2 ತಿಂಗಳ ಪಡಿತರ ವಿತರಣೆ ಆರಂಭ
Team Udayavani, May 1, 2020, 5:01 PM IST
ಬಾಗಲಕೋಟೆ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ 700 ನ್ಯಾಯಬೆಲೆ ಅಂಗಡಿಗಳ ಮೂಲಕ ಏಪ್ರಿಲ್ ಮತ್ತು ಮೇ ಮಾಹೆಯ ಎರಡು ತಿಂಗಳಿನ ಪಡಿತರ ಧಾನ್ಯವನ್ನು ಮೇ 1ರಿಂದ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಪ್ರತಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.
ಎಪಿಎಲ್ ಕುಟುಂಬಗಳಿಗೂ ಸಹ ಏಕಸದಸ್ಯ ಕುಟುಂಬಕ್ಕೆ 5 ಕೆಜಿ, ಎರಡು ಮತ್ತು ಎರಡಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬಗಳಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ.ಗಳಂತೆ ನೀಡಲಾಗುತ್ತಿದೆ. ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತ ಹಾಗೂ ಹೊಸದಾಗಿ ಎಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ ಪ್ರತಿ ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ. ಅರ್ಜಿದಾರರು ಅರ್ಜಿ ಹಾಕಿದ ನಕಲು ಪ್ರತಿಯನ್ನು ನ್ಯಾಯಬೆಲೆ ಅಂಗಡಿಗೆ ನೀಡಿ ಆಹಾರ ಧಾನ್ಯ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್, ಓಟಿಪಿ ಮೂಲಕ ಪಡಿತರ ವಸ್ತುಗಳನ್ನು ಪಡೆದುಕೊಳ್ಳಬಹುದಾಗಿದೆ. ನ್ಯಾಯಬೆಲೆ ಅಂಗಡಿಕಾರರು ಕಡ್ಡಾಯ ಮಾಸ್ಕ್ ಅಥವಾ ಕರವಸ್ತ್ರ, ಹ್ಯಾಂಡ್ ಸ್ಯಾನಿಟೈಜರ್ ಗಳನ್ನು ಬಳಸಬೇಕು. ಪ್ರತಿದಿನ 50ರಿಂದ 70 ಪಡಿತರ ಚೀಟಿದಾರರಿಗೆ ಮಾತ್ರ ಟೋಕನ್ ನೀಡಿ, ಸಾಮಾಜಿಕ ಅಂತರ, ಸ್ವಚ್ಛತೆ ಕಾಯ್ದುಕೊಂಡು ಅಂಗಡಿ ಎದುರು ಚೌಕ್ ಬಾಕ್ಸ್ ಹಾಕಿ. ನಿಯಮಾನುಸಾರ ಪಡಿತರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ