ತೇರದಾಳ: ಗ್ರಾಪಂಗೆ ಬೀಗ ಹಾಕಿ ಸದಸ್ಯರ ಪ್ರತಿಭಟನೆ
Team Udayavani, Feb 9, 2024, 5:30 PM IST
ಉದಯವಾಣಿ ಸಮಾಚಾರ
ತೇರದಾಳ: ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕಾರಿಗಳಿಂದಲೇ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿಯ
ಬಿಜೆಪಿ-ಕಾಂಗ್ರೆಸ್ ಸದಸ್ಯರು ಹನಗಂಡಿ ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟಿಸಿದರು.
ಕಳೆದ ಆರು ತಿಂಗಳಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಕೆಲಸಗಳಿಗೆ ಅನುಮತಿ ನೀಡುತ್ತಿಲ್ಲ. ಶಾಲೆಗಳಿಗೆ ಕಂಪೌಂಡ್, ಶೆಡ್, ಕೃಷಿ ಹೊಂಡ, ಕೆರೆ ಅಭಿವೃದ್ಧಿ, ಬಾಂದಾರ ಸೇರಿದಂತೆ ಹಲವು ಕೆಲಸಗಳಿಗೆ ತಡೆ ಹಿಡಿಯಲಾಗಿದೆ. ಹೀಗಾದರೆ ಗ್ರಾಮಸ್ಥರಿಗೆ ಏನು ಉತ್ತರ ನೀಡಬೇಕೆಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಸ್ವಲ್ಪ ಸಮಯದ ನಂತರ ತಾಪಂ ಎಡಿ ಮುನ್ನೊಳಿ ಹಾಗೂ ಪಿಡಿಒ ರಾವಳ ಆಗಮಿಸಿ, ಕಚೇರಿ ಬೀಗ ತೆಗೆಯಿರಿ. ಒಳಗೆ ಕುಳಿತು ಮಾತನಾಡೋಣ ಎಂದು ಹೇಳಿದರು. ಅದಕ್ಕೆ ಒಪ್ಪದ ಸದಸ್ಯರು, ಎಡಿ ಹಾಗೂ ಪಿಡಿಒ ಅವರನ್ನು ತರಾಟೆಗೆ ತಗೆದುಕೊಂಡು ನಿಮ್ಮಿಂದಲೇ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತಿವೆ. ಸದಸ್ಯರುಗಳ ಕುರಿತು ಹಗುರವಾಗಿ ಮಾತನಾಡಿದ್ದಿರಿ. ಸ್ಥಳಕ್ಕೆ
ತಾಪಂ ಇಒ ಬರುವವರೆಗೆ ಬೀಗ ತಗೆಯುವುದಿಲ್ಲ ಎಂದು ಹಠ ಹಿಡಿದು ಕುಳಿತರು.
ಹನಗಂಡಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ತಾಪಂ ಇಒ ಸಿದ್ದಪ್ಪ ಪಟ್ಟಿಹಾಳ, ನೆಲದ ಮೇಲೆ ಕುಳಿತಿದ್ದ ಸದಸ್ಯರ ಕೈ ಹಿಡಿದು ಒಳಗೆ ಕುಳಿತು ಮಾತನಾಡೋಣ ಬನ್ನಿ ಎಂದು ವಿನಂತಿಸಿದರು. ಆದರೆ ಸದಸ್ಯರು ಅದಕ್ಕೆ ಒಪ್ಪದೆ ಇಲ್ಲಿಯೇ ಮಾತನಾಡಿ ಎಂದು ಹಠ ಹಿಡಿದರು. ಕೊನೆಗೆ ಇಒ ಅವರೇ ಸದಸ್ಯರುಗಳ ಜತೆಗೆ ಕುಳಿತರು.
ಯಾವ ಕಾರಣಕ್ಕೆ ಕಾಮಗಾರಿ ತಡೆ ಹಿಡಿಯಲಾಗಿದೆ ಎಂದು ಸದಸ್ಯರು, ಇಒ ಅವರನ್ನು ಪ್ರಶ್ನಿಸಿದರು. ಇಒ ಪಟ್ಟಿಹಾಳ
ಮಾತನಾಡಿ, ಕಾಮಗಾರಿ ಶೀಘ್ರ ಆರಂಭಿಸುವುದರ ಜತೆಗೆ ಪಿಡಿಒ ಅವರನ್ನು ಬದಲಾಯಿಸುವುದಾಗಿ ಭರವಸೆ ನೀಡಿದರು. ಸದಸ್ಯರಾದ ಚಂದ್ರಶೇಖರ ಗುಬಚಿ, ಪ್ರಕಾಶ ನಾರವ್ವಗೋಳ, ಕುಮಾರ ಕಾಂಬಳೆ, ನಬೀಸಾಬ ಶಿಲ್ಲೇದಾರ, ಹಸನ್ ಮೌಲಾನಾ ಪಕಾಲಿ, ಮಹಾವೀರ ಬಿದರಿ ಕಮಾಲ್ ರಾಮದುರ್ಗ, ಅನಿಲ ಗುಬಚಿ, ಕರೆಪ್ಪ ದಳವಾಯಿ, ಅಲ್ಲಾಬಕ್ಷ ಅಲಾಸ, ಸಿದ್ದಪ್ಪ ಸೋರಗಾಂವಿ, ಮಂಜುನಾಥ ಕೊಡಗನೂರ, ಪರುಶರಾಮ ಮಾದರ, ರಸೂಲ ಬಾಗಿ, ವಿಠಲ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ