ದಲಿತರ ಅಭಿವೃದ್ಧಿಗೆ ಸಹಕಾರ ನೀಡಿ
Team Udayavani, Apr 6, 2022, 4:26 PM IST
ಗುಳೇದಗುಡ್ಡ: ಯುವಕರಿಗೆ ಡಾ| ಬಾಬು ಜಗಜೀವನರಾಂ ಸ್ಫೂರ್ತಿಯಾಗಿದ್ದಾರೆ ಎಂದು ಉಪನ್ಯಾಸಕ ಡಾ| ರಂಗನಾಥ ಮಾದರ ಹೇಳಿದರು.
ಪಟ್ಟಣದಲ್ಲಿ ತಾಲೂಕು ಆಡಳಿತ ಗುಳೇದಗುಡ್ಡ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಾದಾಮಿ ಸಂಯುಕ್ತ ಆಶ್ರಯದಲ್ಲಿ ಡಾ| ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ದಲಿತರ ಕಡೆಗಣನೆ ಸಲ್ಲದು. ದಲಿತ ಸಮಾಜದ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಗಣ್ಯರು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ತಹಶೀಲ್ದಾರ್ ಆರ್.ಎಂ. ಬೊಮ್ಮನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡರಾದ ವಿ.ಆರ್. ಚವ್ಹಾಣ, ಯಮನಪ್ಪ ದಳಪತಿ, ಪರುಶರಾಮ ಮಾದರ, ರೆಡ್ಡಿ ನಡುವಿನಮನಿ, ವೈ.ಆರ್. ಹೆಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಂಜಯ ಮಬ್ರೂಮಕರ್, ಶ್ರೀನಿವಾಸ ಚಂದುಕರ, ರಂಜಾನ್ ನದಾಫ್, ಸುಜಾತಾ ಹಳ್ಳಿ, ಉಪತಹಶೀಲ್ದಾರ್ ವೀರೇಶ ಬಡಿಗೇರ, ಮಲ್ಲಿಕಾರ್ಜುನ ತುಪ್ಪದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ