ಸುಭದ್ರ ಸರ್ಕಾರಕ್ಕಾಗಿ ಬಿಜೆಪಿ ಬೆಂಬಲಿಸಿ: ಮುರುಗೇಶ ನಿರಾಣಿ 

ಕಾಂಗ್ರೆಸ್‌, ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ; ಬೀಳಗಿ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ

Team Udayavani, May 7, 2023, 8:50 AM IST

ಸುಭದ್ರ ಸರ್ಕಾರಕ್ಕಾಗಿ ಬಿಜೆಪಿ ಬೆಂಬಲಿಸಿ: ಮುರುಗೇಶ ನಿರಾಣಿ 

ಬಾಗಲಕೋಟೆ: ದೇಶ ಕಾಂಗ್ರೆಸ್‌ ನೇತೃತ್ವದಲ್ಲಿದ್ದಾಗ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿಯೇ ಇತ್ತು. ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಹೇಳಿದರು.

ರೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಡಬಲ್‌ ಎಂಜಿನ್‌ ಸರ್ಕಾರದಿಂದ ದಶಕಗಳಿಂದ ನನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆತಿದೆ. 2024ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ನೀವು ಬಿಜೆಪಿಗೆ ಆಶೀರ್ವದಿಸಿದರೆ ಮುಂದಿನ 5 ವರ್ಷ
ಕರ್ನಾಟಕದಲ್ಲಿ ಸುಭದ್ರ ಡಬಲ್‌ ಇಂಜಿನ್‌ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಇದರಿಂದ ನಮ್ಮ ಕ್ಷೇತ್ರ, ನಮ್ಮ
ರಾಜ್ಯ ಹಾಗೂ ದೇಶ ಎಲ್ಲವೂ ಸುಭಿಕ್ಷವಾಗಿರುತ್ತದೆ. ಕಾಂಗ್ರೆಸ್‌, ಜೆಡಿಎಸ್‌ ಎರಡು ಒಂದೇ ನಾಣ್ಯದ ಎರಡು ಮುಖಗಳು. ಹೀಗಾಗಿ ಅಭಿವೃದ್ದಿ ಎನ್ನುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಬೀಳಗಿ ಮತಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯಗಳಾಗಿವೆ. ಜನತೆಯ ಅವಶ್ಯಕತೆ ಗಳನ್ನು ಅರಿತು ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ ಅಭ್ಯರ್ಥಿ ಜೆ.ಟಿ. ಪಾಟೀಲ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸಮಾಡುತ್ತಿದ್ದಾರೆ. ಜನತೆಗೆ ಎಲ್ಲವೂ ಅರ್ಥವಾಗುತ್ತದೆ. ಬೀಳಗಿ ಮತಕ್ಷೇತ್ರದ ಜನತೆ ವಿಕಾಸದ ಹಾದಿಯನ್ನು ಬಯಸುತ್ತಿದ್ದಾರೆ. ವಿಕಾಸ ಬಯಸುವವರು ಎಂದಿಗೂ ಕಾಂಗ್ರೆಸ್‌ ಆಯ್ಕೆ ಮಾಡಿಕೊಳ್ಳುವುದಿಲ್ಲ. ಸರ್ವಾಂಗೀಣ ಅಭಿವೃದ್ಧಿಗೆ ಮತ್ತೂಮ್ಮೆ ನನಗೆ ಆಶಿರ್ವದಿಸಿ ಎಂದರು.

ಶಿವಾನಂದ ನಿಂಗಂನೂರ, ಮಲ್ಲಿಕಾರ್ಜುನ ಅಂಗಡಿ, ಈರಣ್ಣ ಗಿಡ್ಡಪ್ಪಗೋಳ, ಮಲ್ಲಪ್ಪ ಎಮ್‌. ಶಂಭೋಜಿ, ಬಸಲಿಂಗಪ್ಪ ನಿಂಗನೂರ, ಗೋವಿಂದಪ್ಪ ಬಿಳಂಡಿ, ಈರಪ್ಪ ಕಂಬಾರ, ನಿಜಲಿಂಗಪ್ಪ ತಳವಾರ, ಚೆನ್ನಯ್ಯ ಮಠ, ನಾಗನಗೌಡ ಪಾಟೀಲ, ಸಂಗಪ್ಪ ಕೆಂಪಗೌಡ್ರ, ಕೂಡ್ಲೆàಪ್ಪ ಪಾಟೀಲ, ಶಿವಪ್ಪ ತಳವಾರ, ಚೆನ್ನಪ್ಪ ಮುದೂರ, ಭೀಮಣ್ಣ ಕುಬಕಡ್ಡಿ, ಮೈಬುಸಾಬ ಜಮಾದಾರ, ದುಂಡಪ್ಪ ತಳವಾರ, ಮಹದೇವಪ್ಪ ಪಟ್ಟಣಶೆಟ್ಟಿ, ಮಲ್ಲಪ್ಪ ಕಿತ್ತೂರ, ಶಿವಾನಂದ ಕೆಂಪಗೌಡ್ರ ಉಪಸ್ಥಿತರಿದ್ದರು.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ: ಬೀರಕಬ್ಬಿ ಗ್ರಾಮದ ವಿಕಲಚೇತನರಾದ ಬಾಲಪ್ಪ ಮಾದರ, ಮಲ್ಲಪ್ಪ ಕೆಠಾರಿ, ಲಕಕ್ಷ್ಮಣ ಪೂಜಾರಿ, ಭೀಮಣ್ಣ ಚಲಗೊಂಡ, ಹಣಮಂತ ಮಾದರ, ಮಲ್ಲಪ್ಪ ಮೆಳ್ಳಿಗೇರಿ, ಉಮೇಶ ಜಾಲಿ, ವಿಠuಲ ಯಲ್ಲಿಗುತ್ತಿ, ನಾಗಪ್ಪ ಶಿರೂರ, ಅಶೋಕ ವೀರಾಪುರ, ಅರ್ಜುನ ದಾಸರ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.