ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಓಡಿಸಲು ಆಗ್ರಹ
Team Udayavani, Dec 12, 2021, 1:18 PM IST
ರಬಕವಿ-ಬನಹಟ್ಟಿ: ನೂತನ ತಾಲೂಕಾಗಿ ವರ್ಷಗಳೇ ಕಳೆದರೂ ಅಭಿವೃದ್ಧಿ ಕಾರ್ಯಗಳು ಮಾತ್ರ ಬೆಳೆಯುತ್ತಿಲ್ಲ, ತಾಲೂಕಿನ ಸುತ್ತಮುತ್ತಲ ಅನೇಕ ಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ನಿತ್ಯ ವಿದ್ಯಾರ್ಜನೆಗೆ ಅರಸಿ ಬರುತ್ತಾರೆ. ಆದರೆ, ಇಲ್ಲಿಗೆ ಬಂದು ಹೋಗಲು ಸಂಪೂರ್ಣ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದವಂಚಿತರಾಗುತ್ತಿದ್ದಾರೆ.
ತಾಲೂಕಿನ ಹನಗಂಡಿ, ತೇರದಾಳ, ತಮದಡ್ಡಿ, ಗೊಲಬಾಂವಿ, ಚಿಮ್ಮಡ, ಮಹಾಲಿಂಗಪುರ,ಢವಳೇಶ್ವರ, ಸಮೀರವಾಡಿ, ಜಗದಾಳ,ನಾವಲಗಿ, ಯಲ್ಲಟ್ಟಿ, ಕಲ್ಲೊಳ್ಳಿ, ಮದನಮಟ್ಟಿ, ಹಳಿಂಗಳಿ ಸೇರಿದಂತೆ ಹೀಗೆ ಹತ್ತು ಹಲವು ಹಳ್ಳಿಗಳಿಂದ ಸಾವಿರಾರು ವಿದ್ಯಾರ್ಥಿಗಳು ನಿತ್ಯತಾಲೂಕು ಕೇಂದ್ರಕ್ಕೆ ಬರುತ್ತಾರೆ. ಆದರೆ, ಇಲ್ಲಿಗೆಬರಲು ಹಾಗೂ ಶಾಲೆ ಮುಗಿಸಿ ಮರಳಿ ಮನೆಗೆತೆರಳಲು ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಇದ್ದ ಬಸ್ಗಳಲ್ಲಿಯೇ ಜೀವ ಕೈಯಲ್ಲಿಹಿಡಿದುಕೊಂಡು ಹೋಗುವಂತಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.
ತಾಲೂಕು ಕೇಂದ್ರವಾಗಿದ್ದರಿಂದ ರಬಕವಿ ಬನಹಟ್ಟಿಯಿಂದಲೇ ನೇರವಾಗಿ ಬಸ್ಗಳನ್ನು ಗ್ರಾಮೀಣ ಭಾಗಗಳಿಗೆ ಬಿಡುವ ವ್ಯವಸ್ಥೆಯಾಗಬೇಕು. ಎಲ್ಲ ಬಸ್ಗಳುಜಮಖಂಡಿ ಹಾಗೂ ವಿಜಯಪುರದಿಂದತಾಲೂಕಿನ ಮಾರ್ಗವಾಗಿ ಹೋಗುತ್ತಿದ್ದು, ನಿರ್ವಾಹಕರು ಪಾಸ್ ಇದ್ದ ವಿದ್ಯಾರ್ಥಿಗಳನ್ನು ಬಸ್ ಏರಲು ಬಿಡುವುದಿಲ್ಲ. ಇದರಿಂದ ಗಂಟೆಗಟ್ಟಲೆ ಬಸ್ ನಿಲ್ದಾಣದಲ್ಲಿ ಖಾಲಿ ಬಸ್ ಬರುವುದನ್ನು ಕಾಯುತ್ತಾ ಕುಳಿತುಕೊಳ್ಳಬೇಕು ಎನ್ನುತ್ತಾರೆ ವಿದ್ಯಾರ್ಥಿಗಳು.
ಈಗ ಪರೀಕ್ಷೆಗಳು ಆರಂಭವಾಗಿವೆ, ಒಮ್ಮೇಲೆ ಎಲ್ಲ ಶಾಲೆ-ಕಾಲೇಜುಗಳು ಬಿಡುವುದರಿಂದ ಈ ರೀತಿ ಗದ್ದಲವಾಗುತ್ತಿದೆ. ಆದರೂ ನಾವು ವಿದ್ಯಾರ್ಥಿಗಳಿಗೆ ತೊಂದರೆಯಾಗದ ಹಾಗೆ ಹೆಚ್ಚಿನ ಬಸ್ ಬಿಡುವ ವ್ಯವಸ್ಥೆಯನ್ನು ನಾಳೆಯಿಂದಲೇ ಮಾಡುತ್ತೇವೆ. ಪ್ರತಿ ದಿನ ನಿಗಾ ಇಡುತ್ತೇವೆ. ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಾಗ ಹೆಚ್ಚುವರಿ ಬಸ್ಗಳನ್ನು ಓಡಿಸುತ್ತೇವೆ.-ಸಂಗಮೇಶ ಮಟೋಳಿ, ಸಾರಿಗೆ ಘಟಕ ವ್ಯವಸ್ಥಾಪಕರು ಜಮಖಂಡಿ
ಬಾಲಕರು ಹೇಗೋ ಹರಸಾಹಸ ಮಾಡಿ ಬಸ್ ಏರಿ ಹೋಗುತ್ತಾರೆ. ಆದರೆ, ನಾವು ಮಹಿಳೆಯರು ಈಗದ್ದಲದಲ್ಲಿ ಬಸ್ ಏರಲು ಸಾಧ್ಯವೇ ಆಗುವುದಿಲ್ಲ. ಬಸ್ ಅವ್ಯವಸ್ಥೆ ಗಮನಿಸಿದರೆಶಾಲೆನೇ ಬೇಡ ಎನಿಸುತ್ತಿದೆ. ರಬಕವಿ ಬನಹಟ್ಟಿಯಿಂದ ನೇರವಾಗಿ ಬಸ್ಗಳನ್ನು ಬಿಡುವ ವ್ಯವಸ್ಥೆಯಾದಾಗ ಮಾತ್ರ ಸಮಸ್ಯೆ ಸರಿಹೋಗುತ್ತದೆ.-ಸ್ವಪ್ನಾ ಲಾಳಕೆ, ವಿದ್ಯಾರ್ಥಿನಿ.
ನಿರ್ವಾಹಕರು ಪಾಸ್ ಇದ್ದ ವಿದ್ಯಾರ್ಥಿಗಳೆಂದರೆ ವಿಚಿತ್ರವಾಗಿ ಕಾಣುತ್ತಾರೆ. ಬಸ್ ಏರಲು ಬಿಡುವುದೇ ಇಲ್ಲ, ಏರಿದರೆ ಸಿಟಿ ಮೇಲೆ ಕುಳಿತುಕೊಳ್ಳುವಂತಿಲ್ಲ.ನಮಗೆ ತೊಂದರೆಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ದೇಶದಲ್ಲಿ ಪ್ರಜೆಗಳಿಗೆ ಸೇವೆಎಂಬ ಪದವನ್ನು ಸರ್ಕಾರಗಳು ಡಿಲಿಟ್ಮಾಡಿದಂತಾಗಿದೆ. ಕೇವಲ ಲಾಭದಾಯಕ ಎಂದರೆ ಹೇಗೆ ನಡೆಯುತ್ತದೆ . -ಮೋಹನ ಕ್ಷೀರಸಾಗರ,ವಿದ್ಯಾರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ