ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ಧಿ


Team Udayavani, Feb 23, 2020, 12:30 PM IST

bk-tdy-3

ಇಳಕಲ್ಲ: ಬಂಜಾರ ಸಮಾಜ ಸಂಘಟಿತರಾಗಿ, ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ನಗರದ ಎಸ್‌.ಆರ್‌. ಕಂಠಿ ವೃತ್ತದಲ್ಲಿ ಇಳಕಲ್ಲ ತಾಲೂಕು ಆಡಳಿತ ಹಾಗೂ ತಾಲೂಕು ಬಂಜಾರಾ ತಾಂಡಾ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಸಂತ ಸೇವಾಲಾಲ್‌ 281ನೇ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಸಮಾಜ ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸಮಾಜಮುಖೀಯಾಗಿ ಬೆಳೆಯಬೇಕು. ಅದಕ್ಕಾಗಿ ಎಲ್ಲರೂ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದರು. ಎ.ಐ.ಬಿ.ಎಸ್‌.ಎಸ್‌ ರಾಜ್ಯಾಧ್ಯಕ್ಷ ಪಾಂಡುರಂಗ ಪಮ್ಮಾರ ಮಾತನಾಡಿ, ಬಂಜಾರಾ ಸಮಾಜದವರು ಸುಮಾರು 13 ಕೋಟಿ ಜನಸಂಖ್ಯೆ ಹೊಂದಿದೆ. ಬಂಜಾರಾ ಭಾಷೆ ಅಧಿಕೃತ ಭಾಷೆಯಾಗಿದ್ದು, ಬಂಜಾರಾ ಭಾಷೆ ಮಾನ್ಯತೆಗಾಗಿ ಹೋರಾಡುತ್ತಿದ್ದೇವೆ. ರಾಜ್ಯದಲ್ಲಿಯ ಬಂಜಾರಾ ತಾಂಡಾ ಅಭಿವೃದ್ಧಿ ನಿಗಮ ಮಂಡಳಿಯಂತೆ ರಾಷ್ಟ್ರೀಯ ಬಂಜಾರಾ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು. ಅದಕ್ಕೆ ಶಾಸಕರು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಬಂಜಾರಾ ಸಮಾಜದ ಆರಾಧ್ಯ ದೈವ ಸಂತ ಸೇವಾಲಾಲ್‌ ಜಯಂತ್ಯುತ್ಸವವನ್ನು ಸರ್ಕಾರಿ ಮಟ್ಟದಲ್ಲಿ ಆಚರಣೆಗೆ ತಂದರು. ಶಿವಾಜಿ ಮಹಾರಾಜ, ಟಿಪ್ಪು ಸುಲ್ತಾನ್‌, ಕಿತ್ತೂರ ಚನ್ನಮ್ಮ, ಹೇಮರೆಡ್ಡಿ ಮಲ್ಲಮ್ಮನಂತ ಮಹಾನ್‌ ಶರಣರ ವಿಚಾರಧಾರೆ, ತತ್ವಾದರ್ಶ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದಿಂದ ಅಂದಿನ ಸರ್ಕಾರ ಜಯಂತ್ಯುತ್ಸವಗಳನ್ನು ಸರ್ಕಾರಿ ಮಟ್ಟದಲ್ಲಿ ಆಚರಿಸಲು ನಿರ್ಧರಿಸಿತು ಎಂದು ಹೇಳಿದರು.

281 ವರ್ಷಗಳ ಹಿಂದೆಯೇ ಸಂತ ಸೇವಾಲಾಲರು ಬಂಜಾರಾ ಸಮಾಜ ಸಂಘಟನೆಗೆ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶ್ರಮಿಸಿದ್ದಾರೆ. ಬಂಜಾರಾ ಸಮಾಜದ ಅಭಿವೃದ್ಧಿಗೆ ಹಾಗೂ ಹೋರಾಟಕ್ಕೆ ಬೆಂಬಲಿಸುವುದಾಗಿ ತಿಳಿಸಿದರು.

ಸಾನ್ನಿಧ್ಯವನ್ನು ನೀಲಾನಗರ ಬಂಜಾರಾ ಶಕ್ತಿಪೀಠದ ಕುಮಾರ ಮಹಾರಾಜರು, ಕೆಸರಟ್ಟಿ ಸೋಮಲಿಂಗ ಮಹಾಸ್ವಾಮಿ, ಕೊಪ್ಪಳಗಡ ಗೋಸಾಯಿ ಬಾವಾ, ಚಿಕ್ಕಕೊಡಗಲಿ ಎಲ್‌ .ಟಿ. ಶಂಕರ ಮಹಾರಾಜರು ವಹಿಸಿದ್ದರು. ಈ ವೇಳೆ ಜಿಪಂ ಸದಸ್ಯೆ ಕಸ್ತೂರಿಬಾಯಿ ಜಾಧವ, ಜಿಪಂ ಮಾಜಿ ಅಧ್ಯಕ್ಷ ಹನಮಂತಪ್ಪ ರಾಠೊಡ, ಇಳಕಲ್ಲ ತಾಲೂಕು ಬಂಜಾರ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೃಷ್ಣಾ ಪಿ. ರಾಠೊಡ, ಚಿಕ್ಕಕೊಡಗಲಿ ತಾಪಂ ಸದಸ್ಯೆ ತಾರಾಬಾಯಿ ನಾಯಕ, ಬಲಕುಂದಿ ಗ್ರಾಪಂ ಅಧ್ಯಕ್ಷ ಶರಣಪ್ಪ ರಾಠೊಡ, ಚಿಕ್ಕಕೊಡಗಲಿ ಗ್ರಾಪಂ ಅಧ್ಯಕ್ಷೆ ಮಂಗಳವ್ವ ರಾಠೊಡ, ತಹಶೀಲ್ದಾರ್‌ ವೇದವ್ಯಾಸ ಮುತಾಲಿಕ ಇತರರು ಇದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.