ಆಕ್ಸಿಜನ್‌ ದುರ್ಬಳಕೆ ತಡೆಗೆ ಜಿಲ್ಲಾಡಳಿತ ಸೂಚನೆ

ಹದ್ದು ಮೀರಿದರೆ ಕೋವಿಡ್‌ ಚಿಕಿತ್ಸೆಗೆ ನೀಡಿದ ಅನುಮತಿ ರದ್ದು! ­ಸೋರಿಕೆಗೆ ಕಡಿವಾಣ ಹಾಕಿ

Team Udayavani, May 8, 2021, 5:42 PM IST

ioiuo

ಬಾಗಲಕೋಟೆ: ಕೊರೊನಾ 2ನೇ ಅಲೆಯಿಂದ ಜಿಲ್ಲೆ  ಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದನ್ನೇ ಕೆಲ ಖಾಸಗಿ ಆಸ್ಪತ್ರೆಗಳು ಬಂಡವಾಳ ಮಾಡಿಕೊಳ್ಳುತ್ತಿವೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬಂದಿದೆ.

ಹೌದು, ಜಿಲ್ಲೆಯಲ್ಲಿ 2ನೇ ಅಲೆ ವೇಗ ಹೆಚ್ಚುತ್ತಿದೆ. ಜತೆಗೆ ಜನರಲ್ಲಿ ಭೀತಿಯೂ ಹೆಚ್ಚುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವು ರೀತಿಯ ಪ್ರಯತ್ನ ನಡೆಸಿವೆ. ಅಗತ್ಯವಿದ್ದ ಸೋಂಕಿತರಿಗೆ ಮಾತ್ರ ಆಕ್ಸಿಜನ್‌ ಬಳಕೆ ಮಾಡಬೇಕು. ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ಪ್ರತಿಯೊಬ್ಬ ಸೋಂಕಿತರಿಗೂ ಆಕ್ಸಿಜನ್‌ ಬಳಕೆ ಮಾಡುವ ಮೂಲಕ ಆಕ್ಸಿಜನ್‌ ದುರ್ಬಳಕೆ ಆಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಶುಕ್ರವಾರ ಖಡಕ್‌ ಸೂಚನೆಯನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಿದೆ ಎನ್ನಲಾಗಿದೆ.

ದುರ್ಬಳಕೆ ಮಾಡಿಕೊಳ್ಳಬೇಡಿ: ಜಿಲ್ಲೆ ಅಷ್ಟೇ ಅಲ್ಲ, ಇಡೀ ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಉಂಟಾಗುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಆಕ್ಸಿಜನ್‌ ಅನ್ನು ಮಿತವಾಗಿ ಹಾಗೂ ಅಗತ್ಯವಿದ್ದವರಿಗೆ ಮಾತ್ರ ಬಳಕೆ ಮಾಡಬೇಕು. ದುರಾಸೆಗೆ ಬಿದ್ದು, ಅಗತ್ಯ ಇಲ್ಲದ ಸೋಂಕಿತರಿಗೂ ಆಕ್ಸಿಜನ್‌ ಬಳಕೆ ಮಾಡುವ ಮೂಲಕ ದುರ್ಬಳಕೆ ಅಥವಾ ಅನಗತ್ಯ ವೇಸ್ಟ್‌ ಮಾಡಬಾರದು. ಒಂದು ವೇಳೆ ಆ ರೀತಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಮುಖ್ಯವಾಗಿ ಕೋವಿಡ್‌ ಚಿಕಿತ್ಸೆಗೆ ನೀಡಿದ ಅನುಮತಿ ರದ್ದುಪಡಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

39 ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಬಳಕೆ: ಜಿಲ್ಲೆಯಲ್ಲಿ ಕ್ಲಿನಿಕ್‌ ಗಳೂ ಸೇರಿದಂತೆ 815ಕ್ಕೂ ಹೆಚ್ಚು ಆಸ್ಪತ್ರೆಗಳಿವೆ. ಬಾಗಲಕೋಟೆ ನಗರವೊಂದರಲ್ಲೇ 192 ಆಸ್ಪತ್ರೆಗಳಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಇದನ್ನು 2ನೇ ಮೀರಜ್‌ ಎಂದೇ ಕರೆಯಲಾಗುತ್ತಿದೆ. ಬಾಗಲಕೋಟೆ ಜಿಲ್ಲೆ ಅಷ್ಟೇ ಅಲ್ಲ ಪಕ್ಷದ ವಿಜಯಪುರ ಜಿಲ್ಲೆಯ ನಿಡಗುಂದಿ, ಬಸವನಬಾಗೇವಾಡಿ, ಮುದ್ದೇಬಿಹಾಳ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಸ್ಕಿ, ಕವಿತಾಳ, ಕೊಪ್ಪಳ ಜಿಲ್ಲೆಯ ಕುಷ್ಟಗಿ, ಗದಗ ಜಿಲ್ಲೆಯ ಗಜೇಂದ್ರಗಡ, ರೋಣ, ನರಗುಂದ, ಬೆಳಗಾವಿ ಜಿಲ್ಲೆಯ ರಾಮದುರ್ಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳ ರೋಗಿಗಳು ಬಾಗಲಕೋಟೆಗೆ ಚಿಕಿತ್ಸೆಗೆಂದು ಆಗಮಿಸುತ್ತಾರೆ. ಇದು ಹಲವು ವರ್ಷಗಳಿಂದಲೂ ನಡೆಯುತ್ತಿದೆ.

ಜಿಲ್ಲೆಗೆ ಬಂದ 15 ಕೆ.ಎಲ್‌ ಆಕ್ಸಿಜನ್‌: ಜಿಲ್ಲಾ ಕೋವಿಡ್‌ ಆಸ್ಪತ್ರೆಯೂ ಸೇರಿದಂತೆ 39 ಆಸ್ಪತ್ರೆಗಳಲ್ಲಿ ಸದ್ಯ ಆಕ್ಸಿಜನ್‌ ಬಳಕೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಹಿಂದೆ ಜಿಲ್ಲೆಗೆ ನಿತ್ಯ 7.50 ಕೆ.ಎಲ್‌ ಆಕ್ಸಿಜನ್‌ ಪೂರೈಕೆಯಾಗುತ್ತಿತ್ತು. ಇದೀಗ ಗುರುವಾರದಿಂದ ಆಕ್ಸಿಜನ್‌ ಬರುವ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ತೀವ್ರವಾಗಿದ್ದ ಆಕ್ಸಿಜನ್‌ ಕೊರತೆ ಸದ್ಯಕ್ಕೆ ಸ್ವಲ್ಪ ಮಟ್ಟಿಗೆ ನಿರಾಳವಾಗಿದೆ ಎನ್ನಬಹುದು. ಜಿಲ್ಲೆಗೆ ಎರಡು ದಿನಗಳಿಂದ 15 ಕೆ.ಎಲ್‌. ಆಕ್ಸಿಜನ್‌ ಪೂರೈಕೆಯಾಗುತ್ತಿದ್ದು, 39 ಆಸ್ಪತ್ರೆಗಳಿಗೆ ನಿತ್ಯ 400 ಸಿಲಿಂಡರ್‌ಗಳ ಪೂರೈಕೆಯಾಗುತ್ತಿದೆ ಶೇ.30ರಷ್ಟು ವೇಸ್ಟ್‌!: ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 450 ಬೆಡ್‌ಗಳಿದ್ದು, ಸುಮಾರು 300 ಬೆಡ್‌ ಗಳಿಗೆ ಆಕ್ಸಿಜನ್‌ ಸೌಲಭ್ಯವಿದೆ. ಇಲ್ಲಿ ನಿತ್ಯ 3 ಕೆ.ಎಲ್‌. ಆಕ್ಸಿಜನ್‌ ಬಳಕೆಯಾಗುತ್ತಿದ್ದು, ಅದರಲ್ಲಿ ಶೇ.30ರಷ್ಟು ಆಕ್ಸಿಜನ್‌ ಸೋರಿಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ.

ಖಾಸಗಿ ಆಸ್ಪತ್ರೆ ಮಾಲೀಕರು ಹೇಳುವುದೇ ಬೇರೆ: ಜಿಲ್ಲೆಗೆ ಆಕ್ಸಿಜನ್‌ ಪೂರೈಕೆಯಲ್ಲಿ ಕಡಿಮೆ ಇದೆ. ನಿತ್ಯವೂ 18ರಿಂದ 20 ಕೆ.ಎಲ್‌ ಆಕ್ಸಿಜನ್‌ ಬಳಕೆಯಾಗುತ್ತಿದೆ. ಜಿಲ್ಲಾಡಳಿತವೇ ಹೇಳುವಂತೆ ಜಿಲ್ಲೆಗೆ 10ರಿಂದ 15 ಕೆ.ಎಲ್‌. ಮಾತ್ರ ಪೂರೈಕೆಯಾಗುತ್ತಿದೆ. ಅಗತ್ಯದಷ್ಟು ಜಿಲ್ಲೆಗೆ ಆಕ್ಸಿಜನ್‌ ತರುವಲ್ಲಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಕೇವಲ ಸಭೆಯ ಮೇಲೆ ಸಭೆ ನಡೆಸುತ್ತಿದ್ದಾರೆ ಹೊರತು, ಪರಿಹಾರೋಪಾಯ ಪ್ರಮಾಣ ಕಡಿಮೆ. ತಮ್ಮ ನ್ಯೂನ್ಯತೆ ಮುಚ್ಚಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಆಕ್ಸಿಜನ್‌ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಗುಮಾನಿ ಹೊರ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಾವುದೇ ಸೋಂಕಿತ ವ್ಯಕ್ತಿಗಳೂ ನಮ್ಮವರೇ. ಅವರಿಗೆ ಅಗತ್ಯವಿಲ್ಲದಿದ್ದರೂ ಆಕ್ಸಿಜನ್‌ ಬಳಕೆ ಮಾಡುವ ಪ್ರಮೇಯ ಬರುವುದಿಲ್ಲ. ಇರುವ ಸೋಂಕಿತರಿಗೆ ಸರಿಯಾಗಿ ಆಕ್ಸಿಜನ್‌ ಕೊಡಲು ಆಗುತ್ತಿಲ್ಲ.

ಇನ್ನು ಅಗತ್ಯವಿಲ್ಲದವರಿಗೂ ಆಕ್ಸಿಜನ್‌ ಬಳಕೆ ಮಾಡಲು ಹೇಗೆ ಸಾಧ್ಯ. ಸೋಂಕಿತರಿಗೆ ಯಾರಿಯಾದ ಚಿಕಿತ್ಸೆ, ಆಕ್ಸಿಜನ್‌ ನೀಡಲು ನಾವು ಸಾಕಷ್ಟು ಪ್ರಯಾಸಪಡುತ್ತಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ಯಾವ ಆಸ್ಪತ್ರೆಗಳೂ ದುರ್ಬಳಕೆ ಮಾಡಿಕೊಳ್ಳುವ ಸಾಹಸಕ್ಕೆ ಹೋಗುವುದಿಲ್ಲ. ಇಂತಹ ಗುಮಾನಿ ಬಿಟ್ಟು, ಅಗತ್ಯ ಆಕ್ಸಿಜನ್‌ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ಖಾಸಗಿ ಆಸ್ಪತ್ರೆಯವರ ಒತ್ತಾಯ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.