ಶಾಲೆಗಾಗಿ ನಿತ್ಯವೂ ನಿಂತಿಲ್ಲ ಪಾದಯಾತ್ರೆ

ಉಪನಾಳ ಎಸ್‌.ಸಿ ಗ್ರಾಮದ ಮಕ್ಕಳ ಗೋಳು ಕೇಳ್ಳೋರಿಲ್ಲ

Team Udayavani, Apr 5, 2021, 5:17 PM IST

ಶಾಲೆಗಾಗಿ ನಿತ್ಯವೂ ನಿಂತಿಲ್ಲ ಪಾದಯಾತ್ರೆ

ಬಾಗಲಕೋಟೆ: ಈ ಹಳ್ಳಿಯ ಮಕ್ಕಳು ಶಿಕ್ಷಣಕ್ಕಾಗಿ ನಿತ್ಯವೂ ಪಾದಯಾತ್ರೆ ಮಾಡಲೇಬೇಕು. ಅದೂ ನಿತ್ಯ 4ರಿಂದ5ಕಿ.ಮೀ ನಡೆದುಕೊಂಡು ಹೋದಾಗ ಅವರಿಗೆ ಪಾಠ ಕೇಳಲು ಸಾಧ್ಯ.  ಗ್ರಾಮಕ್ಕೆ ಬಸ್‌ ಸೌಲಭ್ಯ ಕಲ್ಪಿಸಿ ಎಂಬ ಕೂಗಿಗೆ ಸ್ಪಂದನೆ ಸಿಕ್ಕಿಲ್ಲ. ಹೌದು, ಲಾಕ್‌ಡೌನ್‌ವೇಳೆ ಸ್ಥಗಿತಗೊಂಡ ಬಸ್‌ ಸೇವೆ ಪುನಃಆರಂಭಗೊಂಡಿಲ್ಲ. ಲಾಕ್‌ಡೌನ್‌ ಬಳಿಕ ಶಾಲೆ-ಕಾಲೇಜು ಆರಂಭಗೊಂಡರೂವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡುಹೋಗುವ ಬಸ್‌ಮಾತ್ರ ಇನ್ನೂ ಉಪನಾಳಕ್ಕೆಬರುತ್ತಿಲ್ಲ. ಹೀಗಾಗಿ ಇಲ್ಲಿನ ಸುಮಾರು25ರಿಂದ 30 ಮಕ್ಕಳು ನಡೆದುಕೊಂಡೆ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಉಪನಾಳ ಎಸ್‌ಸಿ ಗ್ರಾಮದಿಂದ 25 ರಿಂದ 30 ವಿದ್ಯಾರ್ಥಿಗಳು ನಿತ್ಯಪಾದಯಾತ್ರೆ ಮಾಡಿದಾಗಲೇ ಶಾಲೆಗೆತಲುಪಲು ಸಾಧ್ಯ. 5ರಿಂದ 10ನೇತರಗತಿಯಲ್ಲಿ ಓದುವ ಚಿಕ್ಕಮಕ್ಕಳು ಬಿಸಿಲು,ಮಳೆ, ಚಳಿಗಾಳಿಯನ್ನದೆ ಅಕ್ಷರ ಕಲಿಕೆಗಾಗಿ ಹರಸಾಹಸಪಡುತ್ತಿದ್ದಾರೆ.

ವಿದ್ಯಾರ್ಥಿಗಳ ನಿತ್ಯ ಪರದಾಟ: ಇಳಕಲ್‌ ತಾಲೂಕಿನ ಉಪನಾಳ ಎಸ್‌ ಸಿ ಗ್ರಾಮದಲ್ಲಿ1 ರಿಂದ 5ನೇ ತರಗತಿಯವರೆಗೆ ಮಾತ್ರಶಾಲೆ ಇದೆ. ಹೆಚ್ಚಿನ ವಿದ್ಯಾಭ್ಯಾಸಕ್ಕೆ 6ನೇತರಗತಿಯಿಂದ ಹೆಚ್ಚಿನ ಶಿಕ್ಷಣಕ್ಕೆ ಬೇರೆಕಡೆ ಹೋಗಲೇಬೇಕು. ಉಪನಾಳಗ್ರಾಮದಿಂದ ಭೀಮನಗಡವರೆಗೆ 4ರಿಂದ5 ಕಿಮೀ ಕಾಲ್ನಡಿಗೆಯಲ್ಲಿ ತೆರಳಿ ಅಲ್ಲಿಂದ ಗುಡೂರ, ಬಾದಾಮಿ, ಗುಳೇದಗುಡ್ಡಕ್ಕೆಶಿಕ್ಷಣಕ್ಕೆ ಹೋಗಬೇಕು. ಆದರೆ ಗ್ರಾಮದಿಂದ ಪಾದಯಾತ್ರೆಯ ಮೂಲಕ ಬಂದವಿದ್ಯಾರ್ಥಿಗಳಿಗೆ ಮುಂದೆ ಹೋಗಲು ಬಸ್‌ಸಿಗುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳುಶಾಲೆಗೆ ಹೋಗುವುದನ್ನೇ ನಿಲ್ಲಿಸಿ ದನ, ಕುರಿಕಾಯಲು ಹೋಗುತ್ತಾರೆ. ಇನ್ನು ಬಸ್ಸಿಲ್ಲದಕಾರಣ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಮನೆಯಲ್ಲಿ ಹಿಂಜರಿಯುತ್ತಾರೆ. ಹಾಗಾಗಿವಿದ್ಯಾರ್ಥಿನಿಯರು ಶಾಲೆಗೆ ಹೋಗದೆಮನೆಯಲ್ಲೇ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯ ಬದಿಯಲ್ಲಿ ಜಾಲಿ ಮುಳ್ಳಿನ ಹಾಸು: ಉಪನಾಳ ಗ್ರಾಮದ ರಸ್ತೆಯುದ್ದಕ್ಕೂ ಜಾಲಿ ಮುಳ್ಳಿನ ಹಾಸು ನಿರ್ಮಾಣವಾಗಿದೆ.ಪಕ್ಕದ ಭೀಮನಗಡ ಗ್ರಾಮದ ಚರಂಡಿನೀರು ರಸ್ತೆಯ ತುಂಬೆಲ್ಲ ಹರಿದು ಸುಮಾರು ಒಂದು ಕಿಮೀ ತಗ್ಗು ಗುಂಡಿಗಳು ನಿರ್ಮಾಣವಾಗಿವೆ. ಇದೆ ಕಾರಣಕ್ಕೆ ಈಮಾರ್ಗವಾಗಿ ತ್ರಿ ಚಕ್ರ ವಾಹನಗಳುಸಹ ಸಂಚರಿಸುವುದಿಲ್ಲ. ಇದರಿಂದಾಗಿ ಗ್ರಾಮಸ್ಥರು ಕೂಡ ಕಾಲ್ನಡಿಗೆಯಲ್ಲಿ ಸಂಚರಿಸು ವಂತಾಗಿದೆ. ಗುಳೇದಗುಡ್ಡ ಬಸ್‌ ಪಕ್ಕದ ಚಿಮ್ಮಲಗಿ ಗ್ರಾಮದ ಮಾರ್ಗವಾಗಿ ಸಂಚರಿಸಿ ಗುಡೂರಿಗೆ ಹೋಗುತ್ತದೆ. ಆದೆ ರಸ್ತೆಯ ದುರಸ್ತಿ ಮತ್ತು ರಸ್ತೆಯ ಬದಿಯಜಾಲಿ ಮುಳ್ಳಿನಿಂದ ಬಸ್‌ ಚಾಲಕರು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಅಧಿಕಾರಿಗಳ ನಿರಾಸಕ್ತಿ: ಉಪನಾಳ ಗ್ರಾಮ ಇಳಕಲ್‌ ತಾಲೂಕಿನ ಕೊನೆಯ ಹಳ್ಳಿಯಾಗಿರುವುದರಿಂದ ವಿದ್ಯಾರ್ಥಿಗಳ ಮತ್ತುಗ್ರಾಮಸ್ಥರ ಗೋಳು ಯಾರಿಗೂ ಕೇಳುತ್ತಿಲ್ಲ.ಮಕ್ಕಳ ಶಿಕ್ಷಣಕ್ಕಾಗಿ ಬಸ್‌ ಸೌಲಭ್ಯಕ್ಕೆ ಅಧಿಕಾರಿಗಳ ಮುಂದೆ ಪ್ರಸ್ತಾಪಿಸಿದರೆ ನಿರ್ಲಕ್ಷ ವರ್ತನೆ ತೋರುತ್ತಿದ್ದಾರೆ. ಅಧಿಕಾರಿಗಳ ವರ್ತನೆಗೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬೇಸತ್ತಿದ್ದಾರೆ.

25ರಿಂದ 30 ವಿದ್ಯಾರ್ಥಿಗಳು: ಉಪನಾಳ ಗ್ರಾಮದಿಂದ 20ರಿಂದ 30 ವಿದ್ಯಾರ್ಥಿಗಳು ಭೀಮನಗಡ, ಗುಡೂರು, ವಡಗೇರಿ,ಹುನಗುಂದ, ಬಾದಾಮಿ, ಗುಳೇದಗುಡ್ಡಕ್ಕೆಶಿಕ್ಷಣಕ್ಕಾಗಿ ತೆರಳುತ್ತಾರೆ. 6 ರಿಂದ 10ನೇ ತರಗತಿವರೆಗಿನ ಚಿಕ್ಕ ಮಕ್ಕಳು ಶಾಲೆಗೆ ಪ್ರತಿನಿತ್ಯ ನಡೆದುಕೊಂಡು ಹೋಗಬೇಕು.

ನಾವು ನಿತ್ಯ ಗ್ರಾಮದಿಂದ 4 ಕಿ.ಮೀ ದೂರದ ಭೀಮನಗಡ ಗ್ರಾಮಕ್ಕೆ ನಡೆದುಕೊಂಡು ಶಾಲೆಗೆ ಹೋಗಬೇಕು. ಅಲ್ಲಿಂದ ಮುಂದೆ ಬೇರೆಡೆಗೆ ಪ್ರಯಾಣಿಸುತ್ತೇವೆ. ಗ್ರಾಮದಲ್ಲಿ ಅಂಗವಿಕಲರು, ವೃದ್ದರಿದ್ದು ಅವರಿಗೆ ನಡೆಯಲು ಆಗದೆ ಇನ್ನೊಬ್ಬರ ಆಸರೆ ಬೇಡುವಂತಾಗಿದೆ. ಗ್ರಾಮದಲ್ಲಿ 5ನೇ ತರಗತಿ ಮಾತ್ರ ಶಾಲೆ ಇದ್ದು, ಹೆಚ್ಚಿನ ವಿದ್ಯಾ ಭ್ಯಾಸಕ್ಕೆ ಪಕ್ಕದ ಗ್ರಾಮಕ್ಕೆ ಹೋಗುತ್ತಾರೆ. ಆದರೆ ವಿದ್ಯಾರ್ಥಿಗಳು ಚಿಕ್ಕ ಮಕ್ಕಳಿರುವುದರಿಂದ ನಡೆಯಲು ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ನಮ್ಮೂರಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು.  -ಮಂಜುನಾಥ, ಉಪನಾಳ ಎಸ್‌.ಸಿ ಗ್ರಾಮದ ವಿದ್ಯಾರ್ಥಿ

 

­ವಿಶೇಷ ವರದಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.