![court](https://www.udayavani.com/wp-content/uploads/2024/07/court-7-415x231.jpg)
ಸಂಘಟನೆಯಿಂದ ಸಮಾಜ ಅಭಿವೃದ್ಧಿ
Team Udayavani, May 12, 2019, 12:54 PM IST
![bag-4](https://www.udayavani.com/wp-content/uploads/2019/05/bag-4-3-620x267.jpg)
ಗುಳೇದಗುಡ್ಡ: ಸಮಾಜದಲ್ಲಿ ಸಂಘಟನೆ ಮುಖ್ಯ. ಸಂಘಟಿತರಾಗಿ ಯಾವುದೇ ಕಾರ್ಯ ಹಮ್ಮಿಕೊಂಡರೂ ಯಶಸ್ವಿಯಾಗಲು ಸಾಧ್ಯ. ರಾಜ್ಯದಲ್ಲಿ ಸುಮಾರು 8 ರಿಂದ 10ಲಕ್ಷ ಜನಸಂಖ್ಯೆ ಹೊಂದಿರುವ ಆರ್ಯವೈಶ್ಯ ಸಮಾಜದ ಜನ ರಾಜ್ಯಾದ್ಯಂತ ಸಂಘಟಿತರಾಗಬೇಕಿದೆ ಎಂದು ರಾಜ್ಯ ಆರ್ಯವೈಶ್ಯ ಮಹಾ ಮಂಡಳದ ಜಿಲ್ಲಾಧ್ಯಕ್ಷ ವಿ.ಆರ್. ಜನಾದ್ರಿ ಹೇಳಿದರು.
ಸ್ಥಳೀಯ ಆರ್ಯವೈಶ್ಯ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ವಾಸವಿದೇವಿ ಗೋಷ್ಠಿ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂಘಟಿತರಾದರೆ ಸಮಾಜಮುಖೀಯಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಸಂಘಟನೆಯಿಂದ ಬಡವರ ಕಲ್ಯಾಣ ಸಾಧ್ಯವೆಂದು ಹೇಳಿದರು.
ರಾಜ್ಯ ಮಹಾಸಭಾದ ಜಿಲ್ಲಾಧ್ಯಕ್ಷ ಮಂಜುನಾಥ ಪತ್ತೇಪುರ ಮಾತನಾಡಿ, ಗುಳೇದಗುಡ್ಡದಲ್ಲಿ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಹಾಗೂ ಸಮಾಜದ ಕಲ್ಯಾಣ ಮಂಟಪ ನಿರ್ಮಾಣ ಮಾಡಿದ್ದು ಉತ್ತಮ ಕಾರ್ಯ. ದೇವಸ್ಥಾನ ನಿರ್ಮಾಣದಿಂದ ಧಾರ್ಮಿಕ ಕಾರ್ಯ ಮಾಡಲು, ಕಲ್ಯಾಣ ಮಂಟಪದಲ್ಲಿ ಸಮಾಜದ ಬಡವರಿಗೂ ಅದನ್ನು ಬಳಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಗುಳೇದಗುಡ್ಡದ ಆರ್ಯವೈಶ್ಯ ಸೇವಾ ಸಮಿತಿ ಅಧ್ಯಕ್ಷ ರಾಮಣ್ಣ ಬಿಜಾಪುರ ಅಧ್ಯಕ್ಷತೆ ಹಾಗೂ ಗೌರವಾಧ್ಯಕ್ಷೆ ರಾಧಾಬಾಯಿ ಕೃಷ್ಣಪ್ಪ ಧಾರವಾಡ ಗೌರವಾಧ್ಯಕ್ಷತೆವಹಿಸಿದ್ದರು.
ಸ್ಥಳೀಯ ಸೇವಾ ಸಮಿತಿಯ ಉಪಾಧ್ಯಕ್ಷ ಹಣಮಂತಪ್ಪ ಅಗಡಿ ಹಾಗೂ ವಾಸವಿ ದೇವಸ್ಥಾನ ಹಾಗೂ ಕಲ್ಯಾಣ ಮಂಟಪದ ಉದ್ಘಾಟನಾ ಸಮಿತಿ ಅಧ್ಯಕ್ಷ ಶ್ರೀಕಾಂತ ಧಾರವಾಡ, ವಿದ್ಯಾಧರ ಹೇಮಾದ್ರಿ, ಪ್ರಕಾಶ ಬೋನಗೇರಿ,ಮಹೇಶ ಬಿಜಾಪುರ, ಜಗದೀಶ ಹೇಮಾದ್ರಿ, ವೆಂಕಟೇಶ ಬಿಜಾಪುರ, ರಾಘವೇಂದ್ರ ತಾವರಗೇರಿ, ವಿಶ್ವನಾಥ ಪಾನಗಂಟಿ, ಹನಮೇಶ ತಾವರಗೇರಿ, ಶ್ರೀಕಾಂತ ವಂಕಲಕುಂಟಿ ಇತರರು ಇದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.