ಕಾಳಿ ನದಿ ಜೋಡಣೆ ಯೋಜನಾ ವರದಿ ಸರ್ಕಾರಕ್ಕೆ ಸಲ್ಲಿಕೆ


Team Udayavani, May 7, 2019, 11:22 AM IST

bagalkote-tdy-3..

ಬಾಗಲಕೋಟೆ: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ಸಂಗಮೇಶ ನಿರಾಣಿ ವರದಿ ಸಲ್ಲಿಸಿದರು.

ಬಾಗಲಕೋಟೆ: ಘಟಪ್ರಭಾ ಮತ್ತು ಮಲಪ್ರಭಾ ನದಿಗಳಿಗೆ ಕಾಳಿ ನದಿ ಜೋಡಣೆ ಕುರಿತ ಸಮಗ್ರ ವರದಿಯನ್ನು ಯೋಜನೆಯ ರೂವಾರಿ, ಯುವ ಉದ್ಯಮಿ ಸಂಗಮೇಶ ನಿರಾಣಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ರೈತ ಮುಖಂಡರು ಹಾಗೂ ನೀರಾವರಿ ಹೋರಾಟಗಾರರ ಸಮ್ಮುಖದಲ್ಲಿ ನಿರಾಣಿ ಸಮಗ್ರ ನೀರಾವರಿ ವರದಿಯ ಅಮೃತಧಾರೆ ಕಾಳಿ-ಘಟಪ್ರಭಾ-ಮಲಪ್ರಭಾ ನದಿ ಜೋಡಣೆಯ ಯೋಜನಾ ವರದಿಯನ್ನು ಬೆಳಗಾವಿಯ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರಗೆ ಸಲ್ಲಿಸಿದರು.

ಘಟಪ್ರಭಾ, ಮಲಪ್ರಭಾ ನದಿಗಳು ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳ ಜನರ ಜೀವನಾಡಿಯಾಗಿವೆ. ಮಳೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಹೀಗಾಗಿ ಈ ನದಿಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಅಂತರ್ಜಲ ಪ್ರಮಾಣವು ದಾಖಲೆಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ. ಸಾಂಪ್ರದಾಯಿಕ ನೀರಿನ ಮೂಲಗಳಾದ ಕೆರೆ ಹಳ್ಳಗಳು ಅವಸಾನದ ಅಂಚಿಗೆ ತಲುಪಿವೆ. ಹೀಗಾಗಿ ಈ ನಾಲ್ಕು ಜಿಲ್ಲೆಗಳ ಅನುಕೂಲಕ್ಕಾಗಿ ಸಮಗ್ರ ಕುಡಿಯುವ ನೀರು ಮತ್ತು 4 ಜಿಲ್ಲೆಗಳ 500 ರಿಂದ 600 ಕೆರೆಗಳ ಪುನಶ್ಚೇತನಕ್ಕಾಗಿ, ಪಕ್ಕದ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯ 25 ಟಿಎಂಸಿ ನೀರನ್ನು ಏತ ನೀರಾವರಿ ಯೋಜನೆಯ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಿದ್ದೇವೆ ಎಂದು ಸಂಗಮೇಶ ನಿರಾಣಿ ಹೇಳಿದರು.

ಸಂದರ್ಭದಲ್ಲಿ ಯೋಜನೆಯ ಅನುಷ್ಠಾನದ ಅನಿವಾರ್ಯತೆ ಹಾಗೂ ಅವಶ್ಯಕತೆಯನ್ನು ರೈತ ಮುಖಂಡರು ಹಾಗೂ ತಜ್ಞರು ಸಚಿವರಿಗೆ ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ವರದಿಯಲ್ಲಿ ನಮೂದಿಸಿರುವ ಎಲ್ಲ ಆಂಶಗಳನ್ನು ಇಲಾಖೆ ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಯೋಜನೆ ಬೆಂಬಲಿಸಲು ಸತೀಶ ಜಾರಕಿಹೊಳಿಗೆ ಮನವಿ: ಅರಣ್ಯ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯ ನಿವಾಸಕ್ಕೆ ತೆರಳಿದ ಸಂಗಮೇಶ ನಿರಾಣಿ ನೇತೃತ್ವದ ಹೋರಾಟಗಾರರ ನಿಯೋಗ ಯೋಜನೆಯ ಎಲ್ಲ ಆಂಶಗಳನ್ನು ಅವರಿಗೆ ಮನದಟ್ಟು ಮಾಡಿಕೊಡುವ ಮೂಲಕ ಘಟಪ್ರಭಾ-ಮಲಪ್ರಭಾ ನದಿಯನ್ನು ಸದೃಢಗೊಳಿಸುವ ಈ ಯೋಜನೆಗೆ ಬೆಂಬಲ ನೀಡಬೇಕೆಂದು ವಿನಂತಿಸಿಕೊಂಡರು. ವಿಜಯ ಕುಲಕರ್ಣಿ, ಕಲ್ಯಾಣರಾವ್‌ ಮುಚಳಂಬಿ, ಸುಗುರಪ್ಪ ಅಕ್ಕಿಮರಡಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.