ಮೀಸಲಾತಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಕೂಡಲಸಂಗಮ ಶ್ರೀ


Team Udayavani, Jul 9, 2024, 5:49 PM IST

ಮೀಸಲಾತಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಕೂಡಲಸಂಗಮ ಶ್ರೀ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಪಂಚಮಸಾಲಿ ಮೀಸಲಾತಿ ಕುರಿತಂತೆ ಚರ್ಚೆ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿ ಅಧಿ ವೇಶನದ ಮುಕ್ತಾಯದ ನಂತರ ಒಂದು ತಿಂಗಳ ಕಾಲಾವಕಾಶ ಕೇಳಿದ್ದರು. ಹೊಸ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರೂ ಸರ್ಕಾರ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡುತ್ತಿಲ್ಲ ಮತ್ತು ನಮಗೆ ಸೂಕ್ತ ಸ್ಪಂದನೆಯನ್ನು ರಾಜ್ಯ ಸರ್ಕಾರ ನೀಡದೆ ಇರುವುದರಿಂದ ನಾವು ಮತ್ತೂಮ್ಮೆ ಹೋರಾಟಕ್ಕೆ ಇಳಿದಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಸ್ಥಳೀಯ ಶಾಸಕ ಸಿದ್ದು ಸವದಿ ಅವರ ಮನೆಯಲ್ಲಿ ಪತ್ರ ಚಳವಳಿಯ ಮೂಲಕ ಕೈಗೊಂಡ ಮೀಸಲಾತಿ ಹೋರಾಟದ ಅಂಗವಾಗಿ ಆಗ್ರಹ ಮನವಿ ಪತ್ರವನ್ನು ನೀಡಿ ಮಾತನಾಡಿದರು.

ನಮ್ಮ ಸಮಾಜದ ಯುವಕರು ಉದ್ಯೋಗ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ನಾವು ನ್ಯಾಯಯುತವಾದ ಹಕ್ಕನ್ನು ಕೇಳುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮನ್ನು 2 ಡಿ ಪ್ರವರ್ಗಕ್ಕೆ ಸೇರಿಸಿ ಶೇ. 7ರಷ್ಟು ಮೀಸಲಾತಿಯನ್ನು ನೀಡಿತ್ತು. ಆದರೆ, ಒಂದು ವರ್ಷವಾದರೂ ಇದು ಅನುಷ್ಠಾನಗೊಳ್ಳದೆ ಇರುವುದರಿಂದ ನಮ್ಮ ಸಮಾಜದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ.

ಸಮಾಜದ ಜನಪ್ರತಿನಿಧಿಗಳು ಸಮಾಜ ಋಣ ತೀರಿಸುವ ಸಲುವಾಗಿ ಹೋರಾಟದಲ್ಲಿ ಭಾಗವಹಿಸಬೇಕು. ಮೂರುವರೆ ವರ್ಷಗಳ
ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೂ ನಮಗೆ ನಮ್ಮ ಹಕ್ಕು ದೊರೆತಿಲ್ಲ. ಮುಂಬರುವ ಮುಂಗಾರು ಅಧಿವೇಶನದಲ್ಲಿ
ಮೀಸಲಾತಿ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಧಾನ ಸಭೆಯ ಅಧ್ಯಕ್ಷರಿಗೂ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಪತ್ರ ಸ್ವೀಕರಿಸಿದ ಶಾಸಕ ಸಿದ್ದು ಸವದಿ ಮಾತನಾಡಿ, ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲಿಸುವುದಾಗಿ
ತಿಳಿಸಿದರು.ಬೊಮ್ಮಾಯಿ ಸರ್ಕಾರ ಬೇರೆ ಯಾವುದೆ ಪಂಗಡಕ್ಕೂ ತೊಂದರೆಯಾಗದಂತೆ ನಮಗೆ ಮೀಸಲಾತಿಯನ್ನು ನೀಡಿತ್ತು. ಆದರೆ, ಹೊಸ ಸರ್ಕಾರ ಬಂದು ವರ್ಷ ಕಳೆದರೂ ಯಾವುದೆ ಮೀಸಲಾತಿ ಅನುಷ್ಠಾನಗೊಂಡಿಲ್ಲ.

ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡದ ಜನಪ್ರತಿನಿಧಿಗಳ ಮನೆಯ ಎದುರು ಸಮಾಜ ಬಾಂಧವರು ಧರಣಿ ನಡೆಸುವಂತೆ ಸಿದ್ದು ತಿಳಿಸಿದರು.

ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಫಿರೋಜಿ, ಜಮಖಂಡಿ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಈಟಿ ಮಾತನಾಡಿದರು. ಶ್ರೀಶೈಲ ದಲಾಲ, ಸಿದ್ದನಗೌಡ ಪಾಟೀಲ, ಬಾಬಾಗೌಡ ಪಾಟೀಲ, ಧರೆಪ್ಪ ಉಳ್ಳಾಗಡ್ಡಿ, ಈಶ್ವರ ಬಿರಾದಾರ ಪಾಟೀಲ, ಲಕ್ಕಪ್ಪ ಪಾಟೀಲ, ಹನಮಂತ ಶಿರೋಳ, ಚನಬಸಪ್ಪ ಬಾಗೇವಾಡಿ, ಪವಿತ್ರಾ ತುಕ್ಕನ್ನವರ, ಗೌರಿ ಮಿಳ್ಳಿ ಹಾಜರಿದ್ದರು.

Ad

ಟಾಪ್ ನ್ಯೂಸ್

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ… ಕಾಫಿನಾಡಿಗರ ದಶಕಗಳ ಕನಸು ಇಂದು ನನಸು

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ ಆರಂಭ… ಕಾಫಿನಾಡಿಗರ ದಶಕಗಳ ಕನಸು ನನಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

5-

Rabkavi Banhatti: ಕುಡುಕರ ತಾಣವಾದ ಖಾಲಿ ನಿವೇಶನಗಳು

14

Mudhol: ಸ್ವಂತ ಜಮೀನಿದ್ದರೂ ಕೃಷಿ ಮಾಡದ ಸ್ಥಿತಿ

4-rabakavi

Rabkavi Banhatti: ಆಯ ತಪ್ಪಿದರೆ ಪ್ರಾಣಕ್ಕೆ ಕುತ್ತು;ನದಿ ತೀರದಲ್ಲಿ ಯವಕರ ಸೆಲ್ಫಿ ಹುಚ್ಚಾಟ

Kulgeri Cross: ನಿಲ್ದಾಣವಿದ್ದರೂ ನಿಲ್ಲದ ಬಸ್… ಪ್ರಯಾಣಿಕರ ಪ್ರತಿಭಟನೆ, ಬಸ್ ಚಾಲಕರ ವಾದ

Kulgeri Cross: ನಿಲ್ದಾಣವಿದ್ದರೂ ನಿಲ್ಲದ ಬಸ್… ಪ್ರಯಾಣಿಕರ ಪ್ರತಿಭಟನೆ, ಬಸ್ ಚಾಲಕರ ವಾದ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Shimoga: Firefighters rescue cow that fell into canal

Shimoga: ಕಾಲುವೆಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

13-wedding

Grand Functions: ಆಡಂಬರ ಆವಶ್ಯಕವೇ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.