ಶ್ರೀಶೈಲ ಗಲಾಟೆ: ಗಾಯಾಳು ಬೆಂಗಳೂರು ಆಸ್ಪತ್ರೆಗೆ ದಾಖಲು
ರಾಜ್ಯ ಸರ್ಕಾರದಿಂದಲೇ ಚಿಕಿತ್ಸೆಗೆ ಸಕಲ ವ್ಯವಸ್ಥೆ
Team Udayavani, Apr 2, 2022, 10:26 AM IST
ಬಾಗಲಕೋಟೆ: ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲಂನಲ್ಲಿ ಕರ್ನಾಟಕದ ಪಾದಯಾತ್ರಿಕರು ಹಾಗೂ ಅಲ್ಲಿನ ವ್ಯಾಪಾರಸ್ಥರೊಂದಿಗೆ ನಡೆದ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೀಳಗಿ ತಾಲೂಕು ಜಾನಮಟ್ಟಿಯ ಶ್ರೀಶೈಲ ವಾರಿಮಠನನ್ನು ಕರ್ನೂಲ್ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ತೆಂಗಿನಕಾಯಿ ಸುಲಿಯುವ ಕಬ್ಬಿಣದ ರಾಡ್ನಿಂದ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಸುಮಾರು 10ಕ್ಕೂ ಹೆಚ್ಚು ಹೊಲಿಗೆ ಹಾಕಲಾಗಿದೆ. ಕರ್ನೂಲ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರವೇ ಮಾಡಿದ್ದು, ರಾಯಚೂರಿನ ಡಿವೈಎಸ್ಪಿ, ಶುಕ್ರವಾರ ಬೆಳಗ್ಗೆ ಕರ್ನೂಲ್ ಆಸ್ಪತ್ರೆಗೆ ಭೇಟಿ ನೀಡಿ, ಬೆಂಗಳೂರಿಗೆ ರವಾನಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದಾರೆ ಎಂದು ಗಾಯಗೊಂಡಿರುವ ಶ್ರೀಶೈಲ ವಾರಿಮಠ ಅವರ ಸಹೋದರ ಶಿವು ವಾರಿಮಠ “ಉದಯವಾಣಿ’ಗೆ ತಿಳಿಸಿದ್ದಾರೆ.
ನಮ್ಮ ಸಹೋದರ ಶ್ರೀಶೈಲ ವಾರಿಮಠ ನಮ್ಮೂರಿನಿಂದ ಒಬ್ಬನೇ ಶ್ರೀಶೈಲಕ್ಕೆ ಬಂದಿದ್ದರು. ಬಾಗಲಕೋಟೆಯಿಂದ ಕರ್ನೂಲ್ವರೆಗೆ ರೈಲ್ವೆ ಮೂಲಕ ಬಂದಿದ್ದು, ಇಲ್ಲಿನ ಅಸಂಪುರದಿಂದ ಪಾದಯಾತ್ರೆ ಮೂಲಕ ತೆರಳಿದ್ದರು. ಈ ಗಲಾಟೆ ಹೇಗಾಯಿತು, ಏಕಾಯಿತು ಎಂಬುದು ಯಾವುದೂ ನನಗೆ ಗೊತ್ತಿಲ್ಲ. ಜಾನಮಟ್ಟಿಯ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಮೊದಲು ಸುದ್ದಿ ತಿಳಿಯಿತು. ಬಳಿಕ ಮೃತಪಟ್ಟಿದ್ದಾನೆ ಎಂದು ವದಂತಿಯೂ ಹರಡಿತ್ತು. ನಮಗೆ ತೀವ್ರ ಭಯವಾಗಿತ್ತು. ಹೀಗಾಗಿ ನಾನೇ ಸ್ವತಃ ಕರ್ನೂಲ್ಗೆ ಬಂದಿದ್ದೇನೆ ಎಂದರು.
ಕರ್ನೂಲ್ಗೆ ಬಂದಾಗ ಇಲ್ಲಿನ ವೈದ್ಯರು, ಪೊಲೀಸರು ಇದ್ದರು. ತಲೆಗೆ ಹೊಲಿಗೆ ಹಾಕಿರುವುದು ಮಾತ್ರ ಕಾಣುತ್ತಿತ್ತು. ನಮ್ಮ ಸಹೋದರನಿಗೆ ಪ್ರಜ್ಞೆ ಇದ್ದು, ನನ್ನನ್ನು ಗುರುತಿಸಿದ್ದಾನೆ. ಆದರೆ, ಮಾತು ಬರುತ್ತಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಕರ್ನೂಲ್ನಲ್ಲಿ ಭಾಷಾ ಸಮಸ್ಯೆಯಿಂದ ಅಲ್ಲಿನ ವೈದ್ಯರು, ಪೊಲೀಸರು ಏನು ಹೇಳಿದರು ಎಂಬುದೇ ತಿಳಿದಿಲ್ಲ. ರಾಯಚೂರು ಡಿವೈಎಸ್ಪಿಯವರು, ನೀವು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು. ಅವರೇ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಬೆಂಗಳೂರಿಗೆ ಆಗಮಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ