ಯುಕೆಪಿಗೆ ಈಗಲಾದರೂ ಸಿಗುತ್ತಾ ವೇಗ!

•ನೀರಾವರಿಗೆ ಹೆಚ್ಚು ಒತ್ತು ಕೊಡಬೇಕಿದೆ ಬಿಎಸ್‌ವೈ•ನೀರಾವರಿ ಹೋರಾಟಗಾರರು-ರೈತರ ಕಾತರ

Team Udayavani, Jul 31, 2019, 11:35 AM IST

bk-tdy-3

ಬಾಗಲಕೋಟೆ: ಮೈತ್ರಿ ಸರ್ಕಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಬಿಜೆಪಿ ಸರ್ಕಾರದಲ್ಲಾದರೂ ವೇಗ ಸಿಗುತ್ತದೆಯಾ ಎಂದು ಈ ಭಾಗದ ರೈತರು, ನೀರಾವರಿ ಹೋರಾಟಗಾರರು ಕಾತರರಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ನೀರಾವರಿ ಯೋಜನೆ ಕಾಲುವೆ ನಿರ್ಮಾಣದಲ್ಲಿ ಒಂದಷ್ಟು ವೇಗ ಕಂಡಿದ್ದ ಈ ಯೋಜನೆ, ಭೂ ಸ್ವಾಧೀನ ವಿಷಯದಲ್ಲಿ ಭಾರಿ ಹಿನ್ನಡೆ ಅನುಭವಿಸಿತ್ತು. ಅದಕ್ಕೆ ಹೊಸ ಭೂ ಸ್ವಾಧೀನ ಕಾಯ್ದೆ ಸಹಿತ ಹಲವು ಕಾರಣಗಳನ್ನು ನೀಡಲಾಗಿತ್ತು. ಸರ್ಕಾರದ ವಿಳಂಬ ನೀತಿಯಿಂದ 3ನೇ ಹಂತದಲ್ಲಿ ಸ್ವಾಧೀನಗೊಳ್ಳಲಿದ್ದ ಭೂಮಿ ವಶಪಡಿಸಿಕೊಳ್ಳಲು ನಡೆಸಿದ ಪ್ರಕ್ರಿಯೆಗಳ ಅಧಿಸೂಚನೆಗಳು ರದ್ದುಗೊಂಡವು. ಹೀಗಾಗಿ ರದ್ದುಗೊಂಡ ಅಧಿಸೂಚನೆಗಳನ್ನು ಪುನಃ ಆರಂಭಿಸಿ, ಸ್ವಾಧೀನ, ಕಾಲುವೆ ನಿರ್ಮಾಣ, ಪುನರ್‌ವಸತಿ, ಪುನರ್‌ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕಿದೆ.

ನೀರು ಕೊಟ್ಟು 9 ವರ್ಷ: ಕೃಷ್ಣಾ ನ್ಯಾಯಾಧಿಕರಣ ಎ ಸ್ಕೀಂ ನಡಿ 173 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, 519.60 ಮೀಟರ್‌ವರೆಗೆ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹಿಸಿ, ಬಳಸಲು ಅನುಮತಿ ಕೊಟ್ಟಿತ್ತು. ಆ ನೀರಿನಲ್ಲೇ ಈವರೆಗೆ ಕರ್ನಾಟಕ ಕೇವಲ 119 ಟಿಎಂಸಿ ಮಾತ್ರ ಸದ್ಭಳಕೆ ಮಾಡಿಕೊಂಡಿದೆ ಎಂಬ ಮಾತಿದೆ. ಅಲ್ಲದೇ ಕಳೆದ 2010ರ ಡಿಸೆಂಬರ್‌ 30ರಂದು ನ್ಯಾಯಾಧಿಕರಣದ ಅಂತಿಮ ತೀರ್ಪು ಬಂದಿದ್ದು, ರಾಜ್ಯಕ್ಕೆ 177 ಟಿಎಂಸಿ ನೀರು ಹಂಚಿಕೆ ಮಾಡಿ, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಲು ಅನುಮತಿ ಕೊಟ್ಟಿದೆ. 177 ಟಿಎಂಸಿ ಅಡಿ ನೀರು ಕೊಟ್ಟು, 9 ವರ್ಷವಾದರೂ ಈ ವರೆಗೆ ನೀರು ಬಳಕೆ ಮಾಡಿಕೊಂಡಿಲ್ಲ. (2010ರಿಂದ 50 ವರ್ಷದೊಳಗೆ ಸಂಪೂರ್ಣ ನೀರು ಬಳಸಿಕೊಳ್ಳಲು ನ್ಯಾಯಾಧಿಕರಣ ಸೂಚನೆ ಕೂಡ ಕೊಟ್ಟಿದೆ) ಬೇಸಿಗೆಯಲ್ಲಿ ಕೊಯ್ನಾದಿಂದ ನೀರು ಬಿಡಿ ಎಂದು ಮಹಾರಾಷ್ಟ್ರದತ್ತ ಬೇಡಿಕೆ ಇಡುವುದು ತಪ್ಪಿಲ್ಲ.

ಯೋಜನಾ ವೆಚ್ಚ ಮೂರು ಪಟ್ಟು ಹೆಚ್ಚಳ: ಇಡೀ ರಾಜ್ಯದಲ್ಲೇ ಅತಿ ದೊಡ್ಡ ನೀರಾವರಿ ಯೋಜನೆ ಎಂಬ ಹೆಸರು ಯುಕೆಪಿಗಿದೆ. 3ನೇ ಹಂತದಲ್ಲಿ 1,23,640 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. 94,640 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾದರೆ, 4,315 ಎಕರೆ ಪುನರ್‌ ವಸತಿ ಕೇಂದ್ರಗಳ ನಿರ್ಮಾಣಕ್ಕಾಗಿ ಅಗತ್ಯವಿದೆ. ಕಾಲುವೆ ನಿರ್ಮಾಣಕ್ಕಾಗಿ 24,685 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಹೀಗೆ 12 ಗ್ರಾಮಗಳು ಪೂರ್ಣ, 10 ಗ್ರಾಮಗಳು ಭಾಗಶಃ ಮುಳುಗಡೆಯಾಗುವ ಜತೆಗೆ 1,23,640 ಎಕರೆ ಭೂಮಿ, ಆಲಮಟ್ಟಿ ಜಲಾಶಯ 524.256 ಮೀಟರ್‌ಗೆ ಎತ್ತರಿಸಿದಾಗ ಕಳೆದುಕೊಳ್ಳಬೇಕಾಗುತ್ತದೆ. ಈ 3ನೇ ಹಂತದ ಯೋಜನೆಗೆ 2012ರ ಜನವರಿ 24ರಂದು 17,206.39 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿಗೆ ಅಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೀಗ ಈ ಯೋಜನಾ ವೆಚ್ಚದ ಮೂರು ಪಟ್ಟು ಹೆಚ್ಚಳವಾಗಿದೆ. ಭೂಸ್ವಾಧೀನಕ್ಕಾಗಿಯೇ 50 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.