ರಾಜ್ಯ ಹೆದ್ದಾರಿ ಕಾಮಗಾರಿಗೆ ಹಸಿರು ನಿಶಾನೆ
Team Udayavani, Feb 26, 2020, 12:37 PM IST
ಗುಳೇದಗುಡ್ಡ: ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ ಕಾಮಗಾರಿ ತಡೆ ಇತ್ಯರ್ಥಗೊಂಡಿದ್ದು, ಕಾಮಗಾರಿ ಆರಂಭಗೊಳ್ಳುವ ಹಾದಿ ಸುಗಮಗೊಂಡಿದೆ.
ಕಳೆದ ತಿಂಗಳು ಗುತ್ತಿಗೆದಾರರೊಬ್ಬರು ನ್ಯಾಯಾಲಯದ ಮೋರೆ ಹೋಗಿದ್ದರಿಂದ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ಕಾಮಗಾರಿಗೆ ತಡೆ ಬಿದ್ದಿತ್ತು. ಈಗ ಎಲ್ಲವೂ ಬಗೆಹರಿದಿದೆ. ಹಲವು ವರ್ಷಗಳಿಂದ ಇಂಜಿನವಾರಿಯಿಂದ ಗುಳೇದಗುಡ್ಡ ರೈಲ್ವೇ ಸ್ಟೇಶನ್ಗೆ ಸಂಪರ್ಕ ಕಲ್ಪಿಸುವ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ರಸ್ತೆ ಹಾಳಾಗಿದೆ. ಕಾಮಗಾರಿಯಿಂದ ಈ ಭಾಗದ ಜನರ ಬಹುದಿನಗಳ ಸಮಸ್ಯೆ ಬಗೆಹರಿಯಲಿದೆ.
35ಕೋಟಿ ವೆಚ್ಚದ ಕಾಮಗಾರಿ: ಪಟ್ಟಣದ ಈ ರಸ್ತೆ ನಿರ್ಮಾಣಕ್ಕೆ ಈ ಹಿಂದಿನ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ 35 ಕೋಟಿ ವೆಚ್ಚದಲ್ಲಿ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ನೀಡಿತ್ತು. ಕಾಮಗಾರಿ ತಡೆ ಇತ್ಯರ್ಥಗೊಂಡಿದ್ದು, ಸರಕಾರದ ಮುಖ್ಯಕಾರ್ಯದರ್ಶಿ ಟೆಂಡರ್ಗೆ ಅನುಮೋದನೆ ನೀಡಬೇಕಿದೆ. ಫೆ. 29 ಇಲ್ಲವೇ ಮಾ.1ರಂದು ರಸ್ತೆ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಭೂಮಿಪೂಜೆ ನೆರವೇರಿಸಲಿದ್ದು, ಮಾ.15ರೊಳಗಾಗಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು