ನೇಕಾರ ಸಮುದಾಯದಲ್ಲಿ ಹರ್ಷದ ಝೇಂಕಾರ


Team Udayavani, Mar 9, 2021, 2:40 PM IST

ನೇಕಾರ ಸಮುದಾಯದಲ್ಲಿ ಹರ್ಷದ ಝೇಂಕಾರ

ಸಾಂದರ್ಭಿಕ ಚಿತ್ರ

ಗುಳೇದಗುಡ್ಡ: ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್‌ನಲ್ಲಿ ಗುಳೇದಗುಡ್ಡಕ್ಕೆ ಜವಳಿ ಪಾರ್ಕ್‌ ಸ್ಥಾಪನೆಗೆ ಘೋಷಣೆ ಮಾಡಿದ್ದು, ಪಟ್ಟಣದ ಜನರಲ್ಲಿಸಂತಸ ಮೂಡಿಸಿದೆ. ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ.

ಮಾಜಿ ಸಿಎಂ, ವಿಪಕ್ಷ ನಾಯಕ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರ ಪ್ರಯತ್ನ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾಳಜಿಯ ಫಲವಾಗಿ ಜವಳಿ ಪಾರ್ಕ್‌ ಘೋಷಣೆಯಾಗಿದೆ. ಗುಳೇದಗುಡ್ಡ ಪಟ್ಟಣ ಮೂಲತಃ ನೇಕಾರಿಕೆಪಟ್ಟಣವಾಗಿದ್ದು, ನೇಕಾರಿಕೆಗೆ ಸರಿಯಾದ ಪ್ರೋತ್ಸಾಹ ಸಿಗದಿರುವುದಕ್ಕೆ ಪಟ್ಟಣದಿಂದ 10-15 ಸಾವಿರದಷ್ಟು ಜನರು ಬೆಂಗಳೂರು, ಪುಣೆ, ನಾಸಿಕ್‌ ಸೇರಿದಂತೆ ಅನೇಕ ಕಡೆ ಉದ್ಯೋಗ ಅರಸಿ ಗುಳೆಹೋಗಿದ್ದಾರೆ. ಇದರಿಂದ ಮತಕ್ಷೇತ್ರ ಸಹ ಕೈ ತಪ್ಪಿ ಹೋಗಿತ್ತು. ಮತ್ತಷ್ಟು ಅಭಿವೃದ್ಧಿಯಿಂದ ಹಿಂದೆ ಸರಿದಿತ್ತು. ಹೀಗಾಗಿ ಪಟ್ಟಣದ ಜನರಿಗೆ ಉದ್ಯೋಗ ಕಲ್ಪಿಸಲು ಜವಳಿ ಪಾರ್ಕ್‌ ಸ್ಥಾಪನೆಗೆ ಆಗ್ರಹಿಸುತ್ತ ಬರಲಾಗಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕರಾದ ಮೇಲೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸರಕಾರಕ್ಕೆ ಮೇಲಿಂದ ಮೇಲೆ ಪತ್ರಗಳನ್ನು ಬರೆಯುವ ಮೂಲಕ ಕ್ಷೇತ್ರದಲ್ಲಾಗಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರುವಲ್ಲಿ ಹಚ್ಚಿನ ಕಾಳಜಿ ವಹಿಸಿದ್ದಾರೆ. ಅವರ ಕಾಳಜಿಯ ಪರಿಣಾಮವೇ ಇಂದು ಜವಳಿ ಪಾರ್ಕ್‌ ಬಜೆಟ್‌ನಲ್ಲಿ ಘೋಷಣೆಯಾಗಿದೆ.

ಗುಳೇದಗುಡ್ಡಕ್ಕೆ ಜವಳಿ ಪಾರ್ಕ್‌ ಸ್ಥಾಪನೆ ಕೇವಲ ಘೋಷಣೆಯಷ್ಟೇ ಆಗದೇ ಕೂಡಲೇಕಾರ್ಯರೂಪಕ್ಕೆ ಬರಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ. ಬಜೆಟ್‌ನಲ್ಲಿ ಜವಳಿ ಪಾರ್ಕ್‌ ಮಂಜೂರು ಮಾಡಿದ್ದು, ಜನರಲ್ಲಿ ಸಂತಸದ ವಿಚಾರವಾಗಿದ್ದು, ಅದರ ಜತೆಗೆ ಅವಿಪಕ್ಷ ನಾಯಕ ಶಾಸಕ ಸಿದ್ದಾಮಯ್ಯನವರು ನೂತನ ತಾಲೂಕಿಗೆ ಸಂಪೂರ್ಣ ಆಡಳಿತ ನೀಡಲು ಮಿನಿ ವಿಧಾನಸೌಧ, ತಾಲೂಕುಕೋರ್ಟ್‌ ಕಟ್ಟಡ ನಿರ್ಮಾಣ, ಗುಳೇದಗುಡ್ಡನಗರದಲ್ಲಿ ಐತಿಹಾಸಿಕ ಪ್ರವಾಸಿ ತಾಣಗಳ ಟ್ರೀ ಪಾರ್ಕ್‌ ಸ್ಥಾಪನೆ, ಶ್ರಿ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಘಟಕ ಸೇರಿದಂತೆ ಇನ್ನಿತರೆಬೇಡಿಕೆಗಳನ್ನು ಬಜೆಟ್‌ನಲ್ಲಿ ಘೋಷಿಸಬೇಕೆಂದುಪತ್ರ ಬರೆದಿದ್ದರು. ಸದ್ಯ ಜವಳಿ ಪಾರ್ಕ್‌ ಒಂದೇ ಘೋಷಣೆ ಮಾಡಿದ್ದು, ಸರಕಾರ ಆ ಎಲ್ಲ ಬೇಡಿಕೆ ಈಡೇರಿಸಬೇಕಿದೆ.

ಗುಳೇ ಹೋಗುವುದನ್ನು ತಡೆಗಟ್ಟಲು ಜವಳಿಪಾರ್ಕ್‌ ಸ್ಥಾಪನೆಮಾಡುವ ನಿರ್ಧಾರ ಮಂಡನೆ ಹಾಗೂ ಸಂಕಷ್ಟದಲ್ಲಿರುವ ಕೈಮಗ್ಗದ ನೇಕಾರರಿಗೆ ನೆರವು ನೀಡುವಉದ್ದೇಶದಿಂದ ಜಾರಿಗೆ ತಂದ ನೇಕಾರರಸಮ್ಮಾನ್‌ ಯೋಜನೆ ಪ್ರಸಕ್ತ ಸಾಲಿಗೂ ಮುಂದುವರಿಸಿರುವುದು ಉತ್ತಮನಿರ್ಧಾರವಾಗಿದೆ. – ಸಿದ್ದು ಅರಕಾಲಚಿಟ್ಟಿ, ಬಿಜೆಪಿ ಉಪಾಧ್ಯಕ್ಷ ಬಾದಾಮಿ ಮಂಡಳ

ಮುಖ್ಯಮಂತ್ರಿಯಡಿಯೂರಪ್ಪನವರು ಬಜೆಟ್‌ನಲ್ಲಿಗುಳೇದಗುಡ್ಡ ಪಟ್ಟಣದಲ್ಲಿಜವಳಿ ಪಾರ್ಕ್‌ಘೋಷಿಸಿರುವುದು ಸಂತಸದ ವಿಷಯ. ಪಾರ್ಕ್‌ ನಿರ್ಮಾಣದಿಂದಪಟ್ಟಣದ ನೇಕಾರರಿಗೆ ಅನುಕೂಲವಾಗಲಿದ್ದು, ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ. ಜವಳಿ ಪಾರ್ಕ್‌ ಘೋಷಣೆ ಮಾಡಿದ ಯಡಿಯೂರಪ್ಪನವರಿಗೆ ಧನ್ಯವಾದಗಳು. –ಸಂಪತ್‌ ರಾಠಿ, ಬಿಜೆಪಿ ಮುಖಂಡರು , ಗುಳೇದಗುಡ್ಡ

ಗುಳೇದಗುಡ್ಡ ನಗರಕ್ಕೆ ಜವಳಿ ಪಾರ್ಕ್‌ ಸ್ಥಾಪನೆಗೆ ಅನುಮೋದನೆನೀಡಿರುವ ರಾಜ್ಯದಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಯುವಮುಖಂಡರಾದ ಹೊಳೆಬಸು ಶೆಟ್ಟರ್‌ ಅವರಿಗೆ ಧನ್ಯವಾದಗಳು. – ಜುಗಲಕಿಶೋರ್‌ ಭಟ್ಟಡ್‌, ಅಧ್ಯಕ್ಷರು, ಗುಳೇದಗುಡ್ಡ ಹ್ಯಾಂಡ್‌ಲ್ಯೂಮ್‌ ಅಸೋಸಿಯೇಶನ್

ಗುಳೇದಗುಡ್ಡ ಪಟ್ಟಣಕ್ಕೆ ಜವಳಿ ಪಾರ್ಕ್‌ ಸ್ಥಾಪನೆ ಮಾಡಬೇಕೆಂಬುದು ಹಲವು ದಿನಗಳ ಬೇಡಿಕೆಯಾಗಿತ್ತು. ಸಿದ್ದರಾಮಯ್ಯನವರು ಸರಕಾರಕ್ಕೆ ಮೇಲಿಂದ ಮೇಲೆ ಪತ್ರ ಬರೆಯುವ ಮೂಲಕ ಜವಳಿ ಪಾರ್ಕ್‌ ಸ್ಥಾಪನೆಗೆ ಒತ್ತು ನೀಡಿದ್ದರು. ಇಂದು ಯಡಿಯೂರಪ್ಪನವರುಬಜೆಟ್‌ನಲ್ಲಿ ಘೋಷಿಸಿದ್ದು ಸಂತಸ ತಂದಿದೆ.  –ಸಂಜಯ ಬರಗುಂಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಾಮನಿರ್ದೇಶಿತ ಸದಸ್ಯ,ಗುಳೇದಗುಡ್ಡ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಮಂಡಿಸಿದ ಬಜೆಟ್‌ ಭಾಷಣದ ಬಜೆಟ್‌ ಆಗಿದೆ. ಯಾವುದೇ ಅಭಿವೃದ್ಧಿ ಪರ ಯೋಜನೆಗಳು ಅದರಲ್ಲಿ ಇಲ್ಲ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರನ್ನು ಪುನಃಶ್ಚೇತನಗೊಳಿಸುವ ಯೋಜನೆಗಳು ಕಾಣದೇ ಅನ್ನದಾತನ ಆಸೆ ಆಕಾಂಕ್ಷೆಗಳಿಗೆ ನಿರಾಸೆ ಒದಗಿಸಿದೆ. ಈ ಬಜೆಟ್‌ ಬಕಾಸುರ ಹೊಟ್ಟೆಗೆ ಹಾಕಿದಂತಾಗಿದೆ.  -ಶರಣು ಬೆಲ್ಲದ, ಹುನಗುಂದ ಪುರಸಭೆ ಅಧ್ಯಕ್ಷರು

 

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.