ರಂಗೋಲಿ ಕಲೆ ಉಳಿಸಿ-ಬೆಳೆಸಲು ಆಸಕ್ತಿ ವಹಿಸಿ; ಪರಡ್ಡಿ

ಇಂದು ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ

Team Udayavani, Jan 23, 2023, 1:20 PM IST

ರಂಗೋಲಿ ಕಲೆ ಉಳಿಸಿ-ಬೆಳೆಸಲು ಆಸಕ್ತಿ ವಹಿಸಿ; ಪರಡ್ಡಿ

ಶಿರೂರ: ರಂಗೋಲಿ ನಮ್ಮ ಸಂಸ್ಕೃತಿ, ಸಂಪ್ರದಾಯದ ಸಂಕೇತವಾಗಿದ್ದು, ಮಹಿಳೆಯರು ರಂಗೋಲಿ ಕಲೆ ನಶಿಸಿ ಹೋಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಗುರುಮಾತೆ ಲೋಕೇಶ್ವರಿ ಪರಡ್ಡಿ ಹೇಳಿದರು.

ಬೆನಕಟ್ಟಿ ಗ್ರಾಮದಲ್ಲಿ ಡಾ| ರಾಧಾಕೃಷ್ಣನ್‌ ಶಿಕ್ಷಕರ ಬಳಗ ಮಹಾಯೋಗಿ ವೇಮನರ ಜಯಂತಿಯ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ರಂಗೋಲಿ ಬಿಡಿಸುವ ಕಲೆ ಕರಗತ ಮಾಡಿಕೊಳ್ಳಬೇಕು ಎಂದರು. ಇತ್ತಿಚಿನ ದಿನಗಳಲ್ಲಿ ಬೆಳಗಿನ ಜಾವ ಮನೆಗಳ ಮುಂದೆ ರಂಗೋಲಿ ಚಿತ್ತಾರ ಕಾಣಿಸುತ್ತಿಲ್ಲ. ಇದು ನಮ್ಮ ಸಂಸ್ಕೃತಿ ನಾವು ಮರೆಯುತ್ತಿದ್ದೇವೆ ಎನ್ನುವ ಸಂಕೇತ ತೋರುತ್ತಿದೆ. ಇದು ಆಗಬಾರದು. ಪ್ರತಿಯೊಬ್ಬ ತಾಯಂದಿರು ತಮ್ಮ ಹೆಣ್ಣು ಮಕ್ಕಳಿಗೆ ರಂಗೋಲಿ ಕಲೆಯನ್ನು ಕಲಿಸಿ ಸಂಸ್ಕೃತಿಯ ರಕ್ಷಣೆಗೆ ಮುಂದಾಗಬೇಕು ಎಂದರು.

ಪತ್ರಕರ್ತ ಪ್ರಕಾಶ ಬಾಳಕ್ಕನವರ ಮಾತನಾಡಿ, ಇಂದು ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದ್ದು, ಯಾವುದರಲ್ಲೂ ಆಸಕ್ತಿ ತಳೆಯುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಪ್ರತಿಭೆಯೇ ಕಾಣುತ್ತಿಲ್ಲ. ಈ ಬಗ್ಗೆ ಚಿಂತನೆ ಅಗತ್ಯವಾಗಿದೆ. ರಂಗೋಲಿ ಕಲೆಯನ್ನು ಮರೆತರೆ ನಮ್ಮ ಸಂಸ್ಕೃತಿಯನ್ನೇ ಮರೆತಂತೆ ಎಂದರು.

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಪಂಡಿತ ಮಾಚಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ವೇಮರಡ್ಡಿ ಯಡಹಳ್ಳಿ, ಹಿರಿಯರಾದ ಹನಮಪ್ಪ ಬೆಣ್ಣೂರ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಶ್ವೇತಾ ಯಡಹಳ್ಳಿ (ಪಿಯುಸಿ), ಶ್ರೀರಾಮ ದಾಸಪ್ಪನವರ(ಎಸ್‌ ಎಸ್‌ಎಲ್‌ಸಿ) ಮತ್ತು ಅಮೃತಾ ಅಂಗಡಿ (ಏಳನೇ ತರಗತಿ)ಅವರನ್ನು ಸನ್ಮಾನಿಸಿ ಪುರಸ್ಕಾರ ನೀಡಲಾಯಿತು. ಸುರೇಶ ಮನಗೂಳಿ ಸ್ವಾಗತಿಸಿದರು. ಪಾಂಡು ಸನ್ನಪ್ಪನವರ ನಿರೂಪಿಸಿದರು. ಅಶೋಕ ಅಂಗಡಿ ವಂದಿಸಿದರು. ಸುರೇಶ ಚಿತ್ತರಗಿ, ಮಾಲತೇಶ ಪಾಟೀಲ, ವೆಂಕಟೇಶ ಬಿರಾದಾರ ಪಾಟೀಲ ಇದ್ದರು.

ರಂಗೋಲಿ ಫಲಿತಾಂಶ:
ಮಹಿಳೆಯರಿಗಾಗಿ ನಡೆದ ಮುಕ್ತ ರಂಗೋಲಿ ಸ್ಪರ್ಧೆಯಲ್ಲಿ ಹುಲ್ಲಿಕೇರಿ ಗ್ರಾಮದ ಪದ್ಮಾವತಿ ಪೂಜಾರ ಪ್ರಥಮ, ಪರೂತಿಯ ಪ್ರೇಮಾ ಗಾಜಿ ದ್ವಿತಿಯ, ಅಮೀನಗಡದ ಲಕ್ಷ್ಮೀ ಆರ್‌ .ವಿ ತೃತೀಯ ಹಾಗೂ ಬೆನಕಟ್ಟಿಯ ಅಕ್ಷತಾ ಮಾದರ ಚತುರ್ಥ ಬಹುಮಾನ ಪಡೆದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.