“ಮೀಸಲಾತಿಗೆ ಹೋರಾಟ-ಪ್ರತಿಭಟನೆ ಅನಿವಾರ್ಯ’ ಶಾಸಕ ಡಾ|ವೀರಣ್ಣ

ಶ್ರೀಗಳು ಆಶೀರ್ವಚನ ನೀಡಿ, ಲಿಂಗಾಯತ ಸಮಾಜ ಮಹಾ ವೃಕ್ಷವಾಗಿದೆ

Team Udayavani, Jan 2, 2023, 5:05 PM IST

“ಮೀಸಲಾತಿಗೆ ಹೋರಾಟ-ಪ್ರತಿಭಟನೆ ಅನಿವಾರ್ಯ’ ಶಾಸಕ ಡಾ|ವೀರಣ್ಣ

ಹುನಗುಂದ: ಎಲ್ಲ ಸಮಾಜದ ಮಕ್ಕಳಿಗೂ ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಸಬಲರಾಗಲು ಮತ್ತು ಸರ್ಕಾರಿ ಉದ್ಯೋಗ ಪಡೆಯಲು ಮೀಸಲಾತಿಗೆ ಸರ್ಕಾರಗಳ ವಿರುದ್ಧ ಹೋರಾಟ ಮತ್ತು ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಬಾಗಲಕೋಟೆ ಶಾಸಕ ಡಾ| ವೀರಣ್ಣ ಚರಂತಿಮಠ ಹೇಳಿದರು.

ಬಸವ ಮಂಟಪದಲ್ಲಿ ರವಿವಾರ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬಣಜಿಗರ ಸಮಾವೇಶ, ಅಕ್ಕಮಹಾದೇವಿ ನಾಮಫಲಕ ಉದ್ಘಾಟನೆ, ಸಾಧಕರಿಗೆ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸರ್ಕಾರ ಈಗಾಗಲೇ ಕೆಲವು ಲಿಂಗಾಯತ ಉಪ ಜಾತಿಗಳಿಗೆ ಶೈಕ್ಷಣಿಕ ಮೀಸಲಾತಿ ನೀಡಿದೆ.

ಅದರಂತೆಯೇ ಉದ್ಯೋಗ ಮೀಸಲಾತಿ ಕೇಳುವುದು ಅನಿವಾರ್ಯ. ಈ ವಿಷಯವಾಗಿ ಚುನಾವಣೆ ಬಂದಾಗ ಪ್ರತಿ ಜಾತಿಗಳು ನಡೆಸುವ ಸಮ್ಮೇಳನದ ಪ್ರಭಾವದಿಂದ ಮತ್ತೂಂದು ಸಣ್ಣ ಸಮಾಜ ಛಿದ್ರವಾಗುವ ರೀತಿಯಲ್ಲಿ ಹೋರಾಟ ನಡೆಯಬಾರದು ಎಂದರು.

ಶಾಸಕ ದೊಡ್ಡನಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೆ ಸಮಾಜ ಅಭಿವೃದ್ಧಿ ಕಾರ್ಯ ಮಾಡುವಾಗ ಜನಪ್ರತಿನಿಧಿಗಳು ಅಸೂಯೆ ಬಿಡಬೇಕು. ನಮ್ಮ ಕಲಾದಷ್ಟು ಸಹಾಯ ಮಾಡಲು ಪ್ರಯತ್ನಿಸಬೇಕು. ಛಿದ್ರವಾಗುವ ಸಮಾಜ ಒಂದುಗೂಡಿಲು ಪ್ರಯತ್ನಿಸಬೇಕು ಎಂದರು.

ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳು ಆಶೀರ್ವಚನ ನೀಡಿ, ಲಿಂಗಾಯತ ಸಮಾಜ ಮಹಾ ವೃಕ್ಷವಾಗಿದೆ. ಅದರ ಸುತ್ತ ಉಪ ಜಾತಿಗಳೆಂಬ ಟೊಂಗೆಗಳಿವೆ. ಅಂತಹ ಮಹಾ ವೃಕ್ಷಕ್ಕಿದ್ದ ಟೊಂಗೆಗಳು (ಉಪ ಜಾತಿಗಳು) ಉದುರಿದರೆ ವೃಕ್ಷಕ್ಕೆ ಬೆಲೆ ಇಲ್ಲದಂತಾಗುತ್ತದೆ. ಉಪ ಜಾತಿಗಳಿಗೆ ಸಿಗುವ ಸೌಲಭ್ಯ ಪಡೆಯಲು ಹೋರಾಟ, ಪ್ರತಿಭಟನೆ ಮಾಡೋಣ. ಆದರೆ ಮಹಾವೃಕ್ಷ ಲಿಂಗಾಯತ ಪದ ಕಡ್ಡಾಯವಾಗಿ ಬಳಸೋಣ ಎಂದರು.ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಮಹಾಂತೇಶ ಮಮದಾಪುರ ಮಾತನಾಡಿದರು.ಶಾಸಕ ದೊಡಡ್ಡನಗೌಡ ಪಾಟೀಲ ಬಸವ ಭಾವಚಿತ್ರಕ್ಕೆ, ಎಸ್‌ಆರ್‌ಎನ್‌ಇ ಫೌಂಡೇಶನ್‌ ಅಧ್ಯಕ್ಷ
ಎಸ್‌.ಆರ್‌. ನವಲಿಹಿರೇಮಠ ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಡಾ| ಶಿವಗಂಗಾ ರಂಜಣಗಿ ಉಪನ್ಯಾಸ ನೀಡಿದರು.

ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಂದ ಅನಾವರಣಗೊಂಡ ಅಕ್ಕಮಹಾದೇವಿ ತರಕಾರಿ ಮಾರುಕಟ್ಟೆ ನಾಮಫಲಕದಿಂದ ಬಣಜಿಗ ಸಮಾವೇಶದ ಮೆರವಣಿಗೆ ಬಸ್‌ ನಿಲ್ದಾಣ, ಮಹಾಂತ ವೃತ್ತ, ಚನ್ನಮ್ಮ ವೃತ್ತ ಮಾರ್ಗವಾಗಿ ಬಸವ ಮಂಟಪ ತಲುಪಿತು.

ಈ ವೇಳೆ ಗದುಗಿನ ಮಹಾಂತ ಸ್ವಾಮೀಜಿ, ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಬಡ್ಡಿ, ಎಸ್‌.ವಿ. ಸಂಕನೂರ, ವೀರಣ್ಣ ಮತ್ತಿಕಟ್ಟಿ, ಅಪ್ಪು ಪಟ್ಟಣಶಟ್ಟಿ, ಅಂದಾನೆಪ್ಪ ಹವಾಲ್ದಾರ, ಶರಣಪ್ಪ ಗುಳೇದ, ಅಂದಾನೆಪ್ಪ ಗುಳೇದ, ಮಲ್ಲನಗೌಡ ಗೌಡರ, ವೀರಣ್ಣ ಚಟ್ಟೇರ, ಸಂಗಣ್ಣ ಚಿನಿವಾಲರ, ಕೊಪ್ಪಳ ಅಪರ ಜಿಲ್ಲಾಧಿ ಕಾರಿ ಸಾವಿತ್ರಿ ಕಡಿ, ಮಹಾರಾಣಿ ತೋಪಲಕಟ್ಟಿ, ಬಸವರಾಜ ಕೆಂದೂರ, ಸಿ.ಎಸ್‌. ಹೊನವಾಡ, ಎನ್‌.ವಿ. ಉಪ್ಪಿನ, ಪ್ರಭು ಇದ್ದಲಗಿ, ಗುರುಬಸವ ಕಂಠಿ, ಎಚ್‌.ಎಸ್‌. ಬೋಳಿಶಟ್ಟರ ಇತರರಿದ್ದರು. ವಿಮ ಸಂಗೀತ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮುಖಂಡ ಅರುಣ ದುದ್ಗಿ ಸ್ವಾಗತಿಸಿದರು. ಶಿಕ್ಷಕಿ ಕವಿತಾ ರಾಜೂರ ನಿರೂಪಿಸಿದರು. ಸುಜಾತಾ ಮಾಟೂರ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.