ಬಾಕಿ ಕೊಡದ ಕಾರ್ಖಾನೆಯ ಸಕ್ಕರೆ ಜಪ್ತಿ: ರಾಮಚಂದ್ರನ್
•30ರೊಳಗೆ ಬಾಕಿ ಕೊಡಿ, ಇಲ್ಲದಿದ್ರೆ ಜು.1ಕ್ಕೆ ಸಕ್ಕರೆ ಜಪ್ತಿಗೆ ಕ್ರಮ •ಜಿಲ್ಲಾಧಿಕಾರಿ ಖಡಕ್ ಸೂಚನೆ
Team Udayavani, Jun 25, 2019, 7:51 AM IST
ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಡಿಸಿ ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಕಬ್ಬಿನ ಬಾಕಿ ಪಾವತಿಸಲು ಜೂ.30 ಗಡುವು ನೀಡಲಾಗಿದ್ದು, ಪಾವತಿಸದಿದ್ದಲ್ಲಿ ಜು.1ರಂದು ಸಕ್ಕರೆ ಜಪ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು.
ನವನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಅವರು ಮಾತನಾಡಿದರು. 2018-19ನೇ ಹಂಗಾಮಿನ ಒಟ್ಟು 15849.18 ಲಕ್ಷ ಬಾಕಿ ಉಳಿದಿದ್ದು, ಈ ಕುರಿತು ಈಗಾಗಲೇ ಜೂ.17ರಂದು ಸಕ್ಕರೆ ಆಯುಕ್ತರ ಆದೇಶದಂತೆ ಕಬ್ಬು ಬಾಕಿ ವಸೂಲಾತಿಗೆ ನೋಟಿಸ್ ನೀಡಲಾಗಿದೆ. ಜೂ.30ರಂದು ಸಂಜೆ 6ಗಂಟೆಯೊಳಗಾಗಿ ಬಾಕಿ ಹಣ ಸಂಪೂರ್ಣ ಪಾವತಿಸಲಿದ್ದಲ್ಲಿ ಜು.1ರಂದು ಸಕ್ಕರೆ ಜಪ್ತಿಗೆ ಕ್ರಮ ಜರುಗಿಸಲಾಗುವುದು ತಿಳಿಸಿದರು.
ನಿರಾಣಿ ಸುಗರ್, ರನ್ನ ಶುಗರ್ ಹಾಗೂ ಸಾಯಿಪ್ರಿಯಾ ಶುಗರ್ ನವರು ಜೂ.30ರೊಳಗೆ ಪಾವತಿಸುವುದಾಗಿ ತಿಳಿಸಿದರೆ, ಉಳಿದ ಸಕ್ಕರೆ ಕಾರ್ಖಾನೆ ಮಾಲಿಕರು ಉತ್ಪಾದನೆ ಸಹಾಯಧನ ಮತ್ತು ರಸ್ತೆ ಸಾರಿಗೆ ವಿನಾಯಿತಿ ಕೋರಿ ಕೇಂದ್ರ ಸರಕಾರಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ವಿನಾಯಿತಿ ಹಣ ಬಂದ ಮೇಲೆ ಪಾವತಿಸಲು ಕಾಲಾವಧಿ ಕೇಳಿ ಮನವಿ ನೀಡುವುದಾಗಿ ತಿಳಿಸಿದರು. ಈಗಾಗಲೇ ಈ ಹಿಂದೆ ಕಾಲಾವಕಾಶ ನೀಡಲಾಗಿದೆ. ಕಾಲಾವಕಾಶ ನೀಡುವ ಪ್ರಶ್ನೆಯೇ ಇಲ್ಲ. ಮೊದಲು ಕೊಡಬೇಕಾದ ರೈತರ ಕಬ್ಬು ಬಾಕಿ ಪಾವತಿಸಿ ನಂತರ ನಿಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಿದರು.
2018-19ನೇ ಸಾಲಿಗೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಯವರು ಒಟ್ಟು 98,84,052.873 (ಎಚ್ಎನ್ಟಿ ಒಳಗೊಂಡು) ಕಬ್ಬು ನುರಿಸಿದ್ದು, ಎಫ್ಆರ್ಪಿ ಅನ್ವಯ 2,89,863.81 ಲಕ್ಷ ರೂ. ಮೊತ್ತ ಪಾವತಿಸಬೇಕಾಗಿದೆ. ಈ ಪೈಕಿ 2,74,014.62 ಲಕ್ಷ ರೂ. ಮೊತ್ತ ಪಾವತಿಸಿದ್ದು, 15,849.18 ಲಕ್ಷ ರೂ.ಮೊತ್ತ ಪಾವತಿಸಲು ಬಾಕಿ ಇರುತ್ತದೆ. ನಾಯನೇಗಲಿಯ ಇಐಡಿ ಪ್ಯಾರಿ (ಇಂಡಿಯಾ ಲಿ) ಶುಗರ್ ನವರು 2018-19ನೇ ಸಾಲಿನ ಬಾಕಿ ಹಣ ಸಂಪೂರ್ಣವಾಗಿ ಪಾವತಿಸಿದ್ದು, ಈ ಕಾರ್ಖಾನೆಯವರನ್ನು ಅಭಿನಂದಿಸುವುದಾಗಿ ತಿಳಿಸಿದರು.
2017-18ನೇ ಸಾಲಿಗೆ ಹೆಚ್ಚುವರಿಯಾಗಿ ಘೋಷಿಸಿರುವ ದರ ಪಾವತಿ ಕುರಿತು ಇಐಡಿ ಪ್ಯಾರಿ ಶುಗರ್ ಹೊರತುಪಡಿಸಿ ಉಳಿದ ಎಲ್ಲ ಕಾರ್ಖಾನೆಯವರು ಪಾವತಿಸಲು ಬಾಕಿ ಉಳಿದಿದೆ. 2016-17ನೇ ಹಂಗಾಮಿಗೆ ಕಾರ್ಖಾನೆಯವರು ಘೋಷಿಸಿರುವ ಹೆಚ್ಚುವರಿ ದರ ಪಾವತಿ ಬಾಕಿ ಉಳಿಸಿಕೊಂಡಿರುವ ನಿರಾಣಿ ಶುಗರ್ನವರು 682.66 ಲಕ್ಷ ರೂ. ಹಾಗೂ ರನ್ನ ಶುಗರ್ 288.89 ಲಕ್ಷ ರೂ. ಹಾಗೂ ಇಐಡಿ ಪ್ಯಾರಿ ಇಂಡಿಯಾ 1387.84 ಲಕ್ಷ ಬಾಕಿ ಉಳಿದಿದ್ದು, ತುರ್ತಾಗಿ ಪಾವತಿಸಲು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಚ್.ಜಯಾ, ಜಮಖಂಡಿ ಉಪ ವಿಭಾಗಾಧಿಕಾರಿ ಮೊಹಮ್ಮದ ಇಕ್ರಮ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ