-tdy-3

ಮುಧೋಳ: ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯ ಸ್ಮಾರ್ಟ್‌ ಸಿಟಿಗೆ ತಮ್ಮದೇ ಶೈಲಿಯಲ್ಲಿ ರೂಪ ನೀಡಿರುವ ನಗರ ವಿದ್ಯಾರ್ಥಿಗಳು ಭವಿಷ್ಯತ್ತಿನ ಮುಧೋಳ ನಗರವನ್ನು ಕಾಗದದ ಸಹಾಯದಿಂದ ಸುಂದರವಾಗಿ ನಿರ್ಮಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಸಾಯಿ ನಿಕೇತನ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಅಭಿಷೇಕ ಹಿರೇಮಠ ಹಾಗೂ ತ್ವಾಹೀರ್‌ ಬಾಗವಾನ ರೂಪಿಸಿರುವ ಸ್ಮಾರ್ಟ್‌ ಸಿಟಿ ನಗರದ ಬೀಳೂರು ಗುರುಬಸವ ಮಹಾಸ್ವಾಮೀಜಿ ತಾಂತ್ರಿಕ ಕಾಲೇಜಿನಲ್ಲಿ ಜರುಗಿದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಎಲ್ಲರ ಗಮನ ಸೆಳೆಯಿತು.

ಏನೇನಿದೆ ಸ್ಮಾರ್ಟ್‌ ಸಿಟಿಯಲ್ಲಿ: ಅಭಿಷೇಕ ಹಾಗೂ ತಾಹಿರ್‌ ಕಲ್ಪನೆಯ ಸ್ಮಾರ್ಟ್‌ ಸಿಟಿ ಒಂದು ಅಚ್ಚುಕಟ್ಟು ನಗರ ನಿರ್ಮಾಣಕ್ಕೆ ಅವಶ್ಯವಿರುವ ಸಕಲ ಸೌಲಭ್ಯವನ್ನು ಒಳಗೊಂಡಿದೆ. ನಗರದಲ್ಲಿನ ಶಾಲೆ, ಕಾರ್ಖಾನೆ ಹಾಗೂಕಾರ್ಖಾನೆ ನಿರ್ವಹಣೆ, ಮಳೆ ನೀರುಕೊಯ್ಲು, ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ. ಕಾಗದದಲ್ಲಿ ಮೂಡಿದ ಸಿಟಿ: ಸ್ಮಾರ್ಟ್‌ ಸಿಟಿ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ವಿಧಾನವೂ ಎಲ್ಲರನ್ನೂ ಮೆಚ್ಚುವಂತಿದೆ. ಕೇವಲ ಕಾಗದ ಹಾಗೂ ಬಣ್ಣದಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್‌ ಸಿಟಿ ನೋಡುಗರ ಮನಮುಟ್ಟುವಂತಿದೆ.

ಮಳೆ ಕೊಯ್ಲಿಗೆ ಆದ್ಯತೆ: ನೀರು ಸಂಗ್ರಹ ಬಳಕೆಗೆ ಒತ್ತು ನೀಡಿರುವ ವಿದ್ಯಾರ್ಥಿಗಳು. ತಮ್ಮ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಮಳೆ ನೀರು ಕೊಯ್ಲಿಗೆ ಪ್ರಥಮ ಆದ್ಯತೆ ನೀಡಿದ್ದಾರೆ. ಮಳೆ ನೀರನ್ನು ಯಾವ ರೀತಿಯಲ್ಲಿ ಸಂಗ್ರಹಿಸಬೇಕು. ಹಾಗೂ ಅದನ್ನು ಯಾವ ವಿಧದಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿರುವ ವಿದ್ಯಾರ್ಥಿಗಳು ನೀರಿನ ಹಿತ ಮಿತ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ನೀರಿನ ಮಹತ್ವ ತಿಳಿಸಿಕೊಟ್ಟಿದ್ದಾರೆ.

ಕಾರ್ಖಾನೆಗೆ ಅವಶ್ಯವಿರುವ ವಿದ್ಯುತ್‌ ಉತ್ಪಾದನೆ: ಕಲ್ಪನೆಯ ಸ್ಮಾರ್ಟ್‌ ಸಿಟಿಯಲ್ಲಿರುವ ಕಾರ್ಖಾನೆಗೆ ಪವನ ವಿದ್ಯುತ್‌ ಶಕ್ತಿ ಮೂಲಕ ಅಗತ್ಯ ವಿದ್ಯುತ್‌ ತಯಾರಿಸಿ ಅದನ್ನು ಕಾರ್ಖಾನೆ ನಿರ್ವಹಣೆಗೆ ಬಳಸಿಕೊಂಡಿದ್ದು, ಈ ಮೂಲಕ ಕಾರ್ಖಾನೆ ನಿರ್ವಹಣೆಯಲ್ಲಿಯೂ ಅಚ್ಚುಕಟ್ಟುತನ ತೋರಿದ್ದಾರೆ ವಿದ್ಯಾರ್ಥಿಗಳು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.