10 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ
Team Udayavani, Oct 4, 2019, 2:22 PM IST
ಮಹಾಲಿಂಗಪುರ: ಹೊಸದಾಗಿ ನಿರ್ಮಿಸುತ್ತಿರುವ ಸಾಮೂಹಿಕ ಶೌಚಾಲಯಗಳನ್ನು ಮಾದರಿಯಾಗಿ ನಿರ್ಮಿಸಿ, ಅವುಗಳ ನಿರ್ವಹಣೆ ಮತ್ತು ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.
ಪಟ್ಟಣದ ಕೇಂಗೇರಿಮಡ್ಡಿಯ ವಾರ್ಡ್ ನಂಬರ 13ರಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯಲ್ಲಿ ಸುಮಾರು 10.07 ಲಕ್ಷ ವೆಚ್ಚದ ಸಾಮೂಹಿಕ ಶೌಚಾಲಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದಅವರು, ಕೇಂಗೇರಿಮಡ್ಡಿಯಲ್ಲಿ ಮಹಿಳೆಯರು – ಪರುಷರಿಗೆ ಶೌಚಾಲಯದ ಸಮಸ್ಯೆ ತೀವ್ರವಾಗಿದೆ. ಅದಕ್ಕಾಗಿ ಈಗ ಸಾಮೂಹಿಕ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಕೆಂಗೇರಿಮಡ್ಡಿ ಸುತ್ತಲಿರುವ ಅತಿಕ್ರಮಣ ಸರಕಾರಿ ಜಾಗೆ ಗುರುತಿಸಿ, ಬೇಲಿ ಹಾಕಿ, ಅದೇ ಜಾಗದಲ್ಲಿ ಬರುವ ದಿನಗಳಲ್ಲಿ ಅಗತ್ಯವಿರುವಷ್ಟು ಸಾಮೂಹಿಕ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಕೆಂಗೇರಿಮಡ್ಡಿಯನ್ನು ಬಯಲು ಶೌಚ ಮುಕ್ತ ಪಟ್ಟಣವನ್ನಾಗಿಸಬೇಕು ಎಂದು ಶಾಸಕ ಸವದಿ, ಮುಖ್ಯಾಧಿಕಾರಿ ಬಾಬುರಾವ ಕಮತಗಿ ಅವರಿಗೆ ಆದೇಶಿಸಿದರು.
ತೇರದಾಳ ಮತಕ್ಷೇತ್ರದ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಬಸನಗೌಡ ಪಾಟೀಲ, ಕಾರ್ಯದರ್ಶಿ ಆನಂದ ಕಂಪು, ವಾರ್ಡ್ ಸದಸ್ಯ ಶೇಖರ ಅಂಗಡಿ, ಪುರಸಭೆ ಸದಸ್ಯ ಬಸವರಾಜ ಹಿಟ್ಟಿನಮಠ, ಮುಖ್ಯಾಧಿಕಾರಿ ಬಾಬುರಾವ ಕಮತಗಿ, ಬಿಜೆಪಿ ಮುಖಂಡರಾದ ಚನಬಸು ಹುರಕಡ್ಲಿ, ಚನ್ನಪ್ಪ ರಾಮೋಜಿ, ಪ್ರಶಾಂತ ಮುಕ್ಕೆನ್ನವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್