ಮಧುಮೇಹಿಗಳಿಗೆ ಹೊಸ ರುಚಿ ಕರದಂಟು

ಸಕ್ಕರೆ-ಬೆಲ್ಲ ರಹಿತ ಅಂಜೂರ-ಕರ್ಜೂರ ಮಿಶ್ರಿತ ಕರದಂಟು!­ಮತ್ತೂಂದು ಹೆಜ್ಜೆಯತ್ತ ಅಮೀನಗಡ ವಿಜಯಾ ಕರದಂಟು ಸಂಸ್ಥೆ

Team Udayavani, Feb 25, 2021, 4:01 PM IST

Special Karadantu

ಅಮೀನಗಡ: ದೇಶ-ವಿದೇಶಗಳಲ್ಲೂ ತನ್ನ ವಿಶಿಷ್ಟ ಸ್ವಾದ, ಪೌಷ್ಟಿಕತೆಯೊಂದಿಗೆ ಪ್ರಸಿದ್ಧಿಯಾದ ಅಮೀನಗಡ ಕರದಂಡು ಮತ್ತೂಂದು ಹೊಸ ಹೆಜ್ಜೆಯತ್ತ ಕಾಲಿಟ್ಟಿದೆ. ಮಧುಮೇಹಿಗಳಿಗಾಗಿಯೇ ವಿಶೇಷ ಕರದಂಟು ಸಿದ್ಧಪಡಿಸಿದೆ.

ಕರದಂಟು ಸಿಹಿ ತಿನಿಸು ಮಾತ್ರವಲ್ಲ ಪೌಷ್ಟಿಕ ಆಹಾರ ನೈಸರ್ಗಿಕ ಅಂಟು, ಚುಕ್ಕಿ ಬೆಲ್ಲ, ಶುದ್ದ ತುಪ್ಪ ಹಾಗೂ ಹತ್ತಾರು ಡ್ರೈ ಫ್ರುಟ್ಸ್‌ಗಳ ಮಿಶ್ರಣದಲ್ಲಿ ತಯಾರಾಗುವ ಅಮೀನಗಡ ಕರದಂಟಿಗೆ 114 ವರ್ಷಗಳ ಇತಿಹಾಸವಿದೆ. ಆಧುನಿಕತೆಗೆ ತಕ್ಕಂತೆ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದ್ದು, ಮೊದಲಿನ ರುಚಿಯನ್ನೂ ಕಾಯ್ದುಕೊಳ್ಳಲಾಗಿದೆ. ಪೌಷ್ಟಿಕಾಂಶಗಳನ್ನು ಹೊಂದಿರುವ ಅಮೀನಗಡದ ಪ್ರಸಿದ್ಧ ಕರದಂಟು ಗರ್ಭಿಣಿಯರು, ಬಾಣಂತಿಯರು, ಯುವಕರು ಹಾಗೂ ಮಕ್ಕಳ ಆರೋಗ್ಯಕ್ಕೆ ಉತ್ತಮ ತಿನಿಸು. ಉಡುಪಿಯಿಂದ ಗೋಡಂಬಿ, ಆಂಧ್ರದ ತಾಂಡೂರ್‌ನಿಂದ ಗೇರು ಬೀಜ, ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಲ್ಲ.

ಮುಂಬೈ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಬಾದಾಮಿ, ಪಿಸ್ತಾ, ಅಂಜೂರು ಸೇರಿದಂತೆ ಬಹುತೇಕ ಸಾಮಗ್ರಿ ತಂದು ಕರದಂಟಿಗೆ ಬಳಸಲಾಗುತ್ತದೆ. ಬದಲಾವಣೆ ಏನು?: ಸಾವಯವ ಬೆಲ್ಲ, ಕೊಬ್ಬರಿ, ಗೋಡಂಬಿ, ಒಣದ್ರಾಕ್ಷಿ, ಗೇರಬೀಜ, ಬಾದಾಮಿ, ಪಿಸ್ತಾ, ಅಂಜೂರ, ಆಳ್ವಿ, ಗಸಗಸಿ, ಉತ್ತತ್ತಿ, ಆಕ್ರೋಟ್‌, ಜಾಜಿಕಾಯಿ, ಏಲಕ್ಕಿ ಹಾಗೂ ಶುದ್ದ ತುಪ್ಪ ಸೇರಿದಂತೆ ಹಲವಾರು ಪೌಷ್ಟಿಕಾಂಶಗಳಿಂದ  ತಯಾರಿಸಲ್ಪಡುವ ಕರದಂಟು ಪ್ರಿಮಿಯಂ, ಕ್ಲಾಸಿಕ್‌, ಸುಪ್ರೀಂ ಎಂದು ಮೂರು ತರಹದ ಕರದಂಟು ತಯಾರಿಸಿ ಮಾರಾಟ ಮಾಡಲಾಗುತ್ತದೆ.

ಸುಪ್ರೀಂ ಕರದಂಟು ನಾಲ್ಕರಿಂದ ಆರು ತಿಂಗಳು ಬಳಸಲಾಗುತ್ತದೆ. ಆದರೆ ಈಗ ಅಮೀನಗಡ ಪ್ರಸಿದ್ಧ ವಿಜಯಾ ಕರದಂಟು ಒಂದು ಹೆಜ್ಜೆ ಮುಂದೆ ಸಾಗಿ ಸಕ್ಕರೆ, ಬೆಲ್ಲ ರಹಿತವಾದ ಅಂಜೂರ ಮತ್ತು ಕರ್ಜೂರ ಮೂಲಕ ನೂತನ ಸ್ವಾದಿಷ್ಟ ಕರದಂಟು ಸಿದ್ಧಪಡಿಸಿದೆ. ಇದು ಮಧುಮೇಹಿಗಳು, ಹಿಮೋಗ್ಲೋಬಿನ್‌ ನಿಂದ ಬಳಲುತ್ತಿರುವವರಿಗೆ ಪೌಷ್ಟಿಕ ತಿನಿಸು ಎನ್ನುತ್ತಾರೆ ವಿಜಯಾ ಕರದಂಟು ಅಮೀನಗಡ ಮಾಲಿಕ ಸಂತೋಷ ಐಹೊಳ್ಳಿ.

ಅಂಜೂರ ಮತ್ತು ಕರ್ಜೂರ ಮಿಶ್ರಿತ ಮೂಲಕ ಕರದಂಟು ತಯಾರು ಮಾಡಬೇಕು ಎಂಬ ಉದ್ದೇಶ ಮೊದಲಿನಿಂದಲೂ ಇತ್ತು. ನಮ್ಮ ಅಡುಗೆ ಮನೆಯಲ್ಲಿ ಮೊದಲ ಪ್ರಯತ್ನದಲ್ಲಿ ಕಾಲು ಕೆಜಿ ಕರದಂಟು ಸಿದ್ಧಪಡಿಸಲಾಯಿತು. ನಂತರ 10 ಕೆಜಿ, ಈಗ ಸದ್ಯ 30 ಕೆಜಿ ಕರದಂಟು ಮಾಡಿ ಮಾರುಕಟ್ಟೆಗೆ ತಾತ್ಕಾಲಿಕವಾಗಿ ಬಿಡುಗಡೆ ಮಾಡಿದ್ದೇವೆ. ಇದರಲ್ಲಿ ಯಾವುದೇ ರೀತಿಯ ಸಕ್ಕರೆ ಬೆಲ್ಲ, ದ್ರಾಕ್ಷಿ ಮತ್ತು ಕೊಬ್ಬರಿ ಬಳಸುವುದಿಲ್ಲ. ಇದನ್ನು ವಿಶೇಷವಾಗಿ ಮಧುಮೇಹಿಗಳಿಗೆ, ಹೀಮೋಗ್ಲೋಬಿನ್‌ನಿಂದ ಬಳಲುತ್ತಿರುವವರಿಗಾಗಿ ಸಿದ್ಧಪಡಿಸಲಾಗಿದೆ. ಮೈಸೂರಿನ ಆಹಾರ ಇಲಾಖೆಯಲ್ಲಿ ಪರೀಕ್ಷೆಗೆ ಒಳಪಡಿಸಿ ಸಕ್ಕರೆ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು.  (ಸಂತೋಷ ಐಹೊಳ್ಳಿ, ಮಾಲಿಕರು, ವಿಜಯಾ ಕರದಂಟು, ಅಮೀನಗಡ)

ಎಚ್‌.ಎಚ್‌. ಬೇಪಾರಿ

 

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.