ಬೊಮ್ಮಾಯಿ ಸಂಪುಟ; ಜಿಲ್ಲೆಗೆ ಬಂಪರ್‌ ಖಾತೆ!  

ಕಾರಜೋಳರಿಗೆ ಜಲಸಂಪನ್ಮೂಲ-ನಿರಾಣಿಗೆ ಕೈಗಾರಿಕೆ­ಜಿಲ್ಲೆಗೆ ಬರಲಿ ಬೃಹತ್‌ ಕೈಗಾರಿಕೆಗಳು

Team Udayavani, Aug 8, 2021, 3:31 PM IST

ffryt

ವರದಿ: ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಜಿಲ್ಲೆಯ ಇಬ್ಬರು ನಾಯಕರಿಗೆ ಬಂಪರ್‌ ಖಾತೆ ದೊರೆತಿವೆ. ಮುಖ್ಯವಾಗಿ ಜಿಲ್ಲೆಗೆ ಆಗಲೇಬೇಕಾದ ಪ್ರಮುಖ ಯೋಜನೆಗಳಿಗೆ ವೇಗ ದೊರೆಯಲಿದೆ ಎಂಬ ಆಶಾಭಾವನೆ ಇಮ್ಮಡಿಗೊಳಿಸಿದೆ.

ಹೌದು, ಜಿಲ್ಲೆಯ ಮುಧೋಳ ಕ್ಷೇತ್ರ ಪ್ರತಿನಿಧಿಸುವ ಕ್ರಿಯಾಶೀಲ ನಾಯಕ ಗೋವಿಂದ ಕಾರಜೋಳರಿಗೆ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಈ ಖಾತೆ ಎಷ್ಟು ಪ್ರಮುಖವೋ, ಜಿಲ್ಲೆಯ ಮುಳುಗಡೆ, ಭೂಸ್ವಾಧೀನ, ಪುನರವಸತಿ ಕೇಂದ್ರ ಹಾಗೂ ನೀರಾವರಿ ವಿಷಯಗಳಲ್ಲಿ ಈ ಖಾತೆ ಅತ್ಯಂತ ಪ್ರಮುಖವಾಗಿದೆ.

ಮುಳುಗಡೆ ಪ್ರಕ್ರಿಯೆ ಪೂರ್ಣಗೊಳ್ಳಲಿ: 1993ರಲ್ಲಿ ಅಡಿಗಲ್ಲು ಹಾಕಿರುವ ಆಲಮಟ್ಟಿ ಜಲಾಶಯ ನಿರ್ಮಾಣ ಕಾರ್ಯ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಅಂದರೆ ನಂಬಲೇಬೇಕು. ಜಲಾಶಯವೇನೋ ಪೂರ್ಣಗೊಂಡಿದೆ. ಆದರೆ, ಜಲಾಶಯ ನಿರ್ಮಾಣದ ಮೂಲ ಆಶಯ ಇನ್ನೂ ಈಡೇರಿಲ್ಲ. 524.256 ಮೀಟರ್‌ ವರೆಗೂ ನೀರು ನಿಲ್ಲಿಸುವ ಪ್ರಕ್ರಿಯೆಗೆ ಸ್ವಯಃ ಕೃಷ್ಣಾ ನ್ಯಾಯಾಧೀಕರಣ ಅನುಮತಿ ನೀಡಿದರೂ ಅದಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ನೀರು ನಿಲ್ಲಿಸಲು ಮುನ್ನ ಕೈಗೊಳ್ಳಬೇಕಾದ ಎಲ್ಲಾ ಪೂರ್ವ ತಯಾರಿ ಕಾರ್ಯ ಗೊಂಡಿಲ್ಲ. ಪ್ರತಿ ವರ್ಷವೂ ಯುಕೆಪಿಗೆ ಮೊದಲ ಆದ್ಯತೆ ಕೊಡುತ್ತೇವೆ ಎಂಬ ಮಾತು ಕೇಳುತ್ತ ಬಂದಿದ್ದೇವೆ ಹೊರತು, ಅದು ಆಡಳಿತದ ರೂಪದಲ್ಲಿ ಜಾರಿಗೊಂಡಿಲ್ಲ.

ಜಲಾಶಯದ ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸಿದಾಗ, ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ 22 ಗ್ರಾಮಗಳು, 92 ಸಾವಿರ ಎಕರೆ ಭೂಮಿ ಮುಳುಗಡೆಯಾಗುತ್ತದೆ. ಅಲ್ಲದೇ ಸುಮಾರು 18 ಸಾವಿರಕ್ಕೂ ಹೆಚ್ಚು ಎಕರೆ ಭೂಮಿ ಕಾಲುವೆ ನಿರ್ಮಾಣ, 5 ಸಾವಿರಕ್ಕೂ ಎಕರೆ ಪುನರ್‌ವಸತಿ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಗಳಿಗೆ ಒಟ್ಟು 1.36 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಇದಕ್ಕಾಗಿ ಹೊಸ ಭೂಸ್ವಾಧೀನ ಕಾಯಿದೆಯಡಿ ಹೊರಡಿಸಿದ್ದ ಅಧಿಸೂಚನೆಗಳು ರದ್ದಾಗಿದ್ದು, ಅವುಗಳನ್ನು ಪುನಃ ಆದೇಶಿಸಿ, ಭೂಸ್ವಾಧೀನ ಮಾಡಿಕೊಳ್ಳಬೇಕಿದೆ. ಕಳೆದ 2014ರಿಂದಲೂ ಕುಂಟುತ್ತ ಸಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಕಾರಜೋಳರ ಕಾಲದಲ್ಲಾದರೂ ಪೂರ್ಣಗೊಳ್ಳಲಿ ಎಂಬ ಆಶಯ ವ್ಯಕ್ತವಾಗಿದೆ.

ಅನುದಾನದ ಲಭ್ಯತೆ ಸಿಗಲಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್‌ವಸತಿ ಕೇಂದ್ರ ಹಾಗೂ 9 ನೀರಾವರಿ ಉಪ ಯೋಜನೆಗಳು ಪೂರ್ಣಗೊಳ್ಳಲು ಕನಿಷ್ಠ 1 ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರದ ಒಂದು ವರ್ಷದ ಬಜೆಟ್‌ ಹಣ, ಈ ಯೋಜನೆಗೆ ತೆಗೆದಿಡಬೇಕು. ಆದರೆ, ಅದು ಒಂದೇ ವರ್ಷದಲ್ಲಿ ಸಾಧ್ಯವಿಲ್ಲ. ಹೀಗಾಗಿ ಕನಿಷ್ಠ 5 ವರ್ಷಗಳ ನಿಗದಿತ ಕಾರ್ಯ ಯೋಜನೆ ರೂಪಿಸಿ, ಪ್ರತಿವರ್ಷವೂ 25 ಸಾವಿರ ಕೋಟಿ ಅನುದಾನ ನೀಡಿದರೆ, ಈ ಯೋಜನೆ ಪೂರ್ಣಗೊಳ್ಳಲು ಸಾಧ್ಯ ಎಂಬ ಒತ್ತಾಯ ಕೇಳಿ ಬಂದಿದೆ.

ಕಳೆದ 2019ರಿಂದ ಇಲ್ಲಿಯ ವರೆಗೆ ಕೊರೊನಾ, ಪ್ರವಾಹದಿಂದ ಆರ್ಥಿಕ ಸ್ಥಿತಿಗತಿ ಸರಿಯಾಗಿಲ್ಲ. ಹೀಗಾಗಿ ಯಾವುದೇ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ಆದೇಶಗಳ ಪಾಲನೆಯಾಗಿಲ್ಲ. ಹೀಗಾಗಿ ಸರ್ಕಾರವೇ, ಭೂಸ್ವಾಧೀನ ಪ್ರಕ್ರಿಯೆ ನಿಧಾನಗೊಳಿಸಿದೆ. ಕೋರ್ಟ ಮೆಟ್ಟಿಲೇರಿದ ಕೇಸ್‌ಗಳನ್ನು ಇನ್ನೂ ಕೆಲ ತಿಂಗಳು ಕಾಲ ಮುಂದೂಡಲು ಮನವಿ ಮಾಡಿದೆ. ಹೀಗಾಗಿ ಸಧ್ಯದ ಪರಿಸ್ಥಿತಿಯಲ್ಲಿ ರೈತರಿಗೆ ಭೂ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಈ ವರ್ಷ ರೈತರಿಗೆ ನೀಡಲಿರುವ ಪರಿಹಾರಧನ ಅನುದಾನ ಒದಗಿಸಬೇಕಿದೆ.

ಸೂಕ್ತ ದರ ನಿಗದಿಯಾಗಲಿ: ಆಲಮಟ್ಟಿ ಜಲಾಶಯದ ಎತ್ತರದಿಂದ ಮುಳುಗಡೆಯಾಗುವ, ಕಾಲುವೆ, ಇತರೆ ಯೋಜನೆಗೆ ಭೂಸ್ವಾಧೀನಗೊಳ್ಳುವ ಭೂಮಿಗೆ ಇನ್ನೂ ಪರಿಹಾರ ನಿಗದಿಯಾಗಿಲ್ಲ. ಹೊಸ ಭೂಸ್ವಾಧೀನ ಕಾಯ್ದೆಯಡಿ ನಗರ ಮತ್ತು ಗ್ರಾಮೀಣ ಭಾಗಕ್ಕೆ 2 ಮತ್ತು ನಾಲ್ಕು ಪಟ್ಟು ಪರಿಹಾರ ನೀಡಿದರೂ, ಅದು ಎಕರೆಗೆ 10 ಲಕ್ಷ ದಾಟುವುದಿಲ್ಲ. ಇದಕ್ಕೆ ಕಾರಣ, ಭೂ ನೊಂದಣಿ ಬೆಲೆ ಏರಿಕೆ ಮಾಡದೇ ಇರುವುದು, ಇನ್ನೊಂದೆಡೆ ಸಬ್‌ ರಿಜಿಸ್ಟರ್‌ ಕಚೇರಿಯಲ್ಲಿ ನೋಂದಾಯಿಸಿದ ಬೆಲೆಗೆ ಎರಡು ಪಟ್ಟು ಪರಿಹಾರ ನೀಡಲಾಗುತ್ತಿದೆ. ಯಾವುದೇ ಭಾಗದಲ್ಲಿ ಖರೀದಿ ಮಾಡಿದ ವಾಸ್ತವ ಬೆಲೆಗಿಂತ ಕಡಿಮೆ ಹಣ ನಮೂದಿಸಲಾಗುತ್ತದೆ ಎಂಬುದು ಸ್ವತಃ ಸಚಿವರು, ಅಧಿಕಾರಿಗಳಿಗೂ ಗೊತ್ತು. ಹೀಗಾಗಿ ಯುಕೆಪಿ ವಿಶೇಷ ಪ್ರಕರಣವೆಂದು ಪರಿಗಣಿಸಿ, ನೀರಾವರಿ ಮತ್ತು ಖುಷ್ಕಿ ಭೂಮಿಗೆ ಬೆಲೆ ನಿಗದಿ ಮಾಡಬೇಕು ಎಂಬ ಕೂಗು ಇನ್ನೂ ಹಾಗೆಯೇ ಉಳಿದಿದೆ. ಈ ನಿಟ್ಟಿನಲ್ಲಿ ಜಿಲ್ಲೆಯವರೇ ಆದ ಗೋವಿಂದ ಕಾರಜೋಳರು, ಜಲ ಸಂಪನ್ಮೂಲ ಖಾತೆ ವಹಿಸಿಕೊಂಡಿದ್ದು, ಅವರಿಂದಲೇ ಈ ಬೆಲೆ ನಿಗದಿ ಕಾರ್ಯವಾಗಲಿ ಎಂಬುದು ಜಿಲ್ಲೆಯ ರೈತರ ಒಕ್ಕೋರಲ ಒತ್ತಾಯ.

ನಿರಾಣಿಗೆ ಕೈಗಾರಿಕೆ: ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ, ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಮೂಲಕ ಇಡೀ ವಿಶ್ವದ ಬಂಡವಾಳ ಹೂಡಿಕೆದಾರರನ್ನು ಕರ್ನಾಟಕದತ್ತ ಕರೆಸಿ, ಗಮನಾರ್ಹ ಕೆಲಸ ಮಾಡಿದ್ದ ಮುರುಗೇಶ ನಿರಾಣಿ ಅವರಿಗೆ ಈಗ ಮತ್ತೆ ಅದೇ ಖಾತೆ ದೊರೆತಿದೆ. ಹಿಂದೆ ಅವರು ಕೈಗಾರಿಕೆ ಸಚಿವರಾಗಿದ್ದ ವೇಳೆ ಜಿಲ್ಲೆ ಹಾಗೂ ಉತ್ತರಕರ್ನಾಟಕಕ್ಕೆ ಹಲವು ಕಾರ್ಖಾನೆ ತರುವ ಪ್ರಯತ್ನ ಮಾಡಿದ್ದರು. ಕೆಲವರು ವಿರೋಧ ಮಾಡಿದರೆ ಹೊರತು, ರೈತರ ಮನವೊಲಿಸಿ, ಜಿಲ್ಲೆಗೆ ಬೃಹತ್‌ ಕೈಗಾರಿಕೆ ತರುವ ನಿಟ್ಟಿನಲ್ಲಿ ಪಕ್ಷಾತೀತ ಕೆಲಸವಾಗಲಿಲ್ಲ. ಈಗಲಾದರೂ ಕೊರೊನಾ- ಪ್ರವಾಹದಿಂದ ಸಂಕಷ್ಟದಲ್ಲಿರುವ ಜಿಲ್ಲೆಯ ಜನರಿಗೆ ಉದ್ಯೋಗ-ಆರ್ಥಿಕ ಭದ್ರತೆ ದೊರೆಯುವ ನಿಟ್ಟಿನಲ್ಲಿ ಜಿಲ್ಲೆಗೆ ಅಗತ್ಯ ಹಾಗೂ ಸೂಕ್ತ ಕೈಗಾರಿಕೆಗಳು ಬರಲಿ ಎಂಬುದು ಪ್ರಜ್ಞಾವಂತರ ಒತ್ತಾಯ.

ಒಟ್ಟಾರೆ, ಜಿಲ್ಲೆಗೆ ಬೊಮ್ಮಾಯಿ ಸರ್ಕಾರದಲ್ಲಿ ಎರಡು ಪ್ರಮುಖ ಖಾತೆಗಳು ದೊರೆತಿವೆ. ವಿರೋಧ ಪಕ್ಷದಲ್ಲೂ ಎರಡೂ ಸದನದ ನಾಯಕರ ಸ್ಥಾನ ಇದೇ ಜಿಲ್ಲೆಗೆ ಒದಗಿವೆ. ಇದೀಗ ಜಿಲ್ಲೆಯ ನಾಯಕರು, ಸಮಗ್ರ ಅಭಿವೃದ್ಧಿ, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತ ಕೆಲಸ ಮಾಡಿ, ರಾಜ್ಯಕ್ಕೆ ಮಾದರಿಯಾಗಬೇಕಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.