ಗಬ್ಬೆದ್ದು ನಾರುತ್ತಿದೆ ನೀರು ಶುದ್ಧೀಕರಣ ಘಟಕ


Team Udayavani, Apr 27, 2019, 12:20 PM IST

bag-3

ಬನಹಟ್ಟಿ: ಇಲ್ಲಿಯ ಹಳೆ ನೀರಿನ ಟಾಕಿ ಹತ್ತಿರವಿರುವ ಕುಡಿಯುವ ನೀರಿನ ಶುದ್ಧೀಕರಣ ಘಟಕದಿಂದಲೇ ನಗರದ ಜನತೆಗೆ ನಗರಸಭೆ ಕುಡಿಯುವ ನೀರು ಸರಬರಾಜು ಮಾಡುತ್ತಿದೆ. ಆದರೆ, ಶುದ್ಧೀಕರಣ ಘಟಕ ಗಬ್ಬೆದ್ದು ನಾರುತ್ತಿದ್ದು, ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡಿಲ್ಲ.

ಕೃಷ್ಣಾ ನದಿಯಿಂದ ಲಕ್ಷಾಂತರ ಲೀಟರ ನೀರು ನಿತ್ಯ ಘಟಕದಲ್ಲಿ ಸಂಗ್ರಹವಾಗುತ್ತದೆ. ಆದರೆ, ಕಳೆದ ಹಲವಾರು ದಿನಗಳಿಂದ ನದಿ ಸಂಪೂರ್ಣ ಬತ್ತಿದ್ದರಿಂದ ಘಟಕದ ಎಲ್ಲ ಹೊಂಡಗಳು ಒಣಗಿವೆ. ಇಲ್ಲಿಯ ಎಲ್ಲ ಹೊಂಡಗಳಲ್ಲಿ ಟನ್‌ಗಟ್ಟಲೇ ಮಣ್ಣು ಬಿದ್ದು ಖಾಲಿಯಾದ ಕೆರೆಕಟ್ಟೆಗಳು ಒಣಗಿದ ಹಾಗೆ ಮಣ್ಣಿನ ಬಿರುಕು ಕಾಣುತ್ತಿವೆ. ಅಲ್ಲದೆ ಅಳಿದುಳಿದ ನೀರಿನಲ್ಲಿ ಕ್ರಿಮಿಕೀಟಗಳು ಉತ್ಪತ್ತಿಯಾಗಿವೆ. ಹೊಸದಾಗಿ ಆರಂಭಿಸಿರುವ ಘಟಕದಲ್ಲಿಯೂ ನೀರು ಪಾಚಿಗಟ್ಟಿದ್ದು, ಜನರು ಆತಂಕಗೊಂಡಿದ್ದಾರೆ.

ಅನೈತಿಕ ಚಟುವಟಿಕೆಗಳ ಕೇಂದ್ರ: ಶುದ್ಧ ಕುಡಿಯುವ ನೀರಿನ ಘಟಕದ ಸುತ್ತ ಬಹಿರ್ದೆಸೆ ಮಾಡುವುದರ ಜೊತೆಗೆ ಅಲ್ಲಿಯೇ ಮದ್ಯ ಸೇವನೆ ಮಾಡಿ ಬಾಟಲಿ, ಪಾಕಿಟ್‌ಗಳನ್ನು ಎಸೆಯಲಾಗಿದೆ. ನೀರಿನ ಘಟಕದ ಸುತ್ತ ಮುಳ್ಳಿನ ಕಂಟಿ ಬೆಳೆದಿದ್ದು, ಸ್ವಚ್ಛ ಮಾಡಿಲ್ಲ.

ಈಗ ಶುದ್ಧೀಕರಣ ಘಟಕ ಸಂಪೂರ್ಣ ಖಾಲಿಯಾಗಿದೆ. ಈಗಲೇ ಇದರಲ್ಲಿರುವ ಮಣ್ಣು ಮತ್ತು ಇನ್ನೀತರ ಕಸ ಹೂಳೆತ್ತಲು ಸೂಕ್ತ ಸಮಯ. ನದಿಗೆ ನೀರು ಬಂದ ಮೇಲೆ ನೀರಿನ ಕೊರತೆ ಇರುವುದರಿಂದ ಅವಸರವಾಗಿ ಹಾಗೇ ನದಿಯಿಂದ ನೀರು ಸಂಗ್ರಹಿಸುವ ಕಾರ್ಯ ಮುಂದುವರಿಯಬಹುದು. ಈ ಗಲೀಜಾದ ಮಣ್ಣು ಹಾಗೇ ಉಳಿದು ಕಲ್ಮಶ ನೀರೇ ಪೂರೈಕೆಯಾಗಬಹುದು.

ಇಲ್ಲಿನ ನೀರು ಸಂಗ್ರಹ ಘಟಕದ ಹೊಂಡಗಳಲ್ಲಿನ ಮಣ್ಣು ತೆಗೆದು ಸ್ವಚ್ಛಗೊಳಿಸಬೇಕು. ಅಲ್ಲಿ ಯಾವುದೇ ಸುರಕ್ಷತೆಯಿಲ್ಲ. ಅಲ್ಲಿನ ಮಣ್ಣು ತೆಗೆದು, ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕು. ಜೊತೆಗೆ ಮಣ್ಣು ತೆಗೆಯುವುದರಿಂದ ಇಂತಹ ಸಂದರ್ಭದಲ್ಲಿ ನಮ್ಮ ಭಾಗಕ್ಕೆ ಇಲ್ಲಿ ಉಳಿಯುವ ನೀರು ಸುಮಾರು 20 ದಿನಗಳವರೆಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.