ಕೋವಿಡ್‌-19 ತಡೆಗಟ್ಟಲು ಕಟ್ಟುನಿಟ್ಟಾಗಿ ನಿಯಮ ಪಾಲಿಸಿ


Team Udayavani, Jun 28, 2020, 2:12 PM IST

ಕೋವಿಡ್‌-19 ತಡೆಗಟ್ಟಲು ಕಟ್ಟುನಿಟ್ಟಾಗಿ ನಿಯಮ ಪಾಲಿಸಿ

ಬನಹಟ್ಟಿ: ತಾಲೂಕಿನಾದ್ಯಂತ ಕೋವಿಡ್‌-19 ಸಮುದಾಯದತ್ತ ಹರಡದಂತೆ ಮುಂಜಾಗ್ರತೆ ವಹಿಸಲು ಎಲ್ಲ ಅಧಿಕಾರಿಗಳು ಸರಕಾರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಹೋಮ್‌ಕ್ವಾರಂಟೈನ್‌ ವಿಷಯದಲ್ಲಿ ತಪ್ಪಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ನಗರದ ನಗರಸಭೆ ಸಭಾಭವನದಲ್ಲಿ ನಡೆದ ಕೋವಿಡ್‌-19 ನಿಯಂತ್ರಣ, ಪ್ರಕೃತಿ ವಿಕೋಪ ಹಾಗೂ ಪ್ರವಾಹ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಪಿಡಿಒಗಳ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಸೋಂಕು ಹರಡದಂತೆ ನಿಯಂತ್ರಣ ಮಾಡುವುದು ನಮ್ಮ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಯಾರಿಗೂ ಹೆದರದೇ ಮೇಲಧಿಕಾರಿಗಳಿಗೆ ನಿಖರ ಮಾಹಿತಿ ನೀಡಿ. ಅದರಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯವಾಗುತ್ತದೆ. ನಿಷ್ಕಾಳಜಿ ವಹಿಸಿದರೆ ನೀವೇ ಜವಾಬ್ದಾರರಾಗುತ್ತೀರಿ. ಸಂತೆ, ಮದುವೆ, ಸಭೆ ಸಮಾರಂಭಗಳಲ್ಲಿ ಜನಸಂದಣಿ ಸೇರುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸಿ. ಕಳೆದ ಎರಡು ದಿನಗಳಿಂದ ಪ್ರಕೃತಿ ವಿಕೋಪದಿಂದ ಸಂಭವಿಸಿರುವ ಹಾನಿಗಳ ಬಗ್ಗೆ ಸರ್ವೇ ಮಾಡುತ್ತಿದ್ದು ಶೀಘ್ರ ಪರಿಹಾರ ನೀಡಲಾಗುವುದು. ಕೃಷ್ಣಾ ಮತ್ತು ಘಟಪ್ರಭಾ ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸನ್ನದ್ಧರಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ರಬಕವಿ-ಬನಹಟ್ಟಿ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಮಾತನಾಡಿ, ತಾಲೂಕಿನಲ್ಲಿ ಒಟ್ಟು 104 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದ್ದು, 189 ಜನರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಹೋಂಕ್ವಾರಂಟೈನ್‌ ಮಾಡಿದವರು ಅನವಶ್ಯಕವಾಗಿ ಮನೆ ಬಿಟ್ಟು ಬಂದರೆ ಅಂತವರ ವಿರುದ್ಧ ಮತ್ತು ಅಂತ್ಯ ಸಂಸ್ಕಾರದಲ್ಲಿ 20ಕ್ಕಿಂತ ಹೆಚು ಜನ ಸೇರುವುದನ್ನು ಮಾಡಿದರೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದರು.

ವಿವಾಹ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮೋದನೆ ಹಾಗೂ ಸ್ಥಳಿಯ ಆಡಳಿತದಿಂದ ಪರವಾನಗಿ ಅಗತ್ಯ. ಅಲ್ಲದೇ ಮದುವೆ ಸಂದರ್ಭದಲ್ಲಿ ಸರಕಾರದಿಂದ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗುವುದು. ಅವರು ಮದುವೆಯ ಎಲ್ಲ ಆಗು-ಹೋಗುಗಳ ಬಗ್ಗೆ ನಿಖರವಾದ ಮಾಹಿತಿ ನೀಡುತ್ತಾರೆ ಎಂದರು.

ಕಳೆದ ಎರಡು ದಿನಗಳಿಂದ ಸುರಿದ ಗಾಳಿ ಹಾಗೂ ಮಳೆಯಿಂದಾಗಿ ತಾಲೂಕಿನಲ್ಲಿ ಪ್ರಾಥಮಿಕ ಹಂತದ ಮಾಹಿತಿಯಂತೆ ಒಟ್ಟು 68 ಮನೆಗಳ ಒಟ್ಟು 32 ಲಕ್ಷ 75 ಸಾವಿರ ಹಾನಿಯಾಗಿದೆ. ಹಳಿಂಗಳಿಯಲ್ಲಿ 4 ಎಕರೆ, ಚಿಮ್ಮಡದಲ್ಲಿ 5 ಎಕರೆ, ಬುದ್ನಿ ಪಿಡಿಯಲ್ಲಿ 8 ಎಕರೆ, ಕೆಸರಗೊಪ್ಪದಲ್ಲಿ 9 ಎಕರೆ ಬಾಳೆ ಹಾನಿಯಾದ ವರದಿಯಾಗಿದ್ದು, ಮನೆಗಳಿಗೆ ಸಂಬಂಧಿಸಿದಂತೆ ನಿಖರ ಮಾಹಿತಿಯನ್ನು ಕಲೆ ಹಾಕಿ ತಾಲೂಕು ಉಪವಿಭಾಗಾಧಿಕಾರಿಯವರ ಅನುಮೋದನೆಯೊಂದಿಗೆ ಸಂಬಂಧ ಪಟ್ಟವರಿಗೆ ಶೀಘ್ರ ಪರಿಹಾರ ನೀಡಲಾಗುವುದು ಎಂದರು.

ಕೃಷ್ಣಾ ಹಾಗೂ ಘಟಪ್ರಭಾ ನದಿಗಳ ಪ್ರವಾಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಲೈಫ್‌ಜಾಕೆಟ್‌, ಗಂಜಿ ಕೇಂದ್ರಗಳು ಸೇರಿದಂತೆ ಅಗತ್ಯ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಭಾಗಶಃ ಹಾಗೂ ಪೂರ್ಣ ಮುಳುಗಡೆಯಾಗುವ ಗ್ರಾಮಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಆರೋಗ್ಯಾಧಿಕಾರಿ ಜಿ. ಎಚ್‌. ಗಲಗಲಿ, ಇಒ ಸಂಜೀವ ಹಿಪ್ಪರಗಿ, ಸಿಪಿಐ ಜೆ. ಕರುಣೇಶಗೌಡ, ಪೌರಾಯುಕ್ತ ಶ್ರೀನಿವಾಸ ಜಾಧವ, ಶಿರಸ್ತೆದಾರರಾದ ಬಸವರಾಜ ಬಿಜ್ಜರಗಿ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ ಇದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.