ಕಚೇರಿ ಆವರಣದಲ್ಲೇ ದುರ್ವಾಸನೆ !

ಉಪಯೋಗಕ್ಕೆ ಬಾರದ ಬೀಳಗಿ ತಹಶೀಲ್ದಾರ್‌ ಕಚೇರಿ ಶೌಚಾಲಯ,ಗಮನಹರಿಸದ ಅಧಿಕಾರಿಗಳು

Team Udayavani, Mar 6, 2021, 6:22 PM IST

ಕಚೇರಿ ಆವರಣದಲ್ಲೇ ದುರ್ವಾಸನೆ !

ಬೀಳಗಿ: ತಾಲೂಕಿನ ದಂಡಾಧಿಕಾರಿಗಳ ಕಚೇರಿಯೂ ಆಗಿರುವ ಪಟ್ಟಣದ ತಹಶೀಲ್ದಾರ್‌ ಕಚೇರಿಯ ಶೌಚಾಲಯ ಗಬ್ಬೆದ್ದು ಹೋಗಿದ್ದು, ಜನರ ಉಪಯೋಗಕ್ಕೆ ಬಾರದಂತಾಗಿದೆ.

ದಂಡಾಧಿಕಾರಿಗಳ ಕಚೇರಿಗೆ ಹೋದರೆ,ದುರ್ವಾಸನೆಯ ದಂಡ ಜನರಿಗೆಎದುರಾಗಿದೆ ಎಂಬ ಅಸಮಾಧಾನ ಕೇಳಿ ಬರುತ್ತಿದೆ.

ತಹಶೀಲ್ದಾರ್‌ ಕಚೇರಿ ಹಿಂಬದಿ ಇರುವ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲ. ಪೂರ್ಣಗಬ್ಬೆದ್ದು ಹೋಗಿದ್ದು, ಕಸಗಡ್ಡಿಯಿಂದ ತುಂಬಿಕೊಂಡಿದೆ. ಹೀಗಾಗಿ ಜನರು ಇಲ್ಲಿನ ಶೌಚಾಲಯಬಳಸದೇ, ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡುವಂತಾಗಿದೆ.

ತಹಶೀಲ್ದಾರ್‌ ಕಚೇರಿಗೆ ನಿತ್ಯವೂ ಹಲವು ಕೆಲಸದ ನಿಮಿತ್ತ ಸಾವಿರಾರು ಜನರು ತಹಶೀಲ್ದಾರ್‌ ಕಚೇರಿಗೆಬರುತ್ತಾರೆ. ಅವರಿಗೆ ಕುಡಿವ ನೀರು, ಶೌಚಾಲಯ,ನೆರಳಿನ ವ್ಯವಸ್ಥೆ ಸಹಿತ ಸೌಲಭ್ಯ ಕಲ್ಪಿಸಬೇಕಿರುವುದು ತಾಲೂಕು ಆಡಳಿತದ ಜವಾಬ್ದಾರಿ. ನಾಗರಿಕ ಹಕ್ಕು ಪೂರೈಸಲೇಬೇಕು ಎಂಬುದು ನಿಯಮ ಕೂಡ.ಇಂತಹ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಕಚೇರಿ ಸುತ್ತ ಮಲೀನ: ತಹಶೀಲ್ದಾರ್‌ ಕಚೇರಿಯ ಸುತ್ತ ಮೂತ್ರ ವಿಸರ್ಜನೆಯಿಂದ ಹದಗೆಟ್ಟು, ದುರ್ಗಂಧ ಬೀರುತ್ತಿದೆ. ಕಚೇರಿಗೆ ತಮ್ಮ ಕೆಲಸಕ್ಕೆ ಬಂದ ಜನತೆ ಮೂತ್ರ ವಿಸರ್ಜನೆಗೆ ಸಾರ್ವಜನಿಕ ಶೌಚಾಲಯ ಇದ್ದರುಕೂಡಾ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.ಮೂಗು ಮುಚ್ಚಿಕೊಂಡೆ ಶೌಚ ಮಾಡುವ ಪರಿಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು. ಶೌಚಾಲಯದ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಎಂದು ಜನರ ಒತ್ತಾಯವಾಗಿದೆ.

ತಾಲೂಕಿಗೆ ತಹಶೀಲ್ದಾರ್‌ ಕಚೇರಿಯೇ ಮುಖ್ಯ. ಈ ಕಚೇರಿಗೆ ತಾಲೂಕಿನ ಎಲ್ಲಹಳ್ಳಿಯ ಜನರೂ ನಿತ್ಯ ಬರುತ್ತಾರೆ. ಇಲ್ಲಿ ಜನರಿಗೆ ಕನಿಷ್ಠ ಶೌಚಾಲಯಕ್ಕೆ ಹೋಗಲೂ ಸರಿಯಾದವ್ಯವಸ್ಥೆ ಇಲ್ಲ. ಲಕ್ಷಾಂತರ ಖರ್ಚು ಮಾಡಿ, ನಿರ್ಮಿಸಿದ ಶೌಚಾಲಯ ಗಬ್ಬೆದ್ದು ಹೋಗಿದೆ.ಶೌಚಾಲಯ ನಿರ್ವಹಣೆಗೆ ಅನುದಾನ ಇದ್ದರೂಬಳಕೆ ಮಾಡಿಲ್ಲವೋ, ಬಳಕೆ ಮಾಡಿದ್ದಾಗಿಖರ್ಚು ಹಾಕಿದ್ದಾರೋ ಗೊತ್ತಿಲ್ಲ. ಜನರ ನೈಸರ್ಗಿಕಕ್ರಿಯೆಗೂ ತೊಂದರೆಯಾಗುವ ಸ್ಥಿತಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿದೆ. ಇದನ್ನು ಕೂಡಲೇ ಸರಿಪಡಿಸಬೇಕು. -ಶ್ರವಣಕುಮಾರ ಸುರಗಿಮಠ, ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ್ದ ವ್ಯಕಿ

ಶೌಚಾಲಯ ಅವ್ಯವಸ್ಥೆ ಕುರಿತು ಗಮನಕ್ಕೆ ಬಂದಿರಲಿಲ್ಲ. ಈ ಕೂಡಲೆಶೌಚಾಲಯಕ್ಕೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಿಸಾರ್ವಜನರ ಉಪಯೋಗಕ್ಕೆ ಅನುಕೂಲ ಮಾಡಲಾಗುವುದು. -ಬಿ.ಪಿ. ಅಜೂರ, ತಹಶೀಲ್ದಾರ್‌, ಬೀಳಗಿ

 

-ಚೇತನ ಆರ್‌. ಕಣವಿ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.