ಕೆಲೂರ- ಶಿವಗಂಗಾ ಶ್ರೀಗಳಿಗೆ ಸಾತ್ವಿಕ ಪ್ರಶಸ್ತಿ
Team Udayavani, Sep 28, 2021, 6:36 PM IST
ಅಮೀನಗಡ: ಖ್ಯಾತ ಸಾಹಿತಿ ಲಿಂ|| ಶ್ರೀ ಟಿ.ಆರ್. ಮಹದೇವಯ್ಯನವರ ಹೆಸರಿನಲ್ಲಿ ಪ್ರತಿವರ್ಷ ಕೊಡುವ ಪ್ರಸ್ತುತ 2021 ನೇ ಸಾಲಿನ ಸಾತ್ವಿಕ ಪ್ರಶಸ್ತಿಗೆ ಕೆಲೂರ-ಶಿವಗಂಗಾ ಕ್ಷೇತ್ರದ ಡಾ. ಮಲಯ ಶಾಂತಮುನಿ ಶಿವಾಚಾರ್ಯ ಶ್ರೀಗಳು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 20 ಸಾವಿರ ನಗದು ಹಾಗೂ ಸ್ಮರಣೆ ಫಲಕವನ್ನು ಒಳಗೊಂಡಿದೆ. ನ.13 ರಂದು ಶ್ರೀಮೇಲಣಗವಿ ಮಠದಲ್ಲಿ ನಡೆಯುವ ಕಾರ್ತೀಕ ದೀಪೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರುವುದು.
ಸಮಾರಂಭದ ಸಾನಿಧ್ಯವನ್ನು ಮೌನ ತಪಸ್ವಿ ಜಡೆಯ ಶಾಂತ ಲಿಂಗೇಶ್ವರ ಸ್ವಾಮಿಗಳು ವಹಿಸಲಿದ್ದುˌ ಬೆಂಗಳೂರಿನ ವಿಭೂತಿಪುರ ಮಠದ ಶ್ರೀಗಳು.ಶಿವಗಂಗಾ ಕ್ಷೇತ್ರದ ಹೊನ್ನಮ್ಮಗವಿ ಮಠದ ಶ್ರೀಗಳ ಸಮ್ಮುಖದಲ್ಲಿ ಸಮಾರಂಭ ನೆರವೇರಲಿದೆ. ನಾಡಿನ ಖ್ಯಾತ ಉಪನ್ಯಾಸಕರಾದ ಗುರುರಾಜ ಖರ್ಜಗಿ ಅವರು ಉಪನ್ಯಾಸ ನೀಡಲಿದ್ದಾರೆ. ಸಮಾಜದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಸನ್ಮಾನಿಸಲಾಗುವುದು. ನಾಡಿನ ಗಣ್ಯಾತಿಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯ್ಕೆ ಸಮಿತಿಯ ಬೆಂಗಳೂರಿನ ಬಸವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಹೆಚ್.ವಿ.ರಾಜಣ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ