ಹಳ್ಳಿಗಳ ವಿಂಗಡಣೆ: ಹೋರಾಟ ಮುಂದುವರಿಕೆ

ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಬರುವಂತೆ ಹಳ್ಳಿಗಳ ವಿಂಗಡಣೆ ಮಾಡಿ 

Team Udayavani, Apr 26, 2022, 3:30 PM IST

18

ತೇರದಾಳ: ತಾಲೂಕಿಗೆ ಹಳ್ಳಿಗಳ ವಿಂಗಡಣೆ ಕುರಿತು ಪಟ್ಟಣದ ಅಲ್ಲಮಪ್ರಭುದೇವರ ದೇವಸ್ಥಾನದಲ್ಲಿ ಪಟ್ಟಣದ ವ್ಯಾಪಾರಸ್ಥರು, ಸಂಘ ಸಂಸ್ಥೆಯವರು ಹಾಗೂ ಪ್ರಮುಖರ ಸಭೆ ಜರುಗಿತು.

ತೇರದಾಳ ಹೊಸ ತಾಲೂಕಿಗೆ ಹೋಬಳಿಯ ಅರ್ಧ ಹಳ್ಳಿಗಳನ್ನು ಅಥವಾ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಬರುವಂತೆ ಆಗ್ರಹಿಸಿ, ಜಾತಿ-ಪಕ್ಷಭೇದ ಬಿಟ್ಟು ಒಗ್ಗಟ್ಟಿನಿಂದ ಹೋರಾಟ ಮುಂದುವರಿಸುವುದನ್ನು ಠರಾಯಿಸಲಾಯಿತು.

ಸಭೆಯಲ್ಲಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಳಿಕಾಯಿ ಮಾತನಾಡಿ, ಕಳೆದ 5 ದಶಕಗಳಿಂದ ನಡೆದು ಬಂದ ಹೋರಾಟದ ಕುರಿತು ಹಾಗೂ ತಾಲೂಕು ಎಂದು ಘೋಷಣೆಗೊಂಡರೂ ಪಟ್ಟಣಕ್ಕೆ ಕಳೆದ 3 ವರ್ಷಗಳಿಂದ ಹಳ್ಳಿಗಳ ವಿಂಗಡಣೆ ಮಾಡದೆ ವ್ಯವಸ್ಥಿತವಾಗಿ ಅನ್ಯಾಯವಾಗುತ್ತಿದೆ. ಈಗ ತೇರದಾಳ ಹೋಬಳಿಯ 32 ಹಳ್ಳಿಗಳಲ್ಲಿ ಪಟ್ಟಣ ಹಾಗೂ ಕಲ್ಲಟ್ಟಿ ಭಾಗ ಸೇರಿದಂತೆ ಕೇವಲ 9 ಊರುಗಳನ್ನು ಮಾತ್ರ ತೇರದಾಳ ತಾಲೂಕಿಗೆ ಜೋಡಿಸುವ ಮೂಲಕ ಚಿಕ್ಕ ತಾಲೂಕಾಗಿಸಲು ಕೆಲ ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದರು.

ಈಗ ಐದು ಗ್ರಾಪಂ ವ್ಯಾಪ್ತಿಯ ಏಳು ಹಳ್ಳಿಗಳನ್ನು ಮಾತ್ರ ಸೇರ್ಪಡೆ ಮಾಡಲು ಮುಂದಾಗಿದ್ದಾರೆ. ಇದು ತೇರದಾಳ ಜನತೆಗೆ ಮಾಡುತ್ತಿರುವ ಅನ್ಯಾಯ. ಆದ್ದರಿಂದ ಸರಕಾರದ ನಿಯಮಾನುಸಾರ ಒಂದು ಲಕ್ಷ ಜನಸಂಖ್ಯೆ ಹೊಂದುವ ಹಾಗೆ ಹಳ್ಳಿಗಳ ವಿಂಗಡಣೆ ಮಾಡಬೇಕು. ನಮ್ಮ ಹೋಬಳಿಯಲ್ಲಿನ ಅರ್ಧ ಹಳ್ಳಿಗಳನ್ನು ಹಾಗೂ ಒಂದು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಕೊಡುವಂತೆ ಪ್ರಯತ್ನ ಮಾಡಬೇಕಾಗಿದೆ. ಮತ್ತೆ ಇನ್ನೊಂದು ತಾಲೂಕು ಆದರೆ ಆಗ ನಿಯಮಾನುಸಾರ ಮತ್ತೇ ಹಳ್ಳಿಗಳ ವಿಂಗಡಣೆ ಮಾಡಲು ಬರುತ್ತದೆ. ಅದಕ್ಕಾಗಿ ಮುಂದೆ ಪಟ್ಟಣದ ಜನತೆ ಹೋರಾಟ ಮಾಡಬೇಕೋ, ಬೇಡವೋ ಎಂಬುದನ್ನು ಚರ್ಚಿಸೋಣ ಎಂದರು.

ಡಾ| ಎಂ.ಎಸ್‌. ದಾನಿಗೊಂಡ, ಪ್ರವೀಣ ನಾಡಗೌಡ, ಪ್ರಭು ಗಸ್ತಿ, ಪಿ.ಎಸ್‌. ಮಾಸ್ತಿ, ನೇಮಣ್ಣ ಸಾವಂತನವರ, ಮಾಶೂಮ್‌ ಇನಾಮ್‌ದಾರ್‌, ಶೆಟ್ಟೆಪ್ಪ ಸುಣಗಾರ, ಯಾಶೀನ ಸಾತಬಚ್ಚೆ, ರವಿ, ಸಲಬನ್ನವರ, ಪ್ರಕಾಶ ಧುಪದಾಳ, ಉಸ್ಮಾನ ಮುಜಾವರ, ಸಿದ್ದು ದೊಡಮನಿ, ಎಂ.ಸಿ. ತೆಳಗಿನಮನಿ ಮಾತನಾಡಿದರು.

ಹೋರಾಟ ಸಮಿತಿಯ ಅಧ್ಯಕ್ಷ ಭುಜಬಲಿ ಕೆಂಗಾಲಿ, ಭೀಮಗೊಂಡ ಸದಲಗಿ, ಸುರೇಶ ಕಬಾಡಗಿ, ಮಾರುತಿ ಗುರವ, ಮಲ್ಲಿನಾಥ ಬೊಳಗೊಂಡ, ತುಳಜಪ್ಪ ಅಥಣಿ, ರಾಯಪ್ಪಣ್ಣ ಕುಂಬಾರ, ತಿಮ್ಮಣ್ಣ ಗಾಡಿವಡ್ಡರ, ಎಸ್‌.ವ್ಹಿ. ಗೋಠೆಕರ, ನಾರಾಯಣ ಪತ್ತಾರ, ದಯಾನಂದ ಕಾಳೆ, ಸಮಾಜಗಳ ಮುಖಂಡರು, ಹೋರಾಟ ಸಮಿತಿಯವರು, ಯುವಕರು ಉಪಸ್ಥಿತರಿದ್ದರು.

ತೇರದಾಳ ಹೊಸ ತಾಲೂಕಿಗೆ ಹೋಬಳಿಯ ಅರ್ಧ ಹಳ್ಳಿಗಳನ್ನು ಅಥವಾ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಬರುವಂತೆ ಆಗ್ರಹಿಸಿ, ಜಾತಿ-ಪಕ್ಷಭೇದ ಬಿಟ್ಟು ಒಗ್ಗಟ್ಟಿನಿಂದ ಹೋರಾಟ ಮುಂದುವರಿಸಲಾಗುವುದು ಎಂದು ಬಸವರಾಜ ಬಾಳಿಕಾಯಿ ಘೋಷಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.