ಅನಗತ್ಯವಾಗಿ ಸಂಚರಿಸಿದರೆ ಕಟ್ಟುನಿಟ್ಟಿನ ಕ್ರಮ


Team Udayavani, Apr 29, 2020, 3:44 PM IST

bk-tdy-3

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ  ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಮಖಂಡಿ,ಮುಧೋಳ ಪಟ್ಟಣಗಳಲ್ಲಿ ದ್ವಿಚಕ್ರಗಳ ವಾಹನಗಳು ವಿನಾಕಾರಣ ರಸ್ತೆಗಿಳಿದರೆ ಚಾಲಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾ| ಡಾ. ರಾಜೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ಸೀಲ್‌ಡೌನ್‌ ಪ್ರದೇಶಗಳಾದ ಅವಟಿಗಲ್ಲಿ, ಭಾರಪೇಟ ಗಲ್ಲಿ, ಖಾಟಿಕ ಗಲ್ಲಿ ಹಾಗೂ ಪೊಲೀಸ್‌ ಕ್ವಾರ್ಟರ್ì ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿ ಪರಿಶೀಲಿಸಿ ಅವರು ಮಾತನಾಡಿದರು. ನಗರದಲ್ಲಿ ಮಂಗಳವಾರ ಮತ್ತೆ ಮೂವರಿಗೆ

ಕೋವಿಡ್ 19  ಸೋಂಕು ದೃಢಪಟ್ಟಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 22 ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರೊಂದಿಗೆ ಪ್ರಥಮ ಸಂಪರ್ಕದ 350 ಹಾಗೂ ದ್ವಿತೀಯ ಸಂಪರ್ಕದಲ್ಲಿ 1660 ಜನರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ. ಜಮಖಂಡಿಯಲ್ಲಿ ಪ್ರಥಮ ಹಂತದ 591 ಜನರು, ದ್ವಿತೀಯ ಹಂತದ 2200 ಜನರು ಹೋಮ್‌ ಕ್ವಾರಂಟೈನ್‌ದಲ್ಲಿದ್ದಾರೆ ಎಂದರು.

ಮುಧೋಳ-ಜಮಖಂಡಿ ಪಟ್ಟಣದಲ್ಲಿ ವಿನಾಕಾರಣ ರಸ್ತೆಗಿಳಿಯುವ ಬೈಕ್‌ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಮನೆಯಲ್ಲಿದ್ದು, ಎಚ್ಚರಿಕೆ ವಹಿಸಬೇಕು. ವೈದ್ಯಕೀಯ ಸಂಬಂಧಿಸಿದ ವಿಷಯಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ಯಾವ ಕಾರಣಕ್ಕೂ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡುವುದಿಲ್ಲ. ಸರ್ಕಾರಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಸೇವೆ ಸಲ್ಲಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಜಮಖಂಡಿ ಪೊಲೀಸ್‌ ಕ್ವಾರ್ಟರ್ನಲ್ಲಿ ಮುಧೋಳ, ಮಹಾಲಿಂಗಪುರ, ಬನಹಟ್ಟಿ, ಸಾವಳಗಿ ಠಾಣೆಯಲ್ಲಿನ ಪೇದೆಗಳು ಸೇವೆಸಲ್ಲಿಸುವ ಠಾಣೆಯಲ್ಲಿ ವಾಸಿಸುವ ವ್ಯವಸ್ಥೆ ಮಾಡಲಾಗುತ್ತದೆ. ಸದ್ಯ ಹೊಂದಿರುವ ಕ್ವಾರ್ಟರ್ಸ್ ಗಳನ್ನು ಖಾಲಿ ಮಾಡುವಂತೆ ಕೋವಿಡ್‌-19 ಮುಗಿದ ನಂತರ ಆದೇಶಿಸುವುದಾಗಿ ಹೇಳಿದರು.

ಜನರಲ್ಲಿ ಗೊಂದಲ: ಕೋವಿಡ್ 19 ಭೀತಿಯಲ್ಲಿ ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಬ್ಯಾಂಕ್‌ಗಳ ಸಮಯ ಹೊಂದಾಣಿಕೆಯಿಂದ ಜನರಲ್ಲಿ ಗೊಂದಲ ಮೂಡುತ್ತಿದೆ. ಪೊಲೀಸ್‌ ಇಲಾಖೆ ಬೆಳಗ್ಗೆ 6 ಗಂಟೆಯಿಂದ 11 ಗಂಟೆಗೆ ಬಂದ್‌ ಮಾಡುವಂತೆ ಮೌಖೀಕವಾಗಿ ಹೇಳಿಕೆ ನೀಡುತ್ತಿದ್ದು, ಆದರೇ ಬ್ಯಾಂಕಿನವರು ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತ ನಿರ್ದೇಶನದ ಸುತ್ತೋಲೆ ಪತ್ರ ನೀಡಿದರೇ ಮುಖ್ಯ ಕಚೇರಿಯ ವ್ಯವಸ್ಥಾಪಕರ ಗಮನಕ್ಕೆ ತಂದು ಲಾಗಿನ್‌ ವ್ಯವಸ್ಥೆ ಬದಲಾವಣೆಗೊಂಡಲ್ಲಿ ಮಾತ್ರ ಹೊಸ ವೇಳೆಯಲ್ಲಿ ಕೆಲಸ ನಿರ್ವಹಿಸಲು ಸಾಧ್ಯ ಎಂದು ಕೆಲವು ಬ್ಯಾಂಕ್‌ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಬ್ಬಿಬಸವೇಶ್ವರ ಜಾತ್ರೆ ರದ್ದು: ತಾಲೂಕಿನ ಕಡಕೊಳ ಗ್ರಾಮದಲ್ಲಿ ಮೇ 4 ರಂದು ನಡೆಯಬೇಕಾಗಿದ್ದ ಶ್ರೀ ಹೆಬ್ಬಿ ಬಸವೇಶ್ವರ ಜಾತ್ರಾ ಮಹೋತ್ಸವ ರದ್ದು ಗೊಳಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಗಿರಮಲ್ಲಪ್ಪ ತೇಲಿ, ಕಾರ್ಯದರ್ಶಿ ಆನಂದ ಶ್ರೀನಿವಾಸ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.